ನರೇಂದ್ರ ಮೋದಿ ರೋಡ್ ಶೋ ಎಫೆಕ್ಟ್: ಕಲ್ಯಾಣ ಮಂಟಪಕ್ಕೆ ಬಾರದ ಮದುಮಗ, ಬೈಕ್ನಲ್ಲಿ ತೆರಳಿದ ಮದುಮಗಳು
ಶನಿವಾರ, ಏಪ್ರಿಲ್ 29ರಂದು ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿದರು. ಈ ಹಿನ್ನೆಲೆಯಲ್ಲಿ ಮಧ್ಯಾಹ್ನದಿಂದಲೇ ರೋಡ್ ಶೋ ಸಾಗುವ ರಸ್ತೆಯನ್ನು ಬಂದ್ ಮಾಡಲಾಗಿತ್ತು.
ಈ ವೇಳೆ ನೂತನ ವಿವಾಹ ಬದುಕಿಗೆ ಕಾಲಿಡಬೇಕಿದ್ದ ಮದುಮಗ ಮತ್ತು ಮದುಮಗಳು ಪರದಾಡಬೇಕಾದ ಪರಿಸ್ಥಿತಿ ಉಂಟಾಯಿತು. ಬೆಳಗ್ಗೆ ಮಾಗಡಿ ರಸ್ತೆಯಲ್ಲಿನ ಮದುಮಗನನ್ನು ಕಲ್ಯಾಣ ಮಂಟಪಕ್ಕೆ ಹೋಗಲು ಬಿಡದ ಪೊಲೀಸರು ಅಡ್ಡಗಟ್ಟಿದ್ದರು.

ನಂತರ ಮಧ್ಯಾಹ್ನ ಸುಂಕದಕಟ್ಟೆಯ ಬಳಿ ಮತ್ತೊಂದು ಪ್ರಕರಣದಲ್ಲಿ ಕಲ್ಯಾಣ ಮಂಟಪಕ್ಕೆ ಹೋಗುತ್ತಿದ್ದ ಮದುಮಗಳನ್ನು ಪೊಲೀಸರು ಅಡ್ಡಗಟ್ಟಿದ ಘಟನೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್ನಿಂದ ಸುಮನಹಳ್ಳಿ ಜಂಕ್ಷನ್ವರೆಗೆ ಸುಮಾರು 5.3 ಕಿಮೀ ರೋಡ್ ಶೋ ನಡೆಸಿದರು.
ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯಿಂದ ರೋಡ್ ಶೋ ಹಿನ್ನೆಲೆಯಲ್ಲಿ ರಸ್ತೆಗಳ ಬಂದ್ ಮಾಡಿದ್ದರಿಂದ ನಿತ್ಯ ಓಡಾಡುವ ಜನರಿಗೆ ಕಿರಿಕಿರಿ ಉಂಟಾಯಿತು. ಛತ್ರಕ್ಕೆ ತೆರಳಲು ಮದುಮಗ ಹಾಗೂ ಮದುಮಗಳು ಪರದಾಡಿದರು. ಕಾರಿನಲ್ಲಿ ತೆರಳಲು ಪೊಲೀಸರು ಅನುಮತಿ ನೀಡದ ಕಾರಣ ಕೊನೆಗೆ ಮದುಮಗಳು ಬೈಕ್ನಲ್ಲಿ ಕಲ್ಯಾಣ ಮಂಟಪಕ್ಕೆ ಹೋಗಬೇಕಾದ ಪರಿಸ್ಥಿತಿ ಬಂತು.
ಸುಮನಹಳ್ಳಿ ಜಂಕ್ಷನ್ನಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಿದ್ದಾರೆ. ನಾವು ಬರುವ ವೇಳೆಗೆ ಟ್ರಾಫಿಕ್ ಜಾಮ್ ಆಗಿತ್ತು. ಮದುಮಗ ಕೂಡ ಇನ್ನೂ ಮದುವೆ ಮಂಟಪಕ್ಕೆ ಬಂದಿಲ್ಲ. ಜನರು ಮದುವೆಗೆ ಬರಲು ಕೂಡ ಆಗುತ್ತಿಲ್ಲ. ಒಬ್ಬರಿಗಾಗಿ ಇಷ್ಟೆಲ್ಲಾ ಸಮಸ್ಯೆ ಆಗುತ್ತಿರುವ ಬಗ್ಗೆ ರಾಜಕೀಯ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ದೂರಿದರು.
ನಾವು ಒಂದು ತಿಂಗಳ ಮುಂಚೆಯೇ ಮದುವೆ ದಿನಾಂಕ ನಿಗದಿ ಮಾಡಿ, ಕಲ್ಯಾಣ ಮಂಟಪ ಬುಕ್ ಮಾಡಿದ್ದೇವು. ಈಗ ಏಕಾಏಕಿ ರೋಡ್ ಶೋ ಘೋಷಣೆ ಮಾಡಿದ್ದಾರೆ. ಪೊಲೀಸರು ಕಲ್ಯಾಣ ಮಂಟಪದ ಎದುರು ಕೂಡ ಬ್ಯಾರಿಕೇಡ್ ಹಾಕಿದ್ದಾರೆ. ಮದುವೆ ಊಟದ ತಯಾರಿಗೆ ಬೇಕಿದ್ದ ಹಲವು ವಸ್ತುಗಳನ್ನು ತೆಗೆದುಕೊಂಡು ಬರಲು ಆಗುತ್ತಿಲ್ಲ. ಬಹಳ ದೂರದಿಂದ ಈಗ ವಸ್ತುಗಳನ್ನು ಹೊತ್ತುಕೊಂಡು ತರುವ ಸ್ಥಿತಿ ನಿರ್ಮಾಣವಾಗಿದೆ. ಬಹಳ ಬೇಸರ ಆಗಿದೆ ಎಂದಿದ್ದಾರೆ.
ಕಲ್ಯಾಣ ಮಂಟಪಕ್ಕೆ ಹೋಗಲು ಮದುಮಗಳನ್ನು ಬೈಕ್ನಲ್ಲಿ ಕರೆತಂದ ಕುಟುಂಬಸ್ಥರು, ರಸ್ತೆಯ ಪಕ್ಕದಲ್ಲಿರುವ ಮುದ್ದಣ್ಣ ಛತ್ರದಲ್ಲಿ ಮದುವೆ ನಿಗದಿಯಾಗಿದ್ದು, ಹೋಗಲು ಬಿಡುವಂತೆ ಮನವಿ ಮಾಡಿದರು.
ಬೈಕ್ನಲ್ಲಿ ಹೋಗುತ್ತಿದ್ದ ಮದುಮಗಳು, ಚಾಲಕ ಹಾಗೂ ಕಲಶ ಹಿಡಿದು ಕುಳಿತಿದ್ದ ಮಹಿಳೆಯನ್ನು ನೋಡಿದ ಪೊಲೀಸರು ಕಲಶವನ್ನು ಸ್ಕ್ಯಾನ್ ಮಾಡಿ ಪರಿಶೀಲನೆ ನಡೆಸಿದರು. ಮದುಮಗಳನ್ನು ಅಡಡಗಟ್ಟಿದ ಪೊಲೀಸರ ನಡುವೆ ನಡೆಯುತ್ತಿದ್ದ ವಾಗ್ವಾದ ಸೆರೆಹಿಡಿಯಲು ಮಾಧ್ಯಮಗಳ ಕ್ಯಾಮೆರಾಗಳು ಮುಂದಾಗುತ್ತಿದ್ದಂತೆ, ಪೊಲೀಸರು ಮದುಮಗಳು ಕಲ್ಯಾಣ ಮಂಟಪದತ್ತ ತೆರಳಲು ಅವಕಾಶ ಮಾಡಿಕೊಟ್ಟರು.
-
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications