Bengaluru: ಆಂಧ್ರದಿಂದ ಗೋಮಾಂಸ ಸಾಗಿಸುತ್ತಿದ್ದ 7 ಮಂದಿ ಸೇರಿ 21 ಮಂದಿ ಬಂಧನ
ಬೆಂಗಳೂರು, ಸೆಪ್ಟಂಬರ್ 24: ನೆರೆಯ ರಾಜ್ಯ ಆಂಧ್ರಪ್ರದೇಶದ ಹಿಂದೂಪುರದಿಂದ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಗೋಮಾಂಸ (ಎಮ್ಮೆ ಮಾಂಸ) ಸಾಗಿಸುತ್ತಿದ್ದ ಒಟ್ಟು 07 ಮಂದಿಯನ್ನು ಪೊಲೀಸರು ಭಾನುವಾರ ಬಂಧಿಸಿದ ಘಟನೆ ಭಾನುವಾರ ಜರುಗಿದೆ.
ಗೋಮಾಂಸ ಸಾಗಾಣೆಯ ಆರೋಪಿಗಳ ಐದು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರೊಂದಿಗೆ ಆರೋಪಿಗಳ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆಯ 14 ಸದಸ್ಯರನ್ನೂ ಬಂಧಿಸಲಾಗಿದ್ದು, ಭಾನುವಾರ ಬೆಳಗಿನ ಜಾವ 5.45ರ ಸುಮಾರಿಗೆ ನಡೆದಿದೆ ಎಂದು ವರದಿ ಆಗಿದೆ.

ಆಂಧ್ರದ ಹಿಂದೂಪುರದಿಂದ ಬೆಂಗಳೂರಿಗೆ ಐದು ಸಣ್ಣ ಟ್ರಕ್ಗಳಲ್ಲಿ ಗೋಮಾಂಸವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಈ ಆರೋಪಿಗಳ ಕಾರನ್ನು ದೊಡ್ಡಬಳ್ಳಾಪುರದಲ್ಲಿ ಶ್ರೀರಾಮಸೇನೆ ಸದಸ್ಯರು ಅಡ್ಡಗಟ್ಟಿ ತಡೆದಿದ್ದಾರೆ. ಈ ವೇಳೆ ಅವರ ಕಾರಿಗೆ ಬೆಂಕಿ ಹಚ್ಚಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಮಾಂಸ ಸಾಗಾಣೆದಾರರ ಕಾರಿಗೆ ಬೆಂಕಿ
ಮಾಂಸ ಸಾಗಣೆ ಮಾಡುತ್ತಿದ್ದ ಬಂಧಿತ ಏಳು ಮಂದಿ ಪೈಕಿ ಐವರು ಹಿಂದೂಪುರದವರಾಗಿದ್ದಾರೆ. ಉಳಿದ ಇಬ್ಬರು ಗೌರಿಬಿದನೂರಿ ನಿವಾಸಿಗಳು. ಇದರಿಂದ ಕೋಪಗೊಂಡ ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿ ಮಾಂಸ ಸಾಗಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಂಸ ಸಾಗಾಣೆಯ ಏಳು ಮಂದಿ ಬಂಧಿತರ ಜೊತೆಗೆ ಅವರ ಕಾರಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾದ ಶ್ರೀರಾಮ ಸೇನೆಯ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಏಳು ಮಂದಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಒಟ್ಟಾರೆ ಪ್ರಕರಣ ಸಂಬಂಧ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಗೋಹತ್ಯೆ ಕಾಯ್ದೆಯಡಿ ಒಂದು ಪ್ರಕರಣ ಮತ್ತೊಂದು ಕಾರನ್ನು ಧ್ವಂಸಗೊಳಿಸಿದ ಮತ್ತು ಸಾಗಾಟಗಾರರ ಮೇಲೆ ಹಲ್ಲೆ ಮಾಡಿದ್ದ ಶ್ರೀರಾಮಸೇನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಈ ವಿಚಾರವಾಗಿ ಒಟ್ಟಾರೆ 21 ಮಂದಿಯನ್ನು ಬಂಧಿಸಿದ್ದಾರೆ ಎಂದು ವರಿಷ್ಠಾಧಿಕಾರಿ ತಿಳಿಸಿದರು.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications