ಕರ್ನಾಟಕದಲ್ಲಿ 'ಕೊರಿಯಾ ಭಾಷೆ' ಕಲಿಕೆ-ತರಬೇತಿ ಕೇಂದ್ರ?: ವೈಜಿ-1 ರಿಂದ ₹1,245 ಕೋಟಿ ಬಂಡವಾಳ ಹೂಡಿಕೆ
ಬೆಂಗಳೂರು, ಜುಲೈ 04: ಜಪಾನ್ ಬಳಿಕ ದಕ್ಷಿಣ ಕೋರಿಯಾದ ಐದು ದಿನಗಳ ಪ್ರವಾಸದಲ್ಲಿರುವ ಕರ್ನಾಟಕ ರಾಜ್ಯ ಭಾರೀ ಮತ್ತು ಮಧ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು, ವಿದೇಶಿ ಕಂಪನಿಗಳಿಂದ ಬಂಡವಾಳ ಸೆಳೆಯವಲ್ಲಿ ಯಶಸ್ವಿಯಾಗಿದ್ದಾರೆ.
ಬುಧವಾರ ದಕ್ಷಿಣ ಕೊರಿಯಾದಲ್ಲಿ ಸಚಿವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗದ ಸದಸ್ಯರು ವಿವಿಧ ಕಂಪನಿಗಳ ಜತೆ ಮಾಲೋಚನೆ ನಡೆಸಿದರು.

ಈ ವೇಳೆ ದಕ್ಷಿಣ ಕೋರಿಯಾದ ಅತ್ಯಾಧುನಿಕ ಕಟಿಂಗ್ ಟೂಲ್ಸ್ ತಯಾರಿಸುವ ದಕ್ಷಿಣ ಕೊರಿಯಾದ ಜಾಗತಿಕ ಕಂಪನಿಯಾಗಿರುವ 'ವೈಜಿ-1' ಕಂಪನಿ ಕರ್ನಾಟಕದಲ್ಲಿ, ₹1,245 ಕೋಟಿ ಬಂಡವಾಳ ಹೂಡಿಕೆ ಮಾಡುವುದಾಗಿ ಪ್ರಕಟಿಸಿದೆ. ಈ ಬಗ್ಗೆ ಸರ್ಕಾರದ ಜತೆ ಮಾತುಕತೆ ನಡೆಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೊರಿಯಾ ಭಾಷೆ ಕಲಿಕೆ ತರಬೇತಿ ಕೇಂದ್ರ
ಕರ್ನಾಟಕದಲ್ಲಿ ಕೊರಿಯಾ ಭಾಷೆ ಕಲಿಸುವ ಮತ್ತು ತರಬೇತಿ ನೀಡುವ ಕೇಂದ್ರ, ಇಂಧನ ಆವಿಷ್ಕಾರ ಮತ್ತು ತಂತ್ರಜ್ಞಾನ ಪ್ರಗತಿ ಕ್ಷೇತ್ರಗಳಲ್ಲಿ ಅತ್ಯಾಧುನಿಕ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (R and D) ಸ್ಥಾಪಿಸಲಾಗುವುದು ಎಂದು ಕಂಪನಿಯ ಚೇರ್ಮನ್ ಹೊ ಕ್ಯೂನ್ ಸಾಂಗ್ ತಿಳಿಸಿದರು.
ಐಟಿ, ಎಲೆಕ್ಟ್ರಾನಿಕ್ ಸಿಸ್ಟಮ್ಸ್, ವೈಮಾಂತರಿಕ್ಷ ಹಾಗೂ ರಕ್ಷಣೆಗೆ ಸಂಬಂಧಿಸಿದ ಉದ್ದಿಮೆಗಳಲ್ಲಿ ಕರ್ನಾಟಕವು ಭಾರತದಲ್ಲಿ ಮೊದಲ ಸ್ಥಾನದಲ್ಲಿ ಇರುವುದನ್ನು ಸಚಿವ ಪಾಟೀಲ ಅವರು ಕೊರಿಯಾದ ಕಂಪನಿಗಳಿಗೆ ಮನವರಿಕೆ ಮಾಡಿಕೊಟ್ಟರು. ಸೌರಶಕ್ತಿಯೂ ಸೇರಿದಂತೆ ರಾಜ್ಯವು ವಿಪುಲ ಪ್ರಮಾಣದಲ್ಲಿ ನೈಸರ್ಗಿಕ ಸಂಪನ್ಮೂಲ ಹೊಂದಿದೆ. ವಿದ್ಯುತ್ ಚಾಲಿತ ವಾಹನ, ಎಲೆಕ್ಟ್ರಾನಿಕ್ಸ್ ಮತ್ತು ಸ್ಮಾರ್ಟ್ಫೋನ್ ತಯಾರಿಕೆಗೆ ರಾಜ್ಯ ಸರ್ಕಾರವು ಗರಿಷ್ಠ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದೆ ಎಂದರು.
ರಾಜ್ಯದಲ್ಲಿ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಮಾರುಕಟ್ಟೆಯು ಗಮನಾರ್ಹವಾಗಿ ವಿಸ್ತರಣೆಗೊಳ್ಳುತ್ತಿರುವುದನ್ನು ಕೊರಿಯಾದ ಕಂಪನಿಗಳ ಗಮನಕ್ಕೆ ತರಲಾಯಿತು.

ಗೇಮಿಂಗ್ - ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ
ಈಗಾಗಲೇ ಭಾರತದ ವಿವಿಧ ನವೋದ್ಯಮಗಳಲ್ಲಿ ₹1,162 ಕೋಟಿ ಹೂಡಿಕೆ ಮಾಡಿರುವ ಜಾಗತಿಕ ಗೇಮಿಂಗ್ ಕಂಪನಿ ಕ್ರಾಫ್ಟನ್ ಇಂಕ್, ಮುಂದಿನ 2 ರಿಂದ 3 ವರ್ಷಗಳಲ್ಲಿ ಗೇಮಿಂಗ್ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ₹1,245 ಕೋಟಿ ಹೂಡಿಕೆ ಮಾಡುವುದಾಗಿ ನಿಯೋಗದ ಜೊತೆಗಿನ ಸಭೆಯಲ್ಲಿ ಬದ್ಧತೆ ತೋರಿದೆ.
ಭಾರತದಲ್ಲಿನ ಗೇಮಿಂಗ್ ಎಂಜಿನಿಯರ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವ ಬಗ್ಗೆ ಕ್ರಾಫ್ಟನ್ ಕಂಪನಿಯು ಇಂಗಿತ ವ್ಯಕ್ತಪಡಿಸಿದೆ. ಬೌದ್ಧಿಕ ಆಸ್ತಿ (ಐಪಿ) ಆಧಾರಿತ ಕ್ರೀಡೆ, ಇ-ಕ್ರೀಡೆಗಳ ಅಭಿವೃದ್ಧಿ ಮತ್ತು ಮೊಬೈಲ್ ಫೋನ್ ಗೇಮಿಂಗ್ ಕುರಿತು ಪ್ರಮುಖವಾಗಿ ಚರ್ಚಿಸಲಾಯಿತು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಇದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications