ಅಶ್ವತ್ಥನಾರಾಯಣ ಅವರ ಸ್ವಚ್ಛಭಾರತ ಕಳಕಳಿಗೆ ಭೇಷ್ ಎಂದ ಮೋದಿ
Recommended Video

ಬೆಂಗಳೂರು, ಸೆಪ್ಟೆಂಬರ್ 22: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಪ್ರಧಾನಿ ನರೇಂದ್ರ ಮೊದಿಯವರು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ನರೇಂದ್ರ ಮೋದಿಯವರು ಉದ್ಘಾಟಿಸಿದ 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಭಾಗವಾಗಿ ಬೆಂಗಳೂರಿನ ಮತ್ತಿಕೆರೆಯ ಜಯರಾಮ್ ಕಾಲೋನಿಯಲ್ಲಿ ಡಾ.ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ನಡೆದ ಸ್ವಚ್ಛತಾ ಅಭಿಯಾನದ ಚಿತ್ರಗಳನ್ನು ಅಶ್ವತ್ಥನಾರಾಯಣ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.
ಅಶ್ವತ್ಥನಾರಾಯಣ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಮೋದಿಯವರು ಇಂಥ ಕಾರ್ಯಗಳು ಮತ್ತಷ್ಟು ನಡೆಯಲಿ ಎಂದು ಅಭಿಪ್ರಾಯಪಟ್ಟರು.
|
ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟ್
ಡಾ.ಅಶ್ವತ್ಥ ನಾರಾಯಣ ಅವರ 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಚಿತ್ರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದ ಮೋದಿ, ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿ, 'ಎಕ್ಸೆಲೆಂಟ್! ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಇಂಥ ಕೆಲಸಗಳು ಮತ್ತಷ್ಟು ನಡೆಯಬೇಕು' ಎಂದಿದ್ದಾರೆ.
| Array |
ಧನ್ಯವಾದ ಅರ್ಪಿಸಿದ ಅಶ್ವತ್ಥನಾರಾಯಣ
ಮೋದಿಯವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಅಶ್ವತ್ಥ ನಾರಾಯಣ, 'ಧನ್ಯವಾದಗಳು ಪ್ರಧಾನಿ ನರೇಂದ್ರ ಮೋದಿಯವರೇ. ನಾವೆಲ್ಲ ಸ್ವಚ್ಛ ಭಾರತ ವ್ರತವನ್ನು ಸಮರ್ಪಣಾ ಭಾವದಿಂದ ಮಾಡುತ್ತಿದ್ದೇವೆ. ನಿಮ್ಮ ನಾಯಕತ್ವದಲ್ಲಿ ನಾವು ಮಹಾತ್ಮಾ ಗಾಂಧೀಜಿಯವರ ಸ್ವಚ್ಛಭಾರತದ ಕನಸನ್ನು ಖಂಡಿತ ಈಡೇರಿಸುತ್ತೇವೆ ಎಂದಿದ್ದಾರೆ.'

ಎನ್ ಸಿಸಿ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಭಾಗಿ!
ಗಾಯತ್ರಿ ನಗರದ ಡಿ ಬ್ಲಾಕ್ ನಲ್ಲೂ ಇತ್ತೀಚೆಗೆ ಕಸ ವಿಭಜನೆ ಕುರಿತು ಅರಿವು ಮೂಡಿಸುವ ಕಾರ್ಯದಲ್ಲಿ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನ ಎನ್ ಎಸ್ ಎಸ್ ಮತ್ತು ಎನ್ ಸಿಸಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೂ ಸಹ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ನಡೆದ 'ಸ್ವಚ್ಛತಾ ಹಿ ಸೇವಾ' ಅಭಿಯಾನದ ಭಾಗವೇ ಆಗಿತ್ತು.

ಮಹಾತ್ಮಾ ಗಾಂಧಿಯವರ 150 ನೇ ಜನ್ಮದಿನಾಚರಣೆ
ಈ ವರ್ಷದ ಅಕ್ಟೋಬರ್ 2 ರಂದು ರಾಷ್ತ್ರಪಿತ ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮದಿನಾಚರಣೆಯ ನಿಮಿತ್ತ 'ಸ್ವಚ್ಛತಾ ಹಿ ಸೇವಾ' ಅಭಿಯಾನವನ್ನು ನರೇಂದ್ರ ಮೋದಿಯವರು ಸೆ.15 ರಂದು ಉದ್ಘಾಟಿಸಿದರು. ಈ ಅಭಿಯಾನದ ಅಡಿಯಲ್ಲಿ ದೇಶದಾದ್ಯಂತ ಹಲವು ನಗರಗಳಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು, ರಾಜಕಾರಣಿಗಳು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಇದೇ ಅಕ್ಟೋಬರ್ 2 ರಂದು ಸ್ವಚ್ಛ ಭಾರತ ಯೋಜನೆ ಜಾರಿಗೆ ಬಂದೂ ನಾಲ್ಕು ವರ್ಷವಾಗಲಿದೆ.
-
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Gold Price: ಇಂದು ಚಿನ್ನದ ಬೆಲೆಯಲ್ಲಿ ದಾಖಲೆಯ ಕುಸಿತ, ಯುದ್ಧದ ಎಫೆಕ್ಟ್ನಿಂದ ಬಂಗಾರ-ಬೆಳ್ಳಿ ಮತ್ತಷ್ಟು ದುಬಾರಿ! ಮುನ್ಸೂಚನೆ -
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ












Click it and Unblock the Notifications