Breaking news : ಶಾಸಕ ವಿಶ್ವನಾಥ್ ಹತ್ಯೆಗೆ ಸಂಚು: ಕುಳ್ಳ ದೇವರಾಜ್ ಅರೆಸ್ಟ್
ಬೆಂಗಳೂರು, ಡಿ. 02: ಶಾಸಕ ಎಸ್.ಅರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಕುಳ್ಳ ದೇವರಾಜ್ ನನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆಗೆ ಕರೆಸಿದ ಪೊಲೀಸರು ಕುಳ್ಳ ದೇವರಾಜ್ ನನ್ನು ಬಂಧನ ಪ್ರಕ್ರಿಯೆ ಮುಗಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಬ್ಬ ಆರೋಪಿ, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಅವರನ್ನು ವಿಚಾರಣೆಗೆ ನಡೆಸಲು ಸಿದ್ಧತೆ ನಡೆದಿದ್ದು, ಆತನನ್ನೂ ಬಂಧಿಸುವ ಸಾಧ್ಯತೆಯಿದೆ.
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿಕೃಷ್ಣ, ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣದಲ್ಲಿ ಕುಳ್ಳ ದೇವರಾಜ್ನನ್ನು ಅರೆಸ್ಟ್ ಮಾಡಿದ್ದೇವೆ. ಎಸ್.ಆರ್.ವಿಶ್ವನಾಥ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ಅವರ ಬಳಿ ಇದ್ದ ದಾಖಲೆಗಳನ್ನು ತನಿಖೆಗೆ ಹಾಜರು ಪಡಿಸಿದ್ದಾರೆ. ಅದರ ಆಧಾರದ ಮೇಲೆ ಕುಳ್ಳ ದೇವರಾಜ್ ನನ್ನು ವಿಚಾರಣೆಗೆ ಕರೆಸಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನು ಬಂಧಿತ ಆರೋಪಿ ಕುಳ್ಳ ದೇವರಾಜ್ ನನ್ನು ಮಹಜರು ನಡೆಸಲು ಇನ್ಸ್ಪೆಕ್ಟರ್ ನವೀನ್ ನೇತೃತ್ವದಲ್ಲಿ ಯಲಹಂಕ ಕಡೆ ಕರೆದೊಯ್ಯಲಾಗಿದೆ.

ಕುಳ್ಳ ದೇವರಾಜ್ ಜತೆ ಸಂಭಾಷಣೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜಾನುಕುಂಟೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಕುಳ್ಳ ದೇವರಾಜ್ ಜತೆ ಸಂಭಾಷಣೆ ಮಾಡಿರುವ ವಿಡಿಯೋ, ಅಡಿಯೋ ಆಧರಿಸಿ ಗೋಪಾಲಕೃಷ್ಣ ಹೇಳಿಕೆ ಪಡೆಯಲಿದ್ದಾರೆ. ವಿಚಾರಣೆಯಲ್ಲಿ ಹತ್ಯೆಗೆ ಸಂಚು ರೂಪಿಸಿದ್ದು ದೃಢಪಟ್ಟರೆ ಅತನನ್ನು ಬಂಧಿಸುವ ಸಾಧ್ಯತೆಯಿದೆ.
Recommended Video
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications