ಬೆಂಗಳೂರಲ್ಲಿ ಕೇಬಲ್ ಕಾರ್ ಇನ್ನೂ ತಡ: ಅನುಮೋದನೆ ಕೊಡ್ತಿಲ್ಲ ಬಿಬಿಎಂಪಿ
ಬೆಂಗಳೂರು, ಜು.13: ಬೆಂಗಳೂರಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದೆ, ರಸ್ತೆ ಗುಂಡಿಗಳಿಂದ ಜನರು ಬೇಸತ್ತಿದ್ದಾರೆ. ಇದೆಲ್ಲಕ್ಕೂ ಬ್ರೇಕ್ ಹಾಕಲು ಪಾಡ್ ಟ್ಯಾಕ್ಸಿ(ಕೇಬಲ್ ಕಾರ್) ಯೋಜನೆ ಜಾರಿಗೆ ಬಿಬಿಎಂಪಿ ಮುಂದಾಗಿತ್ತು.
ಆದರೆ ಯಾಕೋ ಇದರ ಬಗ್ಗೆ ಆಕ್ತಿಯನ್ನು ಬಿಬಿಎಂಪಿ ಕಳೆದುಕೊಂಡಂತಿದೆ. ಪಾಡ್ ಟ್ಯಾಕ್ಸಿ ಯೋಜನೆಯನ್ನು ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ಜಾರಿಗೊಳಿಸಲಾಗುತ್ತದೆ. ಜಂಟಿಯಾಗಿ ಗುತ್ತಿಗೆ ಪಡೆದಿರುವ ಸ್ಮಾರ್ಟ್ ಪರ್ಸನಲ್ ರಾಪಿಡ್ ಟ್ರಾನ್ಸಿಸ್ಟ್ ಸಿಸ್ಟಂ ಪ್ರೈ.ಲಿ. ಅಲ್ಟಾ ಪಿಆರ್ಟಿ ಲಿ, ಎಂಬೆಸ್ಸಿ ಪ್ರಾಪರ್ಟಿ ಡೆವಲಪ್ಮೆಂಟ್ಸ್ ಪ್ರೈ.ಲಿ. ಸಂಸ್ಥೆಗಳಿಗೆ ಕಾರ್ಯಾದೇಶ ನೀಡಲು ಸಿದ್ಧತೆ ನಡೆಸಲಾಗಿದೆ.
ಮಾಜಿ ಸಚಿವ ಕೆ.ಜೆ.ಜಾರ್ಜ್ ಪಾಲುದಾರಿಕೆಯ ಎಂಬೆಸ್ಸಿ ಸಂಸ್ಥೆಗೆ ಗುತ್ತಿಗೆ ನೀಡುತ್ತಿರುವ ಬಗ್ಗೆ ವಿವಾದ ಉಂಟಾಗಿತ್ತು. ಆದರೆ ಇದಕ್ಕೆ ಅಧಿಕಾರಿಗಳು ತಲೆಕೆಡಿಸಿಕೊಂಡಿರಲಿಲ್ಲ. ಎಂಬೆಸ್ಸಿ ಸಂಸ್ಥೆಗೆ ಗುತ್ತಿಗೆ ನೀಡುವ ವಿವಾದ ಮತ್ತೆ ಆರಂಭವಾಗಿರುವುದರಿಂದ ಕೌನ್ಸಿಲ್ ಸಭೆಯಲ್ಲಿ ಅನುಮೋದನೆ ಪಡೆಯಲು ಹಿಂದೇಟು ಹಾಕಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಆರಂಭದಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯ ಟ್ರಿನಿಟಿ ವೃತ್ತದಿಂದ ವೈಟ್ಫೀಲ್ಡ್ವರೆಗೆ ಹಾಗ ಹೊರವರ್ತುಲ ರಸ್ತೆಯಿಂದ ಹೋಮ್ ಫಾರ್ಮ್ ಜಂಕ್ಷನ್ವರೆಗೆ ಒಟ್ಟು 30 ಕಿ.ಮೀ ಉದ್ದದ ಪಾಡ್ ಟ್ಯಾಕ್ಸಿ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಮೆಟ್ರೋ ಫೀಡರ್ ಸೇವೆಯನ್ನಾಗಿ ಪಾಡ್ ಟ್ಯಾಕ್ಸಿ ಜಾರಿಗೆ ತರಲಾಗುತ್ತದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications