ಮಲ್ಟಿಪ್ಲೆಕ್ಸ್ ಗಳಲ್ಲಿ ವಸೂಲಿ: ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಬೆಂಗಳೂರು, ಸೆಪ್ಟೆಂಬರ್ 24: ಇತ್ತೀಚೆಗಷ್ಟೇ ಮುಂಬೈನ ಮಲ್ಟಿಪ್ಲೆಕ್ಸ್ ಗಳಲ್ಲಿ ಹೊರಗಿನ ತಿಂಡಿಗಳನ್ನು ತೆಗೆದುಕೊಂಡು ಹೋಗಲು ಮುಂಬೈ ಹೈಕೋರ್ಟ್ ಆದೇಶ ಕೊಟ್ಟಿತ್ತಲ್ಲದೇ ಮಲ್ಟಿಪ್ಲೆಕ್ಸ್ ಗಳಲ್ಲಿ ಮಾರಾಟವಾಗುವ ತಿಂಡಿತಿನಿಸುಗಳ ಮೇಲೆ ಯಾವುದೇ ರೀತಿಯ ಹೆಚ್ಚಿನ ದರ ವಿಧಿಸದಂತೆ ಆದೇಶ ನೀಡಿತ್ತು.
ಇದರ ಬೆನ್ನಲ್ಲೇ ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಮನಬಂದಂತೆ ಹೇರುವ ದರದ ಮೇಲೆ ನಿಗಾ ಇಡುವಂತೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳು ಸೇರಿದಂತೆ ಎಲ್ಲಾ ಸಿನಿಮಾಗಳಿಗೆ ಪ್ರವೇಶದ ದರದ ಮೇಲೆ ಈಗಾಗಲೇ ರಾಜ್ಯ ಸರ್ಕಾರ ಹಿಡಿತ ಸಾಧಿಸಿ ಆದೇಶ ಹೊರಡಿಸಿದ್ದರೂ ಪ್ರಯೋಜನಕ್ಕೆ ಬಂದಿಲ್ಲ.
ಇದೀಗ 10 ಪಟ್ಟು ಹೆಚ್ಚಿನ ದರ ವಿಧಿಸಿ ತಿಂಡಿತಿನಿಸುಗಳ ಮೇಲೆ ಹಣ ವಸೂಲಿ ಮಾಡುವ ಮಲ್ಟಿಪ್ಲೆಕ್ಸ್ ಗಳಿಗೆ ಮೂಗುದಾರ ಹಾಕುವಂತೆ ನಾಗರಿಕರೊಬ್ಬರು ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ.

ಗರಿಷ್ಠ ಮಾರಾಟ ಬೆಲೆಗಿಂತ ಹತ್ತು ಪಟ್ಟಿನ ವರೆಗೂ ಆಹಾರ ಪದಾರ್ಥಗಳಿಗೆ ದರ ನಿಗದಿಪಡಿಸಲಾಗಿದೆ. ಗ್ರಾಹಕರು ಹೊರಗಿನಿಂದ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಹೊರಗಿನ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಬಾರದು ಎಂದು ಯಾವ ಕಾನೂನಿನಲ್ಲೂ ಹೇಳಿಲ್ಲ. ಹೀಗಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಆಹಾರ ಪದಾರ್ಥಗಳ ದರವನ್ನು ಕಡಿಮೆ ಮಾಡುವ ಸಂಬಂಧ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಈ ವಿಚಾರದಲ್ಲಿ ಕ್ರಮ ಜರುಗಿಸಲು ಕಾನೂನಿನಲ್ಲಿ ಜಿಲ್ಲಾಧಿಕಾರಿಗೆ ಇರುವ ಅಧಿಕಾರವನ್ನು ವಿವರಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿ, ಅ.10ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
ಕಣ್ಣು ಸಮಸ್ಯೆಗಳು ಹೆಚ್ಚುತ್ತಿವೆಯೇ? ಈ ಆಹಾರಗಳು ನಿಮ್ಮ ದೃಷ್ಟಿಯನ್ನು ರಕ್ಷಿಸುತ್ತವೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications