ಬೆಂಗಳೂರು ಟೆಕ್ಕಿ ಅಜಿತಾಬ್ ನಾಪತ್ತೆ : ವರದಿ ಕೇಳಿದ ಪ್ರಧಾನಿ ಕಾರ್ಯಾಲಯ
ಬೆಂಗಳೂರು, ಸೆಪ್ಟೆಂಬರ್ 22: ಬೆಂಗಳೂರಿನ ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ದಕ್ಷಿಣದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
2017 ಡಿಸೆಂಬರ್ 18ರಂದು ವೈಟ್ಫೀಲ್ಡ್ ನಿಂದ ಅಜಿತಾಬ್ ನಾಪತ್ತೆಯಾಗಿದ್ದರು ಈ ಕುರಿತ ತನಿಖೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಪ್ರಧಾನಿ ಕಾರ್ಯಾಲಯ ಸೂಚನೆ ನೀಡಿದೆ.
ಬೇರೆ ರಾಜ್ಯಗಳ ಸಮಾಜ ವಿರೋಧಿ ಶಕ್ತಿಗಳು ಅಜಿತಾಬ್ ನನ್ನು ಟಾರ್ಗೆಟ್ ಮಾಡಿದ್ದವು ಎಂದು ಶಂಕಿಸಿದ್ದ ಆತನ ಕುಟುಂಬ ಸದಸ್ಯರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಚೇರಿಯನ್ನು ಮನವಿ ಮಾಡಿತ್ತು.

ಈ ಹಿನ್ನೆಲೆಲ್ಲಿ ಪಿಎಂಓ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ಮುಖ್ಯಕಾರ್ಯದರ್ಶಿಗಳಿಗೆ ಪತ್ರೆ ಬರೆದಿದೆ. ಅಜಿತಾಬ್ ಪ್ರಕರಣವನ್ನು ಆಸ್ಯತೆ ಮೇಲೆ ತನಿಖೆ ನಡೆಸಬೇಕು ಎಂದು ಕುಟುಂಬ ಸದಸ್ಯರು ಪ್ರಧಾನಿ ಕಾರ್ಯಾಲಯದ ಮೊರೆ ಹೋಗಿದ್ದರು.
ಮೇ 13ರಂದು ಅಜಿತಾಬ್ ಪೋಷಕರು ಪ್ರಧಾನಿ ಕಾರ್ಯಾಲಯಕ್ಕೆ ಭೇಟಿ ನೀಡಿ ಉಳಿದ ರಾಜ್ಯಗಳೂ ಅಜಿತಾಬ್ ಪತ್ತೆ ವಿಚಾರದಲ್ಲಿ ಆಸಕ್ತಿ ತೋರಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಂಧ್ರದಲ್ಲಿ ರೈಲ್ವೆ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದ ಮೂರು ಮೃತದೇಹಗಳ ಗುರುತು ಹಿಡಿಯುವಂತೆ ಪೋಷಕರನ್ನು ಕರೆಸಿಕೊಂಡಿದ್ದರು. ಆದರೆ ಅದು ಅಜಿತಾಬ್ ಆಗಿರಲಿಲ್ಲ ಎಂದು ತಿಳಿದುಬಂದಿದೆ.












Click it and Unblock the Notifications