Breaking: ಶಾಸಕ ಎಸ್. ಆರ್. ವಿಶ್ವನಾಥ್ ಕೊಲೆಗೆ ಸಂಚು: ಒಬ್ಬನನ್ನು ಬಂಧಿಸಿದ ಸಿಸಿಬಿ ಪೊಲೀಸರು
ಬೆಂಗಳೂರು, ಡಿ. 01: ಯಲಹಂಕ ಕ್ಷೇತ್ರದ ಶಾಸಕ ಎಸ್. ಆರ್. ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಬಿಡಿಎ ಅಧ್ಯಕ್ಷ ಆಗಿರುವ ಎಸ್. ಆರ್. ವಿಶ್ವನಾಥ್ ಅವರನ್ನು ಮುಗಿಸುವ ಬಗ್ಗೆ ಕಾಂಗ್ರೆಸ್ ಮುಖಂಡನೊಬ್ಬ ಮಾತುಕತೆ ನಡೆಸಿದ್ದಾನೆ. ಎಸ್. ಆರ್. ವಿಶ್ವನಾಥ್ ಕೊಲೆಗೆ ಸಂಚು ರೂಪಿಸಿರುವ ಪ್ರಕರಣ ಸಂಬಂಧ ಕುಳ್ಳದೇವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ ಹಾಗೂ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರನ್ನು ಸಹ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇಡೀ ಪ್ರಕರಣ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ. ಎಸ್. ಆರ್. ವಿಶ್ವನಾಥ್ ಅವರನ್ನು ಮುಗಿಸಲು ಸಂಚು ರೂಪಿಸಲಾಗಿದೆಯೋ ? ಇಲ್ಲವೇ ದೇವರಾಜ್ ಅವರ ರಾಜಕೀಯ ಭವಿಷ್ಯ ಮುಗಿಸಲು ರಹಸ್ಯ ಕಾರ್ಯಾಚರಣೆ ಅಸ್ತ್ರ ಬಳಸಿದರೋ ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಳ್ಳ ದೇವರಾಜ್ ಬಂಧನ:
ಇನ್ನು ಎಸ್. ಆರ್. ವಿಶ್ವನಾಥ್ ಕೊಲೆ ಬಗ್ಗೆ ಮಾತನಾಡಿರುವ ಗೋಪಾಲಕೃಷ್ಣ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿರುವ ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ಅಧಿಕಾರಿಯ ಹೆಸರೂ ಸಹ ಕೇಳಿ ಬರುತ್ತಿದೆ. ಗೋಪಾಲಕೃಷ್ಣನನ್ನು ಪುಸಲಾಯಿಸಿ ವಿಡಿಯೋ ಮಾಡಿಕೊಂಡಿದ್ದು, ಯಾರು ಯಾರನ್ನು ಮುಗಿಸಲು ಪ್ಲಾನ್ ಮಾಡಿದರು ಎಂಬುದು ಸಿಸಿಬಿ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ. ಕುಳ್ಳ ದೇವರಾಜ್ ನನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಅತಿ ಶೀಘ್ರದಲ್ಲಿಯೇ ಪ್ರಕರಣದ ವೃತ್ತಾಂತ ಬಯಲಿಗೆ ಬರಲಿದೆ.

Recommended Video
ಎಸ್. ಆರ್. ವಿಶ್ವನಾಥ್ ಅವರನ್ನು ಮುಗಿಸುವ ಬಗ್ಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಮಾತನಾಡಿದ್ದಾನೆ. ಅದನ್ನು ರೆಕಾರ್ಡ್ ಮಾಡಿಕೊಂಡಿರುವುದು ಎಸ್.ಆರ್. ವಿಶ್ವನಾಥ್ ಆಪ್ತ ಕುಳ್ಳ ದೇವರಾಜ್, ಎಸ್. ಆರ್. ವಿಶ್ವನಾಥ್ ಗೆ ಒಳ್ಳೆಯವನಾಗಲು ಕುಳ್ಳ ದೇವರಾಜ್ ಪ್ಲಾನ್ ಮಾಡಿ ಸ್ಟಿಂಗ್ ಮಾಡಿದನೇ? ಇಲ್ಲವೇ ಗೋಪಾಲಕೃಷ್ಣ ರಾಜಕೀಯ ಭವಿಷ್ಯ ಮುಗಿಸಲು ರಹಸ್ಯ ಕಾರ್ಯಾಚರಣೆ ಅಸ್ತ್ರ ಬಳಕೆ ಮಾಡಲಾಯಿತೋ ಎಂಬುದು ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications