ಆಫ್ರಿಕಾ ವಿದ್ಯಾರ್ಥಿಗಳಿಂದ ಶಾಂತಿಭಂಗ: ಪೊಲೀಸ್ ಪ್ರಕಟಣೆ
ಬೆಂಗಳೂರು, ಏ 11: ಬೆಂಗಳೂರು ನಗರದಲ್ಲಿ ಆಫ್ರಿಕಾ ಖಂಡದ ವಿವಿಧ ದೇಶದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಬೆಂಗಳೂರು ನಗರಕ್ಕೆ ಪ್ರತಿ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುತ್ತಾರೆ.
ಈ ವಿದ್ಯಾರ್ಥಿಗಳು ಕೆ ಆರ್ ಪುರ, ಬಾಣಸವಾಡಿ, ಕೆ ಜಿ ಹಳ್ಳಿ, ರಾಮಮೂರ್ತಿ ನಗರ, ಬೈಯಪ್ಪನಹಳ್ಳಿ, ನಾಗವಾರ, ಹೆಗಡೆನಗರ ಮುಂತಾದ ಪ್ರದೇಶಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು ವಿವಿಧ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಇತ್ತೀಚೆಗೆ ಆಫ್ರಿಕಾ ದೇಶದ ವಿದ್ಯಾರ್ಥಿಗಳಿಗೂ ಮತ್ತು ಸ್ಥಳೀಯರಿಗೂ ಘರ್ಷಣೆ ಉಂಟಾಗಿ ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಕಾರಣವಾಗಿರುತ್ತದೆ.
ಹಾಗಾಗಿ, ಅಪರ ಪೊಲೀಸ್ ಆಯುಕ್ತ (ಪೂರ್ವ) ಪಿ ಹರಿಶೇಖರನ್ ಈ ಕೆಳಕಂಡ ಉದ್ದೇಶಗಳಿಗಾಗಿ 'ಪೊಲೀಸ್ ಆಫ್ರಿಕನ್ ಸ್ಟೂಡೆಂಟ್ಸ್ ಕೋ-ಆರ್ಡಿನೇಷನ್ ಕಮಿಟಿಯನ್ನು' ಸ್ಥಾಪಿಸುವ ಕುರಿತು ಚರ್ಚಿಸಲು ನಿರ್ಧರಿಸಿದ್ದಾರೆ.
> ವಿದ್ಯಾರ್ಥಿಗಳಿಗೆ ಭಾರತ ದೇಶದಲ್ಲಿರುವ ಪ್ರಚಲಿತ ಕಾನೂನು ಮತ್ತು ವಿದೇಶೀಯರ ನೊಂದಣಿ ಬಗ್ಗೆ ತಿಳುವಳಿಕೆ ನೀಡುವುದು.
> ವಿದ್ಯಾರ್ಥಿಗಳಿಗೆ ಸ್ಥಳೀಯ ಕಾನೂನು & ಸುವ್ಯವಸ್ಥೆಗಳ ಬಗ್ಗೆ ಅರಿವು ಮೂಡಿಸುವುದು.
> ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ತಿಳಿಸುವುದು.
> ಅಪರಾಧ ತಡೆ ಮತ್ತು ಪತ್ತೆ ಕಾರ್ಯ ಮಾಡಲು ಪೊಲೀಸ್ ಇಲಾಖೆಗೆ ಆಫ್ರಿಕಾ ಖಂಡದ ವಿದ್ಯಾರ್ಥಿಗಳು ಹೆಚ್ಚಿನ ಸಹಕಾರ ನೀಡುವುದು.
ಈ ಸಭೆಯಲ್ಲಿ ಆಫ್ರಿಕಾ ಖಂಡದ ವಿದ್ಯಾರ್ಥಿಗಳು, ಈ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರುಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ತಮ್ಮ ಅಭಿಪ್ರಾಯವನ್ನು ನೀಡುವಂತೆ ಕೋರಲಾಗಿದೆ.
ಸ್ಥಳ : ಸಿಎಂಆರ್ ಸ್ಕೂಲ್ ಸಭಾಂಗಣ, ಕಾಚರಕನಹಳ್ಳಿ. ಬೆಂಗಳೂರು.
ದಿನಾಂಕ : 12-04-2015, ಬೆಳಿಗ್ಗೆ 11 ಗಂಟೆ
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications