ಬೆಂಗಳೂರಿಗೆ ಹೋಗುವ ಪ್ಲ್ಯಾನ್ ಇದೆಯೇ? ನೀವು ತಿಳಿಯಬೇಕಾಗಿದ್ದಿಷ್ಟು
ಬೆಂಗಳೂರು, ಜೂನ್ 17: ನೀವು ಬೆಂಗಳೂರಿಗೆ ಹೋಗಬೇಕು ಎಂದು ಆಲೋಚಿಸಿದ್ದೀರಾ ಹಾಗಾದರೆ ಪ್ರಸ್ತುತ ಕೋವಿಡ್ ಮಾರ್ಗಸೂಚಿಗಳನ್ನು ತಿಳಿದುಕೊಳ್ಳಲೇಬೇಕು.
ಕೊರೊನಾ ಸೋಂಕು ಸಂಪೂರ್ಣವಾಗಿ ಕಡಿಮೆಯಾಗದ ಹಿನ್ನೆಲೆಯಲ್ಲಿ ಕೊರೊನಾ ನಿಯಮವನ್ನು ಸಡಿಲಗೊಳಿಸಿದ್ದರೂ 144 ಸೆಕ್ಷನ್ ಜಾರಿಮಾಡಲಾಗಿದೆ ಇದು ಜೂನ್ 21ರವರೆಗೆ ಇರಲಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಮಂದಿ ಒಂದೆಡೆ ಸೇರುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಹೇಳಲಾಗಿದೆ.
ಬಸ್ನಿಲ್ದಾಣ, ಏರ್ಪೋರ್ಟ್, ರೈಲ್ವೆ ನಿಲ್ದಾಣಗಳಲ್ಲಿ ಈ ನಿಯಮ ಅನ್ವಯವಾಗುವುದಿಲ್ಲ. ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗದಲ್ಲಿ ಸ್ಥಿರತೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 7345 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಒಂದು ದಿನದಲ್ಲಿ 17913 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 148 ಮಂದಿ ಬಲಿಯಾಗಿದ್ದಾರೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2784355ಕ್ಕೆ ಏರಿಕೆಯಾಗಿದೆ. 33296 ಜನರು ಪ್ರಾಣ ಬಿಟ್ಟಿದ್ದು, ಈವರೆಗೂ 2599472 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 151566 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನ ಕೋವಿಡ್ 19 ಮಾರ್ಗಸೂಚಿಯಲ್ಲೇನಿದೆ?
-ಹೋಟೆಲ್ಹಾಗೂ ರೆಸ್ಟೋರೆಂಟ್ಗಳು ತೆರೆದಿರಲಿದ್ದು ಪಾರ್ಸೆಲ್ ಸೇವೆ ಲಭ್ಯ
-ಬಾರ್ಗಳಲ್ಲಿ ಮಧ್ಯಾಹ್ನ 2ರವರೆಗೂ ಮದ್ಯವನ್ನು ಒಯ್ಯಲು ಅವಕಾಶ
-ಎಲ್ಲಾ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಬಹುದು ಈ ಮೊದಲು 10 ಗಂಟೆಯವರೆಗೆ ಅವಕಾಶವಿತ್ತು
-ಎಲ್ಲಾ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಅನುಮತಿ
-ಉದ್ಯಾನಗಳು ಬೆಳಗಿನ ಜಾವ 5 ರಿಂದ 2ರವರೆಗೆ ತೆರೆದಿರುತ್ತದೆ
-ಬೀದಿ ವ್ಯಾಪಾರಿಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ಅಂಗಡಿ ತೆರೆಯಲು ಅವಕಾಶ
-ಆಟೋ, ಟ್ಯಾಕ್ಸಿಗಳಿಗೆ ಅವಕಾಶ ಇಬ್ಬರು ಮಾತ್ರ ಒಟ್ಟಿಗೆ ಸಂಚರಿಸಬಹುದು
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications