ಬಿಪಿಎಲ್ ಪಡಿತರ ಅಕ್ಕಿ 8ಕೆಜಿ ವರೆಗೆ ಹೆಚ್ಚಳ: ಸಿದ್ದು
ಬೆಂಗಳೂರು, ಫೆಬ್ರವರಿ 8: ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಸಿಹಿಸುದ್ದಿ, ಬಿಪಿಎಲ್ ಕಾರ್ಡ್ ದಾರರಿಗೆ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಯೂನಿಟ್ ಗೆ 8 ಕೆಜಿವರೆಗೆ ಏರಿಕೆ ಮಾಡುವುದಾಗಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅಕ್ಕಿ ಪ್ರಮಾಣ ಯೂನಿಟ್ ಗೆ 8 ಕೆ.ಜಿ. ವರೆಗೆ ಏರಿಕೆಯಾಗುವುದು ಏಪ್ರಿಲ್ ನಿಂದಲೇ ಜಾರಿಯಾಗಲಿದೆ. ಆಧಾರ್ ಲಿಂಕ್ ಇಲ್ಲದ ಬಿಪಿಎಲ್ ಕಾರ್ಡ್ ದಾರರಿಗೆ ಎರಡು ತಿಂಗಳವರೆಗೆ ಪಡಿತರ ಧಾನ್ಯ ವಿತರಣೆ ಯಾಗಲಿದೆ. ಗ್ಯಾಸ್ ಸಂಪರ್ಕ ಇದ್ದವರಿಗೂ ಸೀಮೆಎಣ್ಣೆ ನೀಡಲು ನಿರ್ಧಾರಿಸಲಾಗಿದೆ. ಕ್ಷೀರಭಾಗ್ಯದಲ್ಲಿ ಶಾಲಾ ಮಕ್ಕಳಿಗೆ 5 ದಿನವೂ ಹಾಲು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಗಳು ತಿಳಿಸಿದರು.[ಬಿಪಿಎಲ್ ಕಾರ್ಡಿಗೆ ಹೆಸರು ಕಾಳು, ಮುಕ್ತ ಮಾರುಕಟ್ಟೆಗೆ ಬಿಳಿ ಸೀಮೆಎಣ್ಣೆ]

ಅಲ್ಲದೆ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳ ಬಗ್ಗೆಯೂ ಚರ್ಚೆ ನಡೆಸಿದರು. ಬರಪರಿಹಾರ ಕಾಮಗಾರಿಗಳು ತೃಪ್ತಿದಾಯಕವಾಗಿಲ್ಲ ಹೆಚ್ಚಿನ ಅನುದಾನ ಕೇಂದ್ರದಿಂದ ಒದಗಿ ಬಂದಿದ್ದರೆ ರೈತರು ಮತ್ತು ಜಾನುವಾರುಗಳಿಗೆ ಪರಿಹಾರ ಕಲ್ಪಿಸಬಹುದಾಗಿತ್ತು ಎಂದು ಶಾಸಕರು ತಿಳಿಸಿದರು.[ಬಿಪಿಎಲ್ ಕುಟುಂಬಕ್ಕೆ ಸಬ್ಸಿಡಿ ದರದಲ್ಲಿ ತಾಳೆಎಣ್ಣೆ ವಿತರಣೆ]
ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗಾಗಿ ಮತ್ತು ಕುಡಿಯುವ ನೀರಿಗಾಗಿ ಕೊರೆಸಲಾದ ಬೋರ್ವೆಲ್ ಗಳಿಗೆ ಈ ವರೆಗೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂದು ಕೆಲ ಶಾಸಕರು ಅಸಮಾಧಾನ ಹೊರಹಾಕಿದರು. ಇನ್ನು ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಶೇ.50 ರಷ್ಟು ಶಾಸಕರು ಗೈರು ಹಾಜರಿರುವುದು ಕಂಡು ಬಂತು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications