ಲೋಕಸಭೆ ಉಪಚುನಾವಣೆ ರದ್ದು ಗೊಳಿಸಲು ಹೈಕೋರ್ಟ್ಗೆ ಅರ್ಜಿ
ಬೆಂಗಳೂರು, ಅಕ್ಟೋಬರ್ 09: ಮಂಡ್ಯ, ಬಳ್ಳಾರಿ, ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯುತ್ತಿರುವ ಲೋಕಸಭೆ ಉಪಚುನಾವಣೆಯನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ತುಮಕೂರಿನ ರಮೇಶ್ ನಾಯಕ್ ಎಂಬುವರು ಇಂದು ಹೈಕೋರ್ಟ್ಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಸಲ್ಲಿಸಿದ್ದು ವಿಚಾರಣೆ ನಡೆಯಲಿದೆ. ಲೋಕಸಭೆ ಉಪಚುನಾವಣೆಯಿಂದ ಸಾರ್ವಜನಿಕ ಹಣ ಪೋಲಾಗುತ್ತದೆ ಎಂಬುದು ಅರ್ಜಿದಾರರ ದೂರು.
ಲೋಕಸಭೆ ಮುಖ್ಯ ಚುನಾವಣೆಗೆ ಇನ್ನು ಆರು ತಿಂಗಳು ಸಹ ಇಲ್ಲದೇ ಇರುವ ಸಮಯದಲ್ಲಿ ಲೋಕಸಭೆ ಉಪಚುನಾವಣೆಯಲ್ಲಿ ನಡೆಸಲಾಗುತ್ತದೆ. ಚುನಾವಣೆಯಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಆರು ತಿಂಗಳು ಸಹ ಕಾಲಾವಕಾಶ ಇರುವುದಿಲ್ಲ ಹಾಗಾಗಿ ಈ ಚುನಾವಣೆ ಕೇವಲ ಸಾರ್ವಜನಿಕ ಹಣದ ಪೋಲಷ್ಟೆ ಎಂದು ಅರ್ಜಿದಾರರು ಹೇಳಿದ್ದಾರೆ.

ನವೆಂಬರ್ 3ರಂದು ಮಂಡ್ಯ, ಶಿವಮೊಗ್ಗ, ಬಳ್ಳಾರಿ ಕ್ಷೇತ್ರಗಳ ಲೋಕಸಭೆ ಉಪಚುನಾವಣೆ ನಡೆಯಲಿದೆ. ಇದೇ ದಿನ ರಾಮನಗರ ಮತ್ತು ಜಮಖಂಡಿ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆ ಸಹ ನಡೆಯಲಿದೆ.
ಉಪಚುನಾವಣೆ ಮೂಲಕ ಆಯ್ಕೆ ಆಗುವ ಮೂರು ಜನ ಸಂಸದರಿಗೆ ಆರು ತಿಂಗಳು ಸಹ ಸಮಯಾವಕಾಶ ಇರುವುದಿಲ್ಲ. ಏಪ್ರಿಲ್ ಅಷ್ಟರಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗುತ್ತದೆ. ಹಾಗಾಗಿ ಲೋಕಸಭೆ ಉಪಚುನಾವಣೆಯಲ್ಲಿ ಬಹಳಷ್ಟು ಜನ ವಿರೋಧಿಸುತ್ತಿದ್ದಾರೆ.
ಲೋಕಸಭೆ ಉಪಚುನಾವಣೆಯಲ್ಲಿ ರದ್ದು ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಹ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications