ರಾಜಕೀಯ ಜೀವನ ಕಳೆದುಕೊಳ್ಳಬೇಡಿ: ಅತೃಪ್ತರಿಗೆ ಡಿಕೆಶಿ ಮನವಿ
Recommended Video
ಬೆಂಗಳೂರು, ಜುಲೈ 22: 'ಬಿಜೆಪಿಯು ನಿಮ್ಮ ಹಾದಿ ತಪ್ಪಿಸುತ್ತಿದೆ, ಸದನಕ್ಕೆ ಬಂದು ನಿಮ್ಮ ರಾಜಕೀಯ ಜೀವನವನ್ನು ಉಳಿಸಿಕೊಳ್ಳಿ' ಎಂದು ಡಿ.ಕೆ.ಶಿವಕುಮಾರ್ ಅವರು ಅತೃಪ್ತ ಶಾಸಕರಿಗೆ ಮನವಿ ಮಾಡಿದರು.
ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಗುರುವಾರ ಎತ್ತಿದ್ದ ಕಾರ್ಯಲೋಪಕ್ಕೆ ಸ್ಪೀಕರ್ ಅವರು ಇಂದು ನೀಡಿರುವ ರೂಲಿಂಗ್ ಅನ್ನು ಉಲ್ಲೇಖಿಸಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನೂ ಉಲ್ಲೇಖಿಸಿ ಅತೃಪ್ತರು ಅನರ್ಹರಾಗುವ ಸಾಧ್ಯತೆ ಇದೆ ಎಂದರು.
ಸ್ಪೀಕರ್ ಅವರು ಇಂದು ನೀಡಿರುವ ರೂಲಿಂಗ್ನಂತೆ ನಾಳೆ ಬೆಳಿಗ್ಗೆ 11 ಗಂಟೆಗೆ ಅತೃಪ್ತ ಶಾಸಕರು ವಿಚಾರಣೆಗೆ ಬರಬೇಕಿದೆ. ಅವರು ನಾಳೆ ಬಾರದೇ ಇದ್ದಲ್ಲಿ ಸಂಜೆ ವೇಳೆಗೆ ಸ್ಪೀಕರ್ ಅವರು ಕಾನೂನು ಪ್ರಕಾರ ನಿರ್ಣಯ ತೆಗೆದುಕೊಂಡರೆ ಅತೃಪ್ತರು ರಾಜಕೀಯ ಜೀವನ ಕಳೆದುಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

'ನೀವೆಲ್ಲಾ ಮಂತ್ರಿ ಆಗುವ ಆಸೆ ಹೊಂದಿದ್ದೀರಾ? ಆದರೆ ಬಿಜೆಪಿ ನಿಮ್ಮನ್ನು ಅವರಿಗೆ ಹೇಗೆ ಬೇಕೋ ಹಾಗೆ ಬಳಸಿಕೊಳ್ಳುತ್ತಿದೆ, ಬಿಜೆಪಿಯ ಸ್ನೇಹಿತರು ನಿಮಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ, ಅನರ್ಹರಾದರೆ ರಾಜಕೀಯ ಜೀವನ ಅಂತ್ಯವಾಗುತ್ತದೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ
ಡಿ.ಕೆ.ಶಿವಕುಮಾರ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಮಾಧ್ಯಮಗಳ ಮುಂದೆ ಓದಿ ಹೇಳಿದರು. ಅತೃಪ್ತರಿಗೆ ಸ್ಪೀಕರ್ ಅವರು ನೊಟೀಸ್ ಜಾರಿ ಮಾಡಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಹಾಜರಾಗಲು ಕೇಳಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications