ಮೋದಿ ಸಭೆ: ತುರ್ತು ದೂರವಾಣಿ ಸಂಖ್ಯೆಗಳು ಹೀಗಿವೆ
ಬೆಂಗಳೂರು, ನ. 15: ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನಾಳೆ ಅಲ್ಲ ನಾಳಿದ್ದೇ ಬೆಂಗಳೂರು ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ತನ್ನಿಮಿತ್ತ ಬೆಂಗಳೂರು ಅರಮನೆ ಮೈದಾನ ಈಗಾಗಲೇ ಶಸ್ತ್ರಸಜ್ಜಿತ ಪೊಲೀಸರಿಂದ ಯುದ್ಧಕೋಟೆಯಂತೆ ಮಾರ್ಪಟ್ಟಿದೆ. ಗಮನಾರ್ಹವೆಂದರೆ ಮೋದಿ ಅಭಿಮಾನಿಗಳು ಸಹ ಭಾರಿ ಸಂಖ್ಯೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಈಗಾಗಲೇ ಹೊರಟಿದ್ದು, ಇಂದು ನಾಳೆ ವೇಳೆಗೆ ಬೆಂಗಳೂರನ್ನು ತಲುಪಿಕೊಳ್ಳಲಿದ್ದಾರೆ.
ಈ ಮಧ್ಯೆ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸಭೆಗೆ ತೃಣಮಾತ್ರವೂ ಭದ್ರತಾ ಲೋಪವಾಗದಂತೆ ಬೆಂಗಳೂರು ಪೊಲೀಸರು ಟೊಂಕಕಟ್ಟಿ ನಿಂತಿದ್ದು ಅದಾಗಲೇ ರೋಡ್ ಮ್ಯಾಪ್ ಸಿದ್ಧಪಡಿಸಿಕೊಂಡು ಪಹರೆ ಕಾಯುತ್ತಿದ್ದಾರೆ. ಈಗಾಗಲೇ ಅವರು ಸಂಚರಿಸಬಹುದಾದ ರಸ್ತೆಗಳನ್ನು ಒಂದು ವಾರದಿಂದ ಇಂಚಿಂಚೂ ಅಳೆಯುತ್ತಿದ್ದಾರೆ.

ಮೋದಿ ಅವರು ಬಂದು-ಹೋಗುವವರೆಗೂ ಬೆಂಗಳೂರಿನ ಯಾವುದೇ ಮೂಲೆಯಲ್ಲಿ ಏನೇ ಅನುಮಾನಾಸ್ಪದ ಸಂಗತಿ ಕಣ್ಣಿಗೆ ಬಿದ್ದರೆ ತಕ್ಷಣ ನಮಗೊಂದು ಕರೆ ಮಾಡಿ ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬಂದೋಬಸ್ತ್ ವೇಳೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾದರೂ ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಎಂಬಂತೆ ಕೋರಿದ್ದಾರೆ.
In case of any suspicious and un-claimed objective lying anywhere and parked vehicle in public places it is requested to bring it to the police or Control Room immediately.
ತುರ್ತು ಸಂದರ್ಭದಲ್ಲಿ ಈ ಕೆಳಗಿನ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡುವಂತೆ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಮನವಿ ಮಾಡಿದ್ದಾರೆ.
:Dial -100.
:080-22943322.
:080-22942222.
:080-22942338.
ಪೊಲೀಸ್ ಭದ್ರತೆ ಹೀಗಿದೆ: ನರೇಂದ್ರ ಮೋದಿ ಅವರ ಭಾರತ ಗೆಲ್ಲಿಸಿ ಸಮಾವೇಶದ ಭದ್ರತೆಗೆ 3 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. 10 ಡಿಸಿಪಿ, 25 ಎಸಿಪಿ, 100 ಇನ್ಸ್ ಪೆಕ್ಟರ್ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ












Click it and Unblock the Notifications