Pink Buses: ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ರಸ್ತೆಗೆ ಇಳಿಯಲಿವೆ ಪಿಂಕ್ ಬಸ್ಗಳು!
ಬೆಂಗಳೂರು, ಫೆಬ್ರವರಿ 08: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನಗಳಲ್ಲಿ ಒಂದಾದ ಶಕ್ತಿ ಯೋಜನೆ ಸಕತ್ ಯಶಸ್ಸಾಗಿದೆ. ಈ ಯಶಸ್ಸಿನ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಸಾರಿಗೆ ಇಲಾಖೆ ಚರ್ಚೆ ನಡೆಸಿದೆ. ಹೀಗಾಗಿ ಮಹಿಳಾ ಪ್ರಯಾಣಿಕರಿಗಾಗಿಯೇ ಪ್ರತ್ಯೇಕ ಬಸ್ಗಳು ರಸ್ತೆಗಿಳಿಯಲಿವೆ!.
ಹೌದು... ಶಕ್ತಿ ಯೋಜನೆಯಿಂದಾಗಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಯೋಜನೆಯಿಂದಾಗಿ ನಾಲ್ಕೂ ನಿಗಮಗಳ ಬಸ್ಗಳಲ್ಲಿ ಒಟ್ಟಾರೆ 259 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಸಾರಿಗೆ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಹೀಗಾಗಿಯೇ ಮಹಿಳಾ ಪ್ರಯಾಣಿಕರಿಗಾಗಿ ಪ್ರತ್ಯೇಕ ಪಿಂಕ್ ಬಸ್ ಓಡಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

ರಾಜ್ಯದಲ್ಲಿ ಪ್ರತಿದಿನ 60 ರಿಂದ 63 ಲಕ್ಷ ಮಹಿಳೆಯರು ಉಚಿತ ಬಸ್ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಬಸ್ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಹೆಣ್ಣು ಮಕ್ಕಳು ಬಸ್ಗಳಲ್ಲಿ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಅವರಿಗಾಗಿಯೇ ವಿಶೇಷವಾಗಿ ಪಿಂಕ್ ಬಸ್ಗಳನ್ನು ರಸ್ತೆಗಿಳಿಸಲು ಪ್ಲ್ಯಾನ್ ನಡೆಯುತ್ತಿದೆ. ಪ್ರಾಯೋಗಿಕವಾಗಿ ಬಿಎಂಟಿಸಿಯಲ್ಲಿ ಈ ಬಸ್ಗಳನ್ನು ಬಿಡುವ ಯೋಜನೆಯಲ್ಲಿದೆ ಸಾರಿಗೆ ಇಲಾಖೆ.
ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿ ನಾಲ್ಕೂ ನಿಗಮಗಳ ಬಸ್ಗಳಲ್ಲಿಒ ಮಹಿಳೆಯರಿಗಾಗಿ ಸೀಟುಗಳು ಇವೆ. ಆದರೆ, ಬಿಎಂಟಿಸಿಯಲ್ಲಿ ಮಾತ್ರವೇ ಈ ನಿಯಮವನ್ನು ಅನುಸರಿಸಲಾಗುತ್ತದೆ. ಈ ಹಿಂದೆ ಬಿಎಂಟಿಸಿಯಲ್ಲಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಬಸ್ಗಳಿದ್ದವು. ಅದೇ ಮಾದರಿಯಲ್ಲಿ ಮತ್ತೆ ಪಿಂಕ್ ಬಸ್ (ಮಹಿಳಾ ಬಸ್) ಬಿಡಲು ಸರ್ಕಾರ ಯೋಜಿಸಿದೆ.

"ಬಿಎಂಟಿಸಿ ಪ್ರಸ್ತುತ ವರ್ಷದಲ್ಲಿ 1 ಸಾವಿರಕ್ಕೂ ಹೆಚ್ಚಿನ ಬಸ್ಗಳನ್ನು ಖರೀದಿ ಮತ್ತು ಜಿಸಿಸಿ ಆಧಾರದಲ್ಲಿ ಪಡೆಯುತ್ತಿದೆ. ಅದರಲ್ಲಿ ಕೆಲವು ಬಸ್ಗಳನ್ನು ಪಿಂಕ್ ಬಸ್ಗಳನ್ನಾಗಿ ಮಾಡಿ ಅವುಗಳನ್ನು ಮಹಿಳಾ ಪ್ರಯಾಣಿಕರಿಗಾಗಿಯೇ ಮೀಸಲಾಗಿರಿಸಿವು ಚರ್ಚೆ ನಡೆಯುತ್ತಿದೆ. ಅಧಿಕಾರಿಗಳು ಸಭೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಪ್ಪಿಗೆ ಪಡೆಯಬೇಕಿದೆ" ಎಂದು ಸಾರಿಗೆ ಸಚಿವರ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಪಿಂಕ್ ಬಸ್ಗಳು ರಸ್ತೆಗಿಳಿದರೆ ಮಹಿಳಾ ಪ್ರಯಾಣಿಕರ ಪ್ರಯಾಣ ಮತ್ತಷ್ಟು ಸುಲಭವಾಗಲಿದೆ. ಬಸ್ಗಳಲ್ಲಿ ಹಿಂಸೆ ಅನುಭವಿಸಿಕೊಂಡು ಓಡಾಡುವ ಮಹಿಳೆಯರು ನಿಶ್ಚಿಂತೆಯಿಂದ ಓಡಾಡಬಹುದು. ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಪಿಂಕ್ ಬಸ್ಗಳಿದ್ದು, ರಾಜ್ಯದಲ್ಲಿಯೂ ಆ ವ್ಯವಸ್ಥೆ ಜಾರಿಗೆ ಬಂದರೆ ಹೆಚ್ಚು ಅನುಕೂಲವಾಗಲಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ










Click it and Unblock the Notifications