ಏ.3ರಿಂದ ಕೆ.ಆರ್.ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನಿಷೇಧ
ಬೆಂಗಳೂರು, ಮಾರ್ಚ್ 22 : ಬೆಂಗಳೂರಿನ ಬೃಹತ್ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಏ.3ರಿಂದ ಕೆ.ಆರ್.ಮಾರುಕಟ್ಟೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ವ್ಯಾಪಾರಿಗಳು ನಿರ್ಧರಿಸಿದ್ದಾರೆ. ಮಾರ್ಕೆಟ್ನಲ್ಲಿ ಪ್ರತಿನಿತ್ಯ 1 ಸಾವಿರ ಕೆ.ಜಿ ಪ್ಲಾಸ್ಟಿಕ್ ಬಳಕೆಯಾಗುತ್ತದೆ ಎಂದು ಅಂದಾಜಿಸಲಾಗಿದೆ.
'ಏಪ್ರಿಲ್ 2ರಂದು ಕೆ.ಆರ್.ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಆರಂಭಿಸಲಿದ್ದೇವೆ. ಅಭಿಯಾನದ ಮೂಲಕ ಮಾರುಕಟ್ಟೆ ಆವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ವ್ಯಾಪಾರಿಗಳು ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಏ.3ರಿಂದ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಲಾಗುತ್ತದೆ' ಎಂದು ಕೆ.ಆರ್. ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಿ.ಎಂ. ದಿವಾಕರ್ ಹೇಳಿದ್ದಾರೆ. [ಪ್ಲಾಸ್ಟಿಕ್ ನಿಷೇಧ ಅಧಿಕೃತ, ನಿಯಮ ಮುರಿದರೆ ಜೈಲೂಟ]

ಏ.3ರಿಂದ ಪ್ಲಾಸ್ಟಿಕ್ ಬಳಕೆ ಇಲ್ಲ : 'ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಬಿಬಿಎಂಪಿ ಅಧಿಕಾರಿಗಳು ಮಾರುಕಟ್ಟೆಯ ವ್ಯಾಪಾರಿಗಳನ್ನು ಭೇಟಿ ಮಾಡಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಮನವಿ ಮಾಡಲಿದ್ದಾರೆ. ಏಪ್ರಿಲ್ 3ರಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಹಲವು ವ್ಯಾಪಾರಿಗಳು ಒಪ್ಪಿದ್ದಾರೆ' ಎಂದು ದಿವಾಕರ್ ತಿಳಿಸಿದ್ದಾರೆ. [ಪರಿಸರ ಸ್ನೇಹಿಯಾದ ಸರ್ಕಾರ, ಪ್ಲಾಸ್ಟಿಕ್ ಬಳಕೆ ನಿಷೇಧ]
ಕೆ.ಆರ್.ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಸುಮಾರು 1 ಸಾವಿರ ಕೆ.ಜಿ ಪ್ಲಾಸ್ಟಿಕ್ ಬಳಕೆಯಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಅದರ ಪ್ರಮಾಣ ದುಪ್ಪಟಾಗುತ್ತದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಿದರೆ ಮಾರುಕಟ್ಟೆಯ ಕಸದ ಪ್ರಮಾಣವೂ ಕಡಿಮೆಯಾಗಲಿದೆ. [ಪ್ಲಾಸ್ಟಿಕ್ ಅತಿ ಬಳಕೆ ಮನುಕುಲಕ್ಕೆ ತಂದಿಟ್ಟ ಅಪಾಯ]
ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಮಾರುಕಟ್ಟೆಯ ಪ್ರತಿ ವ್ಯಾಪಾರಿಗಳನ್ನು ಭೇಟಿ ಮಾಡಿ, ಕರಪತ್ರ ಹಂಚಿ ಪ್ಲಾಸ್ಟಿಕ್ ಬದಲಿಗೆ ಪರ್ಯಾಯ ವಸ್ತುಗಳನ್ನು ಬಳಸುವಂತೆ ಜಾಗೃತಿ ಮೂಡಿಸಲಾಗುತ್ತದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಿದರೆ ತಿಂಗಳು 5000 ರೂ. ಉಳಿತಾಯವಾಗುತ್ತದೆ ಎಂದು ಹೂವಿನ ವ್ಯಾಪಾರಿಗಳು ಹೇಳಿದ್ದು, ಅಭಿಯಾನಕ್ಕೆ ಬೆಂಬಲ ಕೊಟ್ಟಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಅವರು, ವ್ಯಾಪಾರಿಗಳ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿದರೆ ಕಸದ ಸಮಸ್ಯೆ ಕಡಿಮೆಯಾಗಲಿದೆ ಎಂದು ಅವರ ಹೇಳಿದ್ದಾರೆ.
ಅಂದಹಾಗೆ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ 40 ಮೈಕ್ರಾನ್ಗಿಂತ ತೆಳುವಾದ ಎಲ್ಲ ಬಗೆಯ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ನಿಷೇಧ ಹೇರಿದೆ. 40 ಮೈಕ್ರಾನ್ಗಿಂತ ತೆಳುವಾದ ಪ್ಲಾಸ್ಟಿಕ್ ಪುನರ್ ಬಳಕೆ (recycle) ಮಾಡಲು ಆಗುವುದಿಲ್ಲ. ಮಣ್ಣಿನಲ್ಲಿ ಕೊಳೆಯುವುದಿಲ್ಲ, ಸುಟ್ಟರೆ ರಾಸಾಯನಿಕಗಳಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ, ಅವುಗಳನ್ನು ನಿಷೇಧಿಸಲಾಗಿದೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್












Click it and Unblock the Notifications