Breaking: ಶಾಸಕ ಎಸ್. ಆರ್. ವಿಶ್ವನಾಥ್ ಕೊಲೆಗೆ ಸಂಚು: ಒಬ್ಬನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಬೆಂಗಳೂರು, ಡಿ. 01: ಯಲಹಂಕ ಕ್ಷೇತ್ರದ ಶಾಸಕ ಎಸ್. ಆರ್. ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬಿಡಿಎ ಅಧ್ಯಕ್ಷ ಆಗಿರುವ ಎಸ್. ಆರ್. ವಿಶ್ವನಾಥ್ ಅವರನ್ನು ಮುಗಿಸುವ ಬಗ್ಗೆ ಕಾಂಗ್ರೆಸ್ ಮುಖಂಡನೊಬ್ಬ ಮಾತುಕತೆ ನಡೆಸಿದ್ದಾನೆ. ಎಸ್. ಆರ್. ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿರುವ ಪ್ರಕರಣ ಸಂಬಂಧ ಕುಳ್ಳದೇವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಡೀ ಪ್ರಕರಣ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ. ಎಸ್. ಆರ್. ವಿಶ್ವನಾಥ್ ಅವರನ್ನು ಮುಗಿಸಲು ಸಂಚು ರೂಪಿಸಲಾಗಿದೆಯೋ ? ಇಲ್ಲವೇ ದೇವರಾಜ್ ಅವರ ರಾಜಕೀಯ ಭವಿಷ್ಯ ಮುಗಿಸಲು ರಹಸ್ಯ ಕಾರ್ಯಾಚರಣೆ ಅಸ್ತ್ರ ಬಳಸಿದರೋ ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಳ್ಳ ದೇವರಾಜ್ ಬಂಧನ:
ಇನ್ನು ಎಸ್. ಆರ್. ವಿಶ್ವನಾಥ್ ಕೊಲೆ ಬಗ್ಗೆ ಮಾತನಾಡಿರುವ ಗೋಪಾಲಕೃಷ್ಣ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿರುವ ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ಅಧಿಕಾರಿಯ ಹೆಸರೂ ಸಹ ಕೇಳಿ ಬರುತ್ತಿದೆ. ಗೋಪಾಲಕೃಷ್ಣನನ್ನು ಪುಸಲಾಯಿಸಿ ವಿಡಿಯೋ ಮಾಡಿಕೊಂಡಿದ್ದು, ಯಾರು ಯಾರನ್ನು ಮುಗಿಸಲು ಪ್ಲಾನ್ ಮಾಡಿದರು ಎಂಬುದು ಸಿಸಿಬಿ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಅತಿ ಶೀಘ್ರದಲ್ಲಿಯೇ ಪ್ರಕರಣದ ವೃತ್ತಾಂತ ಬಯಲಿಗೆ ಬರಲಿದೆ.

Recommended Video
ಎಸ್. ಆರ್. ವಿಶ್ವನಾಥ್ ಅವರನ್ನು ಮುಗಿಸುವ ಬಗ್ಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮಾತನಾಡಿದ್ದಾನೆ. ಅದನ್ನು ರೆಕಾರ್ಡ್ ಮಾಡಿಕೊಂಡಿರುವುದು ಎಸ್.ಆರ್. ವಿಶ್ವನಾಥ್ ಆಪ್ತ ಕುಳ್ಳ ದೇವರಾಜ್, ಎಸ್. ಆರ್. ವಿಶ್ವನಾಥ್ ಗೆ ಒಳ್ಳೆಯವನಾಗಲು ಕುಳ್ಳ ದೇವರಾಜ್ ಪ್ಲಾನ್ ಮಾಡಿ ಸ್ಟಿಂಗ್ ಮಾಡಿದನೇ? ಇಲ್ಲವೇ ಗೋಪಾಲಕೃಷ್ಣ ರಾಜಕೀಯ ಭವಿಷ್ಯ ಮುಗಿಸಲು ರಹಸ್ಯ ಕಾರ್ಯಾಚರಣೆ ಅಸ್ತ್ರ ಬಳಕೆ ಮಾಡಲಾಯಿತೋ ಎಂಬುದು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications