ಮುರುಘಾಮಠ ಶಿವಮೂರ್ತಿ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಬೆಂಗಳೂರು, ಆಗಸ್ಟ್ 27: ಮುರುಘಾಮಠ ಶಿವಮೂರ್ತಿ ಶರಣರ ವಿರುದ್ದ ಪೋಕ್ಸೋ ಕಾಯ್ದೆಯಡಿ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.
ಶಿವಮೂರ್ತಿ ಮುರುಘಾ ಶರಣರ ವಿರುದ್ದ ದೂರಿನಲ್ಲೇನಿದೆ
ಚಂದ್ರಶೇಖರ್ ಎಂಬುವವರು ದೂರನ್ನು ನೀಡಿದ್ದಾರೆ. 26.08.22 ರಂದು ಚಂದ್ರ ಕುಮಾರ್ ರವರು ಜಿಲ್ಲಾ ಮಕ್ಕಳ ಕಲ್ಯಾಣ ಘಟಕ ಮೈಸೂರು ಜಿಲ್ಲೆ ಕಾನೂನು ಮತ್ತು ಪರಿವೀಕ್ಷಣಾಧಿಕಾರಿಯಾಗಿದ್ದು ಒಡನಾಡಿ ಸಂಸ್ಥೆಯವರು ಅಪ್ರಾಪ್ತ ಬಾಲಕಿರು ಅಕ್ಕಮಹಾದೇವಿ ವಸತಿ ನಿಲಯದ ನಿವಾಸಿಗಳಾಗಿರುತ್ತಾರೆ. ಈ ವಸತಿ ನಿಲಯವು ಚಿತ್ರದುರ್ಗ ಮುರುಘಾಮಠದ ಅಧೀನದಲ್ಲಿರುತ್ತದೆ. ಈ ಸಂಸ್ಥೆಯ ಮುಖ್ಯಸ್ಥರಾದ ಮಠದ ಸ್ವಾಜೀಜಿಗಳಾದ ಶಿವಮೂರ್ತಿ ಮುರುಗ ಶರಣರು ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಮೂರುವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ. ಇವರಿಗೆ ವಾರ್ಡನ್ ರಶ್ಮಿ, ಮಠದ ಮರಿಸ್ವಾಮಿಗಳಾದ ಬಸವಾದಿತ್ಯ , ಲಾಯರ್ ಗಂಗಾಧರಯ್ಯ, ಲೀಡರ್ ಪರಮ ಶಿವಯ್ಯ ಸಹಾಯವನ್ನು ಮಾಡಿರುತ್ತಾರೆ ಎಂದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿರುತ್ತಾರೆ. ಮಕ್ಕಳ ಹೇಳಿಕೆಯನ್ನು ಪಡೆದಿರುವ ವೇಳೆ ಲೈಂಗಿಕ ದೌರ್ಜನ್ಯ ನೀಡಿರುವುದು ತಿಳಿದು ಬಂದಿರುತ್ತದೆ. ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದ್ದು ಮಕ್ಕಳಿಗೆ ತಾತ್ಕಾಲಿಕವಾಗಿ ಒಡನಾಡಿ ಸಂಸ್ಥೆಯಲ್ಲಿ ವಸತಿಯನ್ನು ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಕ್ಕಳ ಹೇಳಿಕೆ ದಾಖಲು
"ಇಬ್ಬರು ಹೆಣ್ಣುಮಕ್ಕಳು ತಮಗಾದ ಅನ್ಯಾಯವನ್ನು ಹೇಳಿಕೊಂಡಿದ್ದಾರೆ. ಕಾನೂನು ಪ್ರಕಾರ 24 ಗಂಟೆ ಒಳಗೆ ಇದನ್ನು ಸಂಬಂಧ ಪಟ್ಟ ಇಲಾಖೆ ಗಮನಕ್ಕೆ ತರಬೇಕಾದದ್ದು ನಮ್ಮ ಕರ್ತವ್ಯ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮುಂದೆಯೇ ಹೆಣ್ಣುಮಕ್ಕಳು ಲಿಖಿತ ಹೇಳಿಕೆ ನೀಡಿದ್ದಾರೆ. ಅದರಂತೆ ನಿನ್ನೆ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ" ಎಂದು ಒಡನಾಡಿ ಸಂಸ್ಥಾಪಕ ಸ್ಟಾನ್ಲಿ ತಿಳಿಸಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ
Download











Click it and Unblock the Notifications