ಸರಳವಾಗಿ, ಕೆಲವೇ ಗಂಟೆಗಳಲ್ಲಿ ಮುಗಿದ ದೇಶದ ಪ್ರಧಾನಿ ಮೋದಿ ತಾಯಿಯ ಅಂತ್ಯಕ್ರಿಯೆ
ಬೆಂಗಳೂರು, ಡಿ. 30: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದಾಗಿ ಬಳಲುತ್ತಿದ್ದ ಅವರನ್ನು ಬುಧವಾರ ಗುಜರಾತ್ನ ಅಹಮದಾಬಾದ್ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶುಕ್ರವಾರ ವಯೋಸಹಜ ಕಾಯಿಲೆಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ತಾಯಿಯ ನಿಧನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.
ಒಬ್ಬ ಜನಪ್ರಿಯ ಪ್ರಧಾನಿಯವರ ತಾಯಿಯ ಅಂತ್ಯಸಂಸ್ಕಾರವೆಂದರೆ, ದೊಡ್ಡ ಮೆರವಣಿಗೆ, ಜನಸಂದಣಿ, ಗಣ್ಯರು, ಭದ್ರತೆ ಇರುತ್ತದೆ. ಆದರೆ, ಪ್ರಧಾನಿ ಮೋದಿಯವರ ಮೋದಿಯವರ ತಾಯಿಯ ಅಂತ್ಯಕ್ರಿಯೆ ಯಾವುದೇ ಪ್ರಚಾರವಿಲ್ಲದೇ, ಕೆಲವೇ ಗಂಟೆಗಳಲ್ಲಿ ಮುಗಿದು ಹೋಗಿದ್ದು, ಹಲವು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದಲ್ಲಿ ಹಲವಾರು ಯೋಜನೆಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಿತ್ತು. ಆದರೆ ತಮ್ಮ ತಾಯಿ ನಿಧನದಿಂದ ಅಹಮದಾಬಾದ್ಗೆ ಹೋಗಿ ತಮ್ಮ ತಾಯಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.
ಸಾಮಾನ್ಯರಲ್ಲಿ ಸಾಮಾನ್ಯರಂತೆ ನಡೆದ ಒಂದು ಪ್ರಧಾನಿ ತಾಯಿಯ ಅಂತ್ಯಕ್ರಿಯೆ ಇದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. "ಬೆಳಗ್ಗೆ 6.00 ಗಂಟೆ ಹೊತ್ತಿಗೆ ವಿಷಯ ಗೊತ್ತಾಯ್ತು. 9:30 ಅಷ್ಟು ಹೊತ್ತಿಗೆ ಎಲ್ಲಾ ಕೆಲಸಗಳೂ ಮುಗಿದೋಯ್ತು. ಇದಕ್ಕೆ ಕೇವಲ 3:30 ಗಂಟೆ ಅಷ್ಟೇ. ದೇಶದ ಜನಪ್ರಿಯ ಪ್ರಧಾನಿಯೊಬ್ಬರ ತಾಯಿಯ ಅಂತ್ಯಕ್ರಿಯೆ ಯಾವುದೇ ಪ್ರಚಾರ, ಆಡಂಬರವಿಲ್ಲದೆ ಮುಗಿದೋಯ್ತು...!" ಎಂದು ಹಲವರು ಬರೆದುಕೊಂಡಿದ್ದಾರೆ.
"ಬೆಳ್ಳಗ್ಗಿನಿಂದ ಸಂಜೆವರೆಗಿನ ಮಾಧ್ಯಮಗಳ ಲೈವ್ ಇಲ್ಲ. ದೊಡ್ಡ ದೊಡ್ಡ ವ್ಯಕ್ತಿಗಳ ಭೇಟಿಗೆ ಅವಕಾಶ ಇಲ್ಲ. ದೊಡ್ಡ ಮಟ್ಟದಲ್ಲಿ ಶವಯಾತ್ರೆಗೆ ವ್ಯವಸ್ಥೆ ಇಲ್ಲ. ರಸ್ತೆ ಹೆದ್ದಾರಿಗಳ ಟ್ರಾಫಿಕ್ ಜಾಮ್ ಇಲ್ಲ. ಸಾರ್ವಜನಿಕ ದರ್ಶನಕ್ಕಾಗಿ ವ್ಯವಸ್ಥೆ ಇಲ್ಲ. ಮಗನ ಅಭಿಮಾನಿಗಳ ಘೋಷಣೆಗಳ ಕೂಗಿಲ್ಲ" ಎಂದಿದ್ದಾರೆ.

"ಅಂತ್ಯ ಸಂಸ್ಕಾರಕ್ಕಾಗಿ ಎಕರೆಗಟ್ಟಲೆ ಜಾಗದ ನೆಲಸಮ ಇಲ್ಲ. ಶವದ ಮೇಲೆ ರಾಷ್ಟ್ರಧ್ವಜದ ಹೊದಿಕೆ ಇಲ್ಲ. ಅಗ್ನಿಸ್ಪರ್ಶಕ್ಕೆ ಶ್ರೀಗಂಧದ ಕಟ್ಟಿಗೆಗಳಿಲ್ಲ. ಸಾಮಾನ್ಯರಲ್ಲಿ ಸಾಮಾನ್ಯರಂತೆ ನಡೆದ ಒಂದು ಪ್ರಧಾನಿ ತಾಯಿಯ ಅಂತ್ಯಕ್ರಿಯೆ ಇದು" ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ತಮ್ಮ ತಾಯಿಯ ನಿಧನದ ಬಗ್ಗೆ ಮಾಹಿತಿ ನೀಡಿ "ಭವ್ಯವಾದ ಶತಮಾನವು ಭಗವಂತನ ಪಾದದಲ್ಲಿ ನಿಂತಿದೆ. ಅಮ್ಮನಲ್ಲಿ ನಿಸ್ವಾರ್ಥ ಕರ್ಮಯೋಗಿ ಮತ್ತು ಮೌಲ್ಯಗಳಿಗೆ ಬದ್ಧವಾದ ಜೀವನ ತಪಸ್ವಿಯ ಪ್ರಯಾಣವನ್ನು ಒಳಗೊಂಡಿರುವ ತ್ರಿಮೂರ್ತಿಗಳನ್ನು ನಾನು ಯಾವಾಗಲೂ ಭಾವಿಸುತ್ತೇನೆ" ಎಂದಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications