ಆರ್ಆರ್ ನಗರ ಚುನಾವಣೆ ಫಲಿತಾಂಶ ತಡೆಗೆ ಹೈಕೋರ್ಟ್ಗೆ ಮನವಿ
ಬೆಂಗಳೂರು, ಮೇ 11: ಮತದಾರರ ಪಟ್ಟಿ ಅಕ್ರಮ ನಡೆದಿದೆ ಎನ್ನಲಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಯ ಫಲಿತಾಂಶವನ್ನು ತಡೆಹಿಡಿಯಬೇಕು ಎಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ.
ನಗರದ 'ಸಮರ್ಪಣ' ಎಂಬ ಸಮಾಜ ಸೇವಾ ಸಂಘಟನೆಯೊಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಚುನಾವಣಾ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ರಾಜರಾಜೇಶ್ವರಿ ನಗರ ಕ್ಷೇತ್ರದ ಹಲವು ಅಭ್ಯರ್ಥಿಗಳು ಮತ್ತು ಕೆಲವು ಸಮಾಜ ಘಾತುಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ರಾಜರಾಜೇಶ್ವರಿ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ 9000 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಮೊದಲಿಗೆ ಅವೆಲ್ಲಾ ನಕಲಿ ಮತದಾರರ ಚೀಟಿಗಳು ಎನ್ನಲಾಗಿತ್ತು ಆದರೆ ನಂತರ ಚುನಾವಣಾ ಆಯೋಗವು ಅವೆಲ್ಲಾ ಅಧಿಕೃತ ಮತದಾರರ ಗುರುತಿನ ಚೀಟಿಗಳು ಎಂದು ಹೇಳಿತು.

ಪ್ರಕರಣ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ರಾರಾ ನಗರದ ಕಾಂಗ್ರೆಸ್ ಶಾಸಕ ಮುನಿರತ್ನ ಅವರ ಮೇಲೂ ಎಫ್ಐಆರ್ ದಾಖಲಿಸಲಾಗಿದೆ.
ರಾರಾ ನಗರದಲ್ಲಿ ಗುರುತಿನ ಚೀಟಿಗಳು ಸಿಕ್ಕಿರುವುದು ಸ್ಪಷ್ಟವಾದ ಚುನಾವಣಾ ನೀತಿಗಳ ಉಲ್ಲಂಘನೆ ಮತ್ತು ಮತದಾನ ಪ್ರಕ್ರಿಯೆಯನ್ನು ಬುಡಮೇಲು ಮಾಡುವಂತಹಾ ಕಾರ್ಯ, ಜೊತೆಗೆ ಜನತಾ ಪ್ರಾತಿನಿಧ್ಯ ಕಾಯ್ದೆ-1951 ಕಲಂ 123ರ ಸ್ಪಷ್ಟ ಉಲ್ಲಂಘನೆ ಆಗಿರುವ ಕಾರಣ ಮತದಾನ ನಡೆದರೂ ಫಲಿತಾಂಶವನ್ನು ತಡೆಹಿಡಿಯಬೇಕು ಎಂದು ಮನವಿ ಮಾಡಲಾಗಿದೆ.
ರಾರಾ ನಗರದ ಎಲ್ಲಾ ಚುನಾವಣಾ ಅಕ್ರಮಗಳ ದೂರುಗಳ ಕುರಿತು ಸ್ಪಷ್ಟ ತನಿಖೆ ನಡೆದು ತೀರ್ಪು ಬರುವವರೆಗೆ ಫಲಿತಾಂಶ ತಡೆ ಹಿಡಿದು ಆ ನಂತರ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂಬುದು 'ಸಮರ್ಪಣ' ಸಂಸ್ಥೆಯ ಮನವಿ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications