ಇ-ಮೇಲ್ ಮೂಲಕ ಮತದಾನ ಮಾಡಲು ಅವಕಾಶ ಕೋರಿ ಕೋರ್ಟ್ಗೆ ಅರ್ಜಿ
ಬೆಂಗಳೂರು, ಮೇ 02: ಇ-ಮೇಲ್ ಮೂಲಕ ಮತದಾನ ಮಾಡಲು ಅವಕಾಶ ಕೊಡಬೇಕು ಎಂದು ವಕೀಲರೊಬ್ಬರು ಹೈಕೊರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಜಯನಗರದ ಮಿಟ್ಟಿ ನರಸಿಂಹ ಮೂರ್ತಿ ಎಂಬ ವಕೀಲರು ಈ ಅರ್ಜಿ ಸಲ್ಲಿಸಿದ್ದು, ತಮ್ಮ ಮತಗಟ್ಟೆಗಳಿಂದ ದೂರವಿದ್ದು, ಹೊರ ಊರಿನಲ್ಲಿ ಅಥವಾ ವಿದೇಶಗಳಲ್ಲಿ ಇರುವ ಮತದಾರರಿಗೆ ಇ-ಮೇಲ್ ಮುಖಾಂತರ ಮತ ಚಲಾಯಿಸಲು ಅನುಮತಿ ನೀಡುವಂತೆ ಕೋರಿ ಈ ಮನವಿ ಸಲ್ಲಿಸಿದ್ದಾರೆ.
'ಬಹಳಷ್ಟು ಸಂಖ್ಯೆಯಲ್ಲಿ ಮತದಾರರು ಉದ್ಯೋಗ, ವಿದ್ಯಾಭ್ಯಾಸ ಮತ್ತು ಆರೋಗ್ಯದ ಕಾರಣಕ್ಕಾಗಿ ತಮ್ಮ ಮತಕ್ಷೇತ್ರಗಳಿಂದ ಹೊರಗೆ ಇರುತ್ತಾರೆ. ಹೀಗಾಗಿ ಅವರು ತಮ್ಮ ಮತ ಚಲಾಯಿಸುವ ಇರಾದೆ ಹೊಂದಿದ್ದರೂ ಸಾಧ್ಯವಾಗುವುದಿಲ್ಲ ಅಂತಹವರಿಗೆ ಇ-ಮೇಲ್ ಮತದಾನ ಸಹಾಯವಾಗುತ್ತದೆ ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಇ-ಮೇಲ್ನಲ್ಲಿ ಮತ ಹಾಕುವ ಮತದಾರರಿಗೆ ಬ್ಯಾಂಕ್ಗಳು ನೀಡುವಂತಹ ಒ.ಟಿ.ಪಿ (ಒನ್ ಟೈಮ್ ಪಾಸ್ ವರ್ಡ್) ನೀಡಬೇಕು. ಅದನ್ನು ಬಳಸಿ ಸುರಕ್ಷಿತವಾಗಿ ಮತ ಹಾಕುವಂತೆ ವ್ಯವಸ್ಥೆ ಮಾಡಬೇಕು. ಇದರಿಂದ ಮತ ಚಲಾವಣೆ ಪ್ರಮಾಣವೂ ಏರಿಕೆಯಾಗುತ್ತದೆ. ಆರ್ಥಿಕ ಉಳಿತಾಯವೂ ಆಗುತ್ತದೆ ಎಂಬುದು ನರಸಿಂಹ ಮೂರ್ತಿ ವಾದ.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ರಜಾಕಾಲದ ಪೀಠ ಪ್ರತಿವಾದಿ ವಕೀಲರಿಗೆ ಅರ್ಜಿ ಪ್ರತಿ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications