ಪಿಂಕ್ ಹೊಯ್ಸಳ ಚುರುಕು ಕಾರ್ಯಾಚರಣೆ: ಹತ್ತೇ ನಿಮಿಷದಲ್ಲಿ ಕಾಮುಕ ಬಂಧನ
ಬೆಂಗಳೂರು, ಮೇ 13: ಕಾಮುಕನ ಕುಚೇಷ್ಟೆಗಳಿಗೆ ಬೇಸತ್ತಿದ್ದ ಯುವತಿಯೊಬ್ಬಳಿಂದ ದೂರು ಬಂದ ಕೂಡಲೇ ಕಾರ್ಯಾಚರಣೆಗೆ ಇಳಿದ ಪಿಂಕ್ ಹೊಯ್ಸಳ ಸಿಬ್ಬಂದಿ ದೂರು ಬಂದ ಹತ್ತೇ ನಿಮಿಷಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೂಲಕ ಬೀದಿ ಕಾಮಣ್ಣರಿಗೆ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ. ಬಂಧಿತನ ಹೆಸರು ಮಧುಸೂಧನ್ ರಾವ್ (47).

ಉದ್ಯೋಗಿ ಮಹಿಳೆಯೊಬ್ಬರು ತಮ್ಮ ಕಂಪನಿಯಿಂದ ಕೆಲಸ ಮುಗಿಸಿಕೊಂಡು ವೈಟ್ ಫೀಲ್ಡ್ ವ್ಯಾಪ್ತಿಗೆ ಬರುವ ಬಿಎಂಟಿಸಿ ಬಸ್ ನಿಲ್ದಾಣವೊಂದರಿಂದ ಬಿಎಂಟಿಸಿ ವೋಲ್ವೇ ಬಸ್ ಹತ್ತಿದ್ದಾರೆ.
ಯುವತಿ ಕುಳಿತಿದ್ದ ಸೀಟಿನ ಹಿಂದಿನ ಆಸನದಲ್ಲಿದ್ದ ಮಧುಸೂಧನ್, ಬಸ್ ಚಲಿಸಲು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ತನ್ನ ಚೇಷ್ಟೆ ಶುರುವಿಟ್ಟುಕೊಂಡಿದ್ದಾನೆ.
ಯುವತಿಯ ಮೈ ಮುಟ್ಟುವುದು ಮುಂತಾದ ಚೇಷ್ಟೆಗಳಿಂದ ಆಕೆಗೆ ಕಿರುಕುಳ ಕೊಡಲು ಶುರು ಮಾಡಿದ್ದಾನೆ. ಇದರಿಂದ ಬೇಸತ್ತ ಯುವತಿ, ತಕ್ಷಣವೇ ಬೆಳ್ಳಂದೂರು ಪೊಲೀಸ್ ಠಾಣೆಗೆ ಫೋನ್ ಮಾಡಿ ಸುದ್ದಿ ಮುಟ್ಟಿಸಿದ್ದಾಳೆ.
ಯುವತಿ ನೀಡಿ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯ ಪ್ರವೃತ್ತರಾದ ಪಿಂಕ್ ಹೊಯ್ಸಳ, ಯುವತಿ ಸಾಗುತ್ತಿದ್ದ ಬಿಎಂಟಿಸಿ ಬಸ್ ಅನ್ನು ಗುರುತಿಸಿ ಅದನ್ನು ಚೇಸ್ ಮಾಡಿ ಹೋಗಿ, ಬಸ್ ನಿಲ್ಲಿಸಿದ್ದಲ್ಲದೆ, ಬಸ್ ಪ್ರವೇಶಿಸಿ ಕಾಮುಕ ಮಧುಸೂಧನ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಹೀಗೆ, ಯುವತಿಗೆ ಕಾಟ ಕೊಟ್ಟಿದ್ದ ಆ ಕಾಮಣ್ಣ, ಪಿಂಕ್ ಹೊಯ್ಸಳದ ಕಾನ್ ಸ್ಟೇಬಲ್ ಗಳಾದ ಬಿ. ಮಹೇಶ್, ಬಿ. ಪವಿತ್ರಾ, ಆರಿಫ್ ಪಾಷಾ ಅವರ ಅತಿಥಿಯಾಗಿದ್ದಾನೆ. ಈತನನ್ನು ವಿಚಾರಣೆಗೊಳಪಡಿಸಲಾಗಿದ್ದು, ಈತ ಬೆಳ್ಳಂದೂರಿನಲ್ಲಿ ವೈಟ್ ಫೀಲ್ಡ್ ನ ಕಂಪನಿಯೊಂದರಲ್ಲಿ ಉದ್ಯೋಗಿ ಎಂದು ತಿಳಿದುಬಂದಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications