ಬಿಎಂಟಿಸಿಯಲ್ಲಿ ಮಹಿಳೆಯರಿಗಾಗಿ "ಗುಲಾಬಿ ಆಸನ'
ಬೆಂಗಳೂರು, ನವೆಂಬರ್ 29 : ಬಿಎಂಟಿಸಿ ಬಸ್ ನಲ್ಲಿ ಮಹಿಳಾ ಆಸನಗಳನ್ನು ಪುರುಷರು ಆಕ್ರಮಿಸಿಕೊಳ್ಳುವುದನ್ನು ತಡೆಯುವ ದೃಷ್ಟಿಯಿಂದ ನಿಗಮದ ಎಲ್ಲ ಬಸ್ ಗಳಲ್ಲಿ ಮಹಿಳಾ ಮೀಸಲು ಆಸನಗಳಿಗೆ ಗುಲಾಬಿ ಬಣ್ಣ ಅಳವಡಿಸಲು ನಿರ್ಧರಿಸಲಾಗಿದೆ.
ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಈ ಯೋಜನೆ ಪ್ರಕಟಿಸಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಅವರು, ಮಹಿಳಾ ಮೀಸಲು ಆಸನದಲ್ಲಿ ಕೂರುವ ಪುರುಷ ಪ್ರಯಾಣಿಕರಿಗೆ ದಂಡ ವಿಧಿಸುತ್ತಿದ್ದರೂ ಕೆಲ ಕಡೆ ಜಗಳಗಳು ಉಂಟಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಪಿಂಕ್ ಆಸನ ಅಳವಡಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸಾರಿಗೆ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆ ಬಸ್ ಗಳಲ್ಲೂ ಪಿಂಕ್ ಆಸನ ಅಳವಡಿಸುವ ಚಿಂತನೆಯಿದೆ. ಅಲ್ಲದೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗಾಗಿ ಗುಲಾಬಿ ಬಣ್ಣದ ಆಸನ ಅಳವಡಿಸುವಂತೆ ಎಚ್.ಎಂ. ರೇವಣ್ಣ ಸೂಚಿಸಿರುವುದಾಗಿ ಹೇಳಿದ್ದಾರೆ.

ಬಡ ಜನರಿಗೆ ಕಡಿಮೆ ದರದಲ್ಲಿ ಊಟ-ತಿಂಡಿ ನೀಡುವ ಇಂದಿರಾ ಕ್ಯಾಂಟೀನ್ ನಂತರ ಮತ್ತೆ ಇಂದಿರಾ ಹೆಸರಿನಲ್ಲಿ ಮೂರು ಯೋಜನೆಗಳು ಘೋಷಣೆಯಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಈ ಮೂರು ಹೊಸ ಯೋಜನೆಗಳನ್ನು ಬೆಂಗಳೂರು ಮಹಾನಗರ ಪಾಲಿಕೆ ಸಾರಿಗೆ ನಿಗಮ ಜಾರಿಗೆ ತರುತ್ತಿದೆ.
ಅವು-ಬಸ್ ನಿಲ್ದಾಣದಲ್ಲಿ ವೈದ್ಯೋ ಉಪಚಾರ ನೀಡುವ ಇಂದಿರಾ ಟ್ರಾನ್ಸಿಟ್ ಕ್ಲಿನಿಕ್, ಮಹಿಳಾ ಉದ್ಯೋಗಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಸೇವೆ ನೀಡುವ ಇಂದಿರಾ ಸಾರಿಗೆ ಹಾಗೂ ಕಟ್ಟಡ ನಿರ್ಮಾಣದಲ್ಲಿ ತೊಡಗುವ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ಯೋಜನೆ ಜಾರಿಗೆ ಬರಲಿದೆ.
ಇಂದಿರಾ ಗಾಂಧಿ ಅವರ ಜನ್ಮಶತಾಬ್ಧಿ ಹಿನ್ನೆಲೆಯಲ್ಲಿ ಈ ಮೂರು ಯೋಜನೆಗಳಿಗೂ ಇಂದಿರಾ ಹೆಸರಿಡಲಾಗಿದೆ. ಇಂದಿರಾ ದೇಶದ ಪ್ರಧಾನಿಯಾಗಿ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಅಲ್ಲದೆ ನಾನು ರಾಜಕೀಯ ಪ್ರವೇಶಿಸಲು ಅವರೇ ಪ್ರೇರಣೆಯಾಗಿದ್ದರು ಎಂದರು.
ಡಿ.2ಕ್ಕೆ ಇಂದಿಯಾ ಕ್ಲಿನಿಕ್ ಉದ್ಘಾಟನೆ: ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಬಿಎಂಟಿಸಿಯ ಮೆಜೆಸ್ಟಿಕ್ ಮತ್ತು ಯಶವಂತಪುರ ಟಿಟಿಎಂಸಿಯಲ್ಲಿ ಇಂದಿರಾ ಟ್ರಾನ್ಸಿಟ್ ಕ್ಲಿನಿಕ್ ನಿರ್ಮಿಸಲಾಗಿದೆ.
ಕೇಂದ್ರ, ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ನಿರ್ಮಿಸಲಾಗಿದ್ದು ಡಿ.2ರಂದು ಸಚಿವ ರಮೇಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದಿರಾ ಸಾರಿಗೆ ಹಾಗೂ ಇಂದಿರಾ ಬಸ್ ಪಾಸ್ ಯೋಜನೆಯನ್ನು ಕೂಡ ಶೀಘ್ರ ಅನುಷ್ಠಾನಕ್ಕೆ ಬರಲಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications