ನಂದಿಬೆಟ್ಟದಲ್ಲಿ ರಸ್ತೆ ಒಂದು ಬಿಟ್ಟು, ಉಳಿದ ಅಭಿವೃದ್ಧಿಯೇ ಶೂನ್ಯ
ಬೆಂಗಳೂರು, ಏ.17: ಸರ್ಕಾರಿ ಇಲಾಖೆಗಳ ಗೊಂದಲದಲ್ಲಿ ನಂದಿಬೆಟ್ಟದ ಅಭಿವೃದ್ಧಿ ಕುಂಠಿತವಾಗಿದೆ.
ನಂದಿಬೆಟ್ಟದಲ್ಲಿ ಎಂಟ್ರಿ ಪ್ಲಾಜಾ, ಪ್ರವಾಸಿಗರಿಗೆ ಮಾಹಿತಿ ಕೇಂದ್ರ, ಆಹಾರ ಕೇಂದ್ರಗಳನ್ನು ತೆರೆಯುವ ಯೋಜನೆ ಆರಂಭಕ್ಕೆ ಇನ್ನೂ ಕಾಲ ಕೂಡಿಬಂದಿಲ್ಲ.
ದಿನನಿತ್ಯ ಸಾವಿರಾರು ಮಂದಿ ನಂದಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಅಲ್ಲಿರುವ ಫುಡ್ಕೋರ್ಟ್ಗಳಲ್ಲಿ ನಗದು ನೀಡಿಯೇ ಆಹಾರ ಪಡೆಯಬೇಕಾಗಿದೆ, ಪೇಟಿಎಂ, ಗೂಗಲ್ ಪೇ, ಕ್ರೆಡಿಟ್, ಡೆಬಿಟ್ ಕಾರ್ಡ್ ಯಾವುದೂ ಉಪಯೋಗಕ್ಕೆ ಬರುವುದಿಲ್ಲ.

ನಂದಿಬೆಟ್ಟಕ್ಕೆ ಬರುವ ರಸ್ತೆಯನ್ನು ಮಾತ್ರ ರಿಪೇರಿ ಮಾಡಿದ್ದಾರೆಯೇ ವಿನಃ , ನಂದಿಬೆಟ್ಟದೊಳಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಇಂಟೆಕ್ ಕೆಲವು ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಗೆ ಹಲವು ಬಾರಿ ವರದಿ ಸಲ್ಲಿಕೆ ಮಾಡಿದೆ. ಇದುವರೆಗೂ ಅನುಮತಿ ದೊರೆತಿಲ್ಲ. ಯೋಜನೆ 2017ರಲ್ಲೇ ಆರಂಭವಾಗಿತ್ತು.
ಪ್ರವಾಸೋದ್ಯಮ, ತೋಟಗಾರಿಕೆ, ಪುರಾತತ್ವ ಇಲಾಖೆ ಈ ಮೂರು ಇಲಾಖೆ ವ್ಯಾಪ್ತಿಗೆ ನಂದಿ ಬೆಟ್ಟ ಸೇರುತ್ತದೆ. ಆ ಇಲಾಖೆಯ ನಡುವೆ ಹೊಂದಾಣಿಕೆ ಕೊರತೆ ಇರುವುದರಿಂದ ಯೋಜನೆ ನಿಧಾನಗತಿಯಲ್ಲಿ ಸಾಗುತ್ತಿದೆ ಎನ್ನುವುದು ಕೆಲವರ ವಾದವಾಗಿದೆ.ಎಲ್ಲವೂ ಇದೆ ಆದರೆ ನಿರ್ವಹಣೆ ಸಮರ್ಪಕವಾಗಿಲ್ಲ, ಚೆಂದದ ಗಿಡಗಳನ್ನು ನೆಟ್ಟಿದ್ದಾರೆ ಆದರೆ ನಿರ್ವಹಣೆ, ನೀರು ಇಲ್ಲದೆ ಸತ್ತು ಹೋಗಿವೆ. ಎಲ್ಲೆಲ್ಲೂ ಪ್ಲಾಸ್ಟಿಕ್ ಕವರ್ಗಳು, ಬಾಟಲಿಗಳೇ ಬಿದ್ದಿವೆ.ನಂದಿಬೆಟ್ಟಕ್ಕೆ ಬರುವ ರಸ್ತೆಯನ್ನು ಮಾತ್ರ ರಿಪೇರಿ ಮಾಡಿದ್ದಾರೆಯೇ ವಿನಃ , ನಂದಿಬೆಟ್ಟದೊಳಗೆ ಯಾವುದೇ ಅಭಿವೃದ್ಧಿಯಾಗಿಲ್ಲ.
ನಂದಿ ಬೆಟ್ಟವು ಡೆಸ್ಟಿನೇಷನ್ ಡೆವಲಾಪ್ಮೆಂಟ್ ಯೋಜನೆಯಡಿ ಅಭಿವೃದ್ಧಿಗೊಳ್ಳುತ್ತಿದೆ. ಮಾಸ್ಟರ್ ಪ್ಲಾನ್ ಪ್ರಕಾರ ಕಾಯುವ ಹಾಗೂ ಟಿಕೆಟ್ ನೀಡುವ ಎಂಟ್ರಿ ಪ್ಲಾಜಾ, ಬಸ್ ನಿಲ್ದಾಣ, ಆಹಾರ ಕೇಂದ್ರ ನಿರ್ಮಾಣ ಕುರಿತಂತೆ ಪ್ರವಾಸೋಸ್ಯಮ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಡೆಸ್ಟಿನೇಷನ್ ಡೆವಲಾಪ್ ಮೆಂಟ್ ಯೋಜನೆಯಲ್ಲಿ ಕರ್ನಾಟಕದ 20 ಪ್ರವಾಸಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.ಅದರಲ್ಲಿ ನಂದಿ ಬೆಟ್ಟ, ಬೀದರ್ ಕೋಟೆ, ಕಲಬುರಗಿ ಕೋಟೆ, ಸನ್ನತಿ, ವಿಜಯಪುರ, ಬಾದಾಮಿ-ಐಹೊಳೆ-ಪಟ್ಟದಕಲ್ಲು, ಹಂಪಿ-ಆನೇಗುಂಡಿ, ಚಿತ್ರದುರ್ಗ ಕೋಟೆ, ಶ್ರೀರಂಗಪಟ್ಟಣ, ಮೇಲುಕೋಟೆ, ಶ್ರವಣಬೆಳಗೊಳ, ದೇವನಹಳ್ಳಿ ಕೋಟೆ ಸೇರಿದಂತೆ ಇನ್ನಿತರೆ ಪ್ರದೇಶಗಳ ಅಭಿವೃದ್ಧಿ ಮಾಡಬೇಕಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications