ಬೆಂಗಳೂರು: ಪಾಡ್ ಟ್ಯಾಕ್ಸಿ ಯೋಜನೆಗೆ ಆರಂಭದಲ್ಲೇ ಗ್ರಹಣ
ಬೆಂಗಳೂರು, ಜು.21: ಬಿಬಿಎಂಪಿಯು ಖಾಸಗಿ ಸಹಭಾಗಿತ್ವದಲ್ಲಿ ಪಾಡ್ ಟ್ಯಾಕ್ಸಿ ಯೋಜನೆಯನ್ನು ಆರಂಭಿಸಲು ಆಲೋಚನೆ ನಡೆಸಿತ್ತು. ಜನದಟ್ಟಣೆ ಕಡಿಮೆ ಮಾಡುವುದು ಹಾಗೂ ಮೆಟ್ರೋ ನಿಲ್ದಾಣದಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಮಹತ್ತರ ಯೋಜನೆ ಇದಾಗಿತ್ತು.
ಆದರೆ ಆರಂಭದಲ್ಲೇ ಇದಕ್ಕೆ ಅಪಸ್ವರ ಕೇಳಿಬರುತ್ತಿದೆ. ಈ ಯೋಜನೆಗೆ ನಗರ ತಜ್ಞರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಬೆಂಗಳೂರಲ್ಲಿ ಒಂದು ಕೋಟಿಗಿಂತ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಪಾಡ್ ಟ್ಯಾಕ್ಸಿಗಳಲ್ಲಿ ಒಂದು ಬಾರಿಗೆ ಕನಿಷ್ಠ 6 ಮಂದಿ ಪ್ರಯಾಣಿಸಬಹುದಾಗಿದೆ.
ಹೀಗಾಗಿ ಪಾಡ್ ಟ್ಯಾಕ್ಸಿ ಬಸಲಿಗೆ ಮೆಟ್ರೋ ರೈಲು ಮತ್ತು ಬಿಎಂಟಿಸಿ ಬಸ್ ಸಂಪರ್ಕ ಜಾಲವನ್ನೇ ಮತ್ತಷ್ಟು ವಿಸ್ತರಿಸಲು ಹೆಚ್ಚಿನ ಒತ್ತು ನೀಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಲ್ಲಿ ಪಾಡ್ ಟ್ಯಾಕ್ಸಿ ಸೇವೆ ಆರಂಭಿಸಲು ಬಿಬಿಎಂಪಿ ಉತ್ಸುಕವಾಗಿದ್ದು, ಇದಕ್ಕೆ ನಗರ ತಜ್ಞರು ಮತ್ತು ಬಿಜೆಪಿಯು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದೆ.

ನಗರದ ಟ್ರಿನಿಟಿ ವೃತ್ತದಿಂದ ವೈಟ್ಫೀಲ್ಡ್ವರೆಗ ಮತ್ತು ಹೊರವರ್ತುಲ ರಸ್ತೆಯ ಹೋಪ್ಫಾರಂವರೆಗೆ 30 ಕಿ.ಮೀ ಮಾರ್ಗದಲ್ಲಿ ಪಾಡ್ ಟ್ಯಾಕ್ಸಿ ಮಾರ್ಗವನ್ನು ನಿರ್ಮಿಸಲು ರಾಪಿಡ್ ಡ್ರಾನ್ಸಿಟ್ ಸಿಸ್ಟಂ ಪಿಆರ್ಟಿಎಸ್ ಯೋಜನೆಯ ಟೆಂಡರ್ನ್ನು ಎಸ್ಪಿಆರ್ಟಿಎಸ್, ಅಲ್ಟ್ರಾ ಪಿಆರ್ಟಿ ಲಿಮಿಟೆಡ್ ಮತ್ತು ಎಂಬೆಸಿ ಪ್ರಾಪರ್ಟಿ ಡೆವಲಪ್ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಗಳು ಪಡೆದುಕೊಂಡಿದೆ. ಇದರಿಂದ ಬಿಬಿಎಂಪಿಗೆ ವಾರ್ಷಿಕ 6.55 ಕೋಟಿ ರೂ. ಆದಾಯ ಬರಲಿದೆ.
ಸಾರ್ವಜನಿಕರಿಗೆ ಮೆಟ್ರೋ ನಿಲ್ದಾಣದಿಂದ ಕೊನೆಯ ಹಂತದವರೆಗೆ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಬಸ್ ನಿಲ್ದಾಣಗಳನ್ನು ಸಂಪರ್ಕಿಸುವ ಐದು ಮಾರ್ಗಗಳಲ್ಲಿ ಪಾಡ್ ಟ್ಯಾಕ್ಸಿ ಸೇವೆ ಕಲ್ಪಿಸಲು ಉದ್ದೇಶಿಸಲಾಗಿದೆ. ಪ್ರತಿ ಕಿ.ಮೀ ಮಾರ್ಗ ನಿರ್ಮಾಣಕ್ಕೆ 50 ಕೋಟಿ ರೂ, ವೆಚ್ಚವಾಗಲಿದೆ. ಟೆಂಡರ್ ಪಡೆದಿರುವ ಕಂಪನಿಯೇ ಬಂಡವಾಳ ಹೂಡಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್











Click it and Unblock the Notifications