ಮಲ್ಟಿಪ್ಲೆಕ್ಸ್ ಗಳಲ್ಲಿ ವಸೂಲಿ: ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಬೆಂಗಳೂರು, ಸೆಪ್ಟೆಂಬರ್ 24: ಇತ್ತೀಚೆಗಷ್ಟೇ ಮುಂಬೈನ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ತಿಂಡಿಗಳನ್ನು ತೆಗೆದುಕೊಂಡು ಹೋಗಲು ಮುಂಬೈ ಹೈಕೋರ್ಟ್ ಆದೇಶ ಕೊಟ್ಟಿತ್ತಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಮಾರಾಟವಾಗುವ ತಿಂಡಿತಿನಿಸುಗಳ ಮೇಲೆ ಯಾವುದೇ ರೀತಿಯ ಹೆಚ್ಚಿನ ದರ ವಿಧಿಸದಂತೆ ಆದೇಶ ನೀಡಿತ್ತು.
ಇದರ ಬೆನ್ನಲ್ಲೇ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಮನಬಂದಂತೆ ಹೇರುವ ದರದ ಮೇಲೆ ನಿಗಾ ಇಡುವಂತೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳು ಸೇರಿದಂತೆ ಎಲ್ಲಾ ಸಿನಿಮಾಗಳಿಗೆ ಪ್ರವೇಶದ ದರದ ಮೇಲೆ ಈಗಾಗಲೇ ರಾಜ್ಯ ಸರ್ಕಾರ ಹಿಡಿತ ಸಾಧಿಸಿ ಆದೇಶ ಹೊರಡಿಸಿದ್ದರೂ ಪ್ರಯೋಜನಕ್ಕೆ ಬಂದಿಲ್ಲ.
ಇದೀಗ 10 ಪಟ್ಟು ಹೆಚ್ಚಿನ ದರ ವಿಧಿಸಿ ತಿಂಡಿತಿನಿಸುಗಳ ಮೇಲೆ ಹಣ ವಸೂಲಿ ಮಾಡುವ ಮಲ್ಟಿಪ್ಲೆಕ್ಸ್ ಗಳಿಗೆ ಮೂಗುದಾರ ಹಾಕುವಂತೆ ನಾಗರಿಕರೊಬ್ಬರು ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ.

ಗರಿಷ್ಠ ಮಾರಾಟ ಬೆಲೆಗಿಂತ ಹತ್ತು ಪಟ್ಟಿನ ವರೆಗೂ ಆಹಾರ ಪದಾರ್ಥಗಳಿಗೆ ದರ ನಿಗದಿಪಡಿಸಲಾಗಿದೆ. ಗ್ರಾಹಕರು ಹೊರಗಿನಿಂದ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಹೊರಗಿನ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಬಾರದು ಎಂದು ಯಾವ ಕಾನೂನಿನಲ್ಲೂ ಹೇಳಿಲ್ಲ. ಹೀಗಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಆಹಾರ ಪದಾರ್ಥಗಳ ದರವನ್ನು ಕಡಿಮೆ ಮಾಡುವ ಸಂಬಂಧ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಈ ವಿಚಾರದಲ್ಲಿ ಕ್ರಮ ಜರುಗಿಸಲು ಕಾನೂನಿನಲ್ಲಿ ಜಿಲ್ಲಾಧಿಕಾರಿಗೆ ಇರುವ ಅಧಿಕಾರವನ್ನು ವಿವರಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ, ಅ.10ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications