ಸಾವಿನ ದವಡೆಯಿಂದ ಪಾರಾದ ಮರದಲ್ಲಿ ಮರುಜೀವ!
ಬೆಂಗಳೂರು, ಜನವರಿ, 07: ಕ್ಷುಲ್ಲಕ ಕಾರಣಕ್ಕೆ ವಿಷ ಉಂಡು ಸಾವಿನ ಅಂಚಿಗೆ ತಲುಪಿದ್ದ ಮರದಲ್ಲೀಗ ಹೊಸ ಚಿಗುರು, ಹೊಸ ಉಸಿರು. ಮರದ ಆರೈಕೆ ಮಾಡಿದ್ದ ವಿಜಯ್ ನಿಶಾಂತ್ ಕಣ್ಣಲ್ಲಿ ಸಂತೃಪ್ತಿಯ ಭಾವ.
ಬೆಂಗಳೂರಿನ ವಿಜಯನಗರದಲ್ಲಿ ಮನೆಯ ಮಾಲೀಕರೊಬ್ಬರು ವಾಸ್ತು ದೋಷ ಎಂಬ ಕಾರಣಕ್ಕೆ ಮನೆ ಎದುರಿಗಿನ ಮರಕ್ಕೆ ವಿಷ ಉಣಿಸಿದ್ದರು. ಅದ್ಯಾವ ಜ್ಯೋತಿಷಿಮ ಇಂಥ ಐಡಿಯಾ ಕೊಟ್ಟಿದ್ದನೋ ಗೊತ್ತಿಲ್ಲ! ಆದರೆ ಈಗ ವಿಷ ಉಂಡ ಮರದಲ್ಲಿ ಮುರು ಜೀವ ಕಾಣಿಸಿಕೊಂಡಿದೆ. ಮರ ಮತ್ತೆ ಹಸಿರಾಗಿದೆ. ಈ ಸಂಭ್ರವನ್ನು ವಿಜಯ್ ನಿಶಾಂತ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ.[ಬೆಂಗಳೂರು: ವಾಸ್ತುದೋಷ ಕಾರಣ, ನೇರಳೆ ಮರದ ಜೀವ ಹರಣ?]

ಕಳೆದ ನವೆಂಬರ್ 2015ರಂದು ಮರದ ಜೀವನ್ಮರಣ ಹೋರಾಟದ ಬಗ್ಗೆ ವರದಿ ಮಾಡಲಾಗಿತ್ತು. ವಾಸ್ತು ದೋಷದ ಕಾರಣಕ್ಕೆ ಸಿಕ್ಕ ನೇರಳೆ ಮರವೀಗ ಆಮ್ಲಜನಕ ನೀಡುತ್ತಿದೆ. ನಿರಂತರ ಹೋರಾಟದ ಮುಖೇನ ಮರ ಉಳಿಸಿಕೊಂಡ ವಿಜಯ್ ನಿಶಾಂತ್ ಅವರ ಸಾಮಾಜಿಕ ಕಾಳಜಿಗೆ ಭೇಷ್ ಎನ್ನಲೇಬೇಕು.[ಬೆಂಗಳೂರು: ಶಂಕರ್ ನಾಗ್ ವೃತ್ತದ ಸುತ್ತ ಇದೆಂಥ ವಾಸನೆ?]

ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದರೂ ಬಿಬಿಎಂಪಿ ಮತ್ತು ಸಂಬಂಧಿಸಿದ ಅಧಿಕಾರಿಗಳು ಯಾವುದೇ ಪರಿಹಾರ ಕ್ರಮ ತೆಗೆದುಕೊಂಡಿರಲಿಲ್ಲ. ಖುದ್ದು ವಿಜಯ್ ಮುಂದೆ ನಿಂತು ಮರದ ಜೀವ ಕಾಪಾಡಿದ್ದಾರೆ.
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications