ಮಾಹಿತಿ ಯುಗದಲ್ಲಿನ ಬದಲಾವಣೆ ಕೈಗಾರಿಕಾ ಯುಗಕ್ಕಿಂತಲೂ ಕ್ಷಿಪ್ರ: ಮೋದಿ
ಬೆಂಗಳೂರು, ನವೆಂಬರ್ 19: ಮಾಹಿತಿ ಯುಗದಲ್ಲಿನ ಬದಲಾವಣೆ ಕೈಗಾರಿಕಾ ಯುಗಕ್ಕಿಂತಲೂ ಕ್ಷಿಪ್ರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
'ಬೆಂಗಳೂರು ಟೆಕ್ ಸಮಿತ್' 2020 ಉದ್ಘಾಟಿಸಿ ಮಾತನಾಡಿದ ಅವರು, ಕೈಗಾರಿಕಾ ಯುಗದಲ್ಲಿ ಬದಲಾವಣೆ ನಿಧಾನವಾಗಿದೆ ಆದರೆ ಮಾಹಿತಿ ಯುಗದಲ್ಲಿ ಬದಲಾವಣೆ ಕ್ಷಿಪ್ರ ಗತಿಯಲ್ಲಿ ಸಾಗಿದೆ ಎಂದರು.
ತಂತ್ರಜ್ಞಾನದಿಂದಲೇ ಆಯುಷ್ಮಾನ ಭಾರತ್ ಯಶಸ್ವಿಯತ್ತ ಸಾಗಿದೆ ಇದರಿಂದ ಬಡವರಿಗೆ ನೆರವಾಗುತ್ತದೆ. ಇಂದಿನ ತಂತ್ರಜ್ಞಾನದಿಂದ ಭಾರತದಿಂದ ಯಾವುದೇ ಮೂಲೆಯಿಂದ ಆರೋಗ್ಯ ಸೇವೆ ಪಡೆಯಲು ಸಾಧ್ಯವಾಗಲಿದೆ. ತಂತ್ರಜ್ಞಾನದಿಂದ ಭಾರತೀಯರ ಜೀವನ ವೇಗವಾಗಿ ಬದಲಾಗುತ್ತಿದೆ.

ವೇಗ ಹಾಗೂ ಪಾರದರ್ಶಕತೆ ತಂತ್ರಜ್ಞಾನದಿಂದ ಬಂದಿದೆ. ಎಲ್ಲಾ ಮನೆಗಳಿಗೂ ವಿದ್ಯುತ್ ನೀಡಲು ಸಾಧ್ಯವಾಗುತ್ತಿದೆ. ದೇಶಾದ್ಯಂತ ಹಲವು ಮಾಹಿತಿ ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಕೊವಿಡ್ 19 ಸಾಂಕ್ರಾಮಿಕ ರೋಗವು ರಸ್ತೆಗೆ ಬಂದಿರುವ ಒಂದು ಅಡ್ಡಿಯೇ ಹೊರತು ಕೊನೆಯಲ್ಲ, ಕೊವಿಡ್ 19 ಸವಾಲುಗಳು ಹೊಸ ಆವಿಷ್ಕಾರಕ್ಕೆ ಕಾರಣವಾಗಿದೆ.
ಶಿಕ್ಷಣ, ಉದ್ಯೋಗ, ವಾಣಿಜ್ಯ ಆರೋಗ್ಯ ಸೇವೆಗಳಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚಾಗಿದೆ, ಇದರಿಂದ ಜನರಿಗೂ ಲಾಭವಾಗಿದೆ. ಭವಿಷ್ಯವು ಅಂದುಕೊಂಡಿದ್ದಕ್ಕಿಂತ ವೇಗವಾಗಿ ಬರುತ್ತಿದೆ.
ಯಾವುದೇ ಸಂದರ್ಭದಲ್ಲಿ ಹೊಸ ಆವಿಷ್ಕಾರವು ಮಾರಕಟ್ಟೆಯ ದಿಕ್ಕನ್ನೇ ಬದಲಿಸುವ ಶಕ್ತಿಯನ್ನು ಹೊಂದಿದೆ ಎಂದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications