Get Updates
Get notified of breaking news, exclusive insights, and must-see stories!

ರಾಜಕೀಯ ಜೀವನ ಕಳೆದುಕೊಳ್ಳಬೇಡಿ: ಅತೃಪ್ತರಿಗೆ ಡಿಕೆಶಿ ಮನವಿ

Recommended Video

      ಅತೃಪ್ತರಿಗೆ ಕೊನೆಗೂ ವಾರ್ನಿಂಗ್ ಕೊಟ್ಟ ಡಿಕೆಶಿ..? | Oneindia Kannada

      ಬೆಂಗಳೂರು, ಜುಲೈ 22: 'ಬಿಜೆಪಿಯು ನಿಮ್ಮ ಹಾದಿ ತಪ್ಪಿಸುತ್ತಿದೆ, ಸದನಕ್ಕೆ ಬಂದು ನಿಮ್ಮ ರಾಜಕೀಯ ಜೀವನವನ್ನು ಉಳಿಸಿಕೊಳ್ಳಿ' ಎಂದು ಡಿ.ಕೆ.ಶಿವಕುಮಾರ್ ಅವರು ಅತೃಪ್ತ ಶಾಸಕರಿಗೆ ಮನವಿ ಮಾಡಿದರು.

      ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಗುರುವಾರ ಎತ್ತಿದ್ದ ಕಾರ್ಯಲೋಪಕ್ಕೆ ಸ್ಪೀಕರ್ ಅವರು ಇಂದು ನೀಡಿರುವ ರೂಲಿಂಗ್ ಅನ್ನು ಉಲ್ಲೇಖಿಸಿ, ಪಕ್ಷಾಂತರ ನಿಷೇಧ ಕಾಯ್ದೆಯನ್ನೂ ಉಲ್ಲೇಖಿಸಿ ಅತೃಪ್ತರು ಅನರ್ಹರಾಗುವ ಸಾಧ್ಯತೆ ಇದೆ ಎಂದರು.

      ಸ್ಪೀಕರ್ ಅವರು ಇಂದು ನೀಡಿರುವ ರೂಲಿಂಗ್‌ನಂತೆ ನಾಳೆ ಬೆಳಿಗ್ಗೆ 11 ಗಂಟೆಗೆ ಅತೃಪ್ತ ಶಾಸಕರು ವಿಚಾರಣೆಗೆ ಬರಬೇಕಿದೆ. ಅವರು ನಾಳೆ ಬಾರದೇ ಇದ್ದಲ್ಲಿ ಸಂಜೆ ವೇಳೆಗೆ ಸ್ಪೀಕರ್ ಅವರು ಕಾನೂನು ಪ್ರಕಾರ ನಿರ್ಣಯ ತೆಗೆದುಕೊಂಡರೆ ಅತೃಪ್ತರು ರಾಜಕೀಯ ಜೀವನ ಕಳೆದುಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

       Please come back: DK Shivakumar request dissident MLAs

      'ನೀವೆಲ್ಲಾ ಮಂತ್ರಿ ಆಗುವ ಆಸೆ ಹೊಂದಿದ್ದೀರಾ? ಆದರೆ ಬಿಜೆಪಿ ನಿಮ್ಮನ್ನು ಅವರಿಗೆ ಹೇಗೆ ಬೇಕೋ ಹಾಗೆ ಬಳಸಿಕೊಳ್ಳುತ್ತಿದೆ, ಬಿಜೆಪಿಯ ಸ್ನೇಹಿತರು ನಿಮಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ, ಅನರ್ಹರಾದರೆ ರಾಜಕೀಯ ಜೀವನ ಅಂತ್ಯವಾಗುತ್ತದೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

      ಕಲಾಪದಲ್ಲಿ ಗದ್ದಲ, ಚರ್ಚೆ, ಸಿಟ್ಟು, ನಗು ಹಲವು ಭಾವ ಚಿತ್ರಗಳಲ್ಲಿ

      ಡಿ.ಕೆ.ಶಿವಕುಮಾರ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಮಾಧ್ಯಮಗಳ ಮುಂದೆ ಓದಿ ಹೇಳಿದರು. ಅತೃಪ್ತರಿಗೆ ಸ್ಪೀಕರ್ ಅವರು ನೊಟೀಸ್ ಜಾರಿ ಮಾಡಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಹಾಜರಾಗಲು ಕೇಳಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+