ಟೆಕ್ಕಿಗೆ ಹನಿಟ್ರ್ಯಾಪ್: ಓರ್ವ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು, ಜನವರಿ. 13 : ಸಾಫ್ಟ್ ವೇರ್ ಉದ್ಯೋಗಿಯೊಬ್ಬರಿಗೆ ಹನಿಟ್ರ್ಯಾಪ್ ಮಾಡಿ ಹಣ ದೋಚಿದ್ದ ಓರ್ವ ಮಹಿಳೆ ಸೇರಿ 3 ಆರೋಪಿಗಳನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ಮಾರೇನಹಳ್ಳಿಯ ಮಾಜಿ ಪಾಲಿಕೆ ಸದಸ್ಯ ವಾಗೀಶ್ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ್ ಆಚಾರ್ ಮತ್ತು ರವಿ ಕುಮಾರ್ ಬಂಧಿತರು. ಲೊಕ್ಯಾಂಟೋ ವೆಬ್ ಸೈಟ್ ಮೂಲಕ ಗಿರಾಕಿಗಳನ್ನು ಸೆಳೆದುಕೊಂಡು ಯುವತಿಯರ ಮೂಲಕ ಹನಿಟ್ರ್ಯಾಪ್ ಮಾಡುತ್ತಿದ್ದರು.
ಈ ಆರೋಪಿಗಳು ಟೆಕ್ಕಿ ಒಬ್ಬರನ್ನು ಕರೆಸಿ ಹತ್ತು ಸಾವಿರ ರು ದೋಚಿದ್ದರು. ಇವರ ಬ್ಲಾಕ್ ಮೇಲ್ ನಿಂದ ಬೆದರಿದ ಎಂಜಿನಿಯರ್ ನಗರ ಪೊಲೀಸ್ ಆಯುಕ್ತರಿಗೆ ಇಮೇಲ್ ಮೂಲಕ ದೂರು ನೀಡಿದ್ದರು.

ದೂರನ್ನು ದಾಖಲಿಸಿಕೊಂಡ ವಿಜಯನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು. ಇನ್ನು ಈ ದಂಧೆಯಲ್ಲಿ ತೊಡಗಿಕೊಂಡಿರುವರನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸಿದ್ದಾರೆ.
ಹನಿಟ್ರ್ಯಾಪ್ ಹೇಗೆ?: ಕಳೆದ ಒಂದೂವರೆ ವರ್ಷದಿಂದ ಹನಿಟ್ರ್ಯಾಪ್ ಡೀಲಿಂಗ್ ಮಾಡಿಕೊಂಡು ಬಂದಿರುವ ಈ ತಂಡದಲ್ಲಿ ಒಟ್ಟು ನಾಲ್ಕು ಮಂದಿ ಪುರುಷರು ಮೂವರು ಯುವತಿಯರಿದ್ದಾರೆ.
ವಿಜಯನಗರದ ಮಾರೇನಹಳ್ಳಿಯಲ್ಲಿರುವ ಬಿಬಿಎಂಪಿ ಕಛೇರಿಯ ಮೇಲಿನ ಕೊಠಡಿಯನ್ನು ಇವರು ತಮ್ಮ ಹನಿಟ್ರ್ಯಾಪ್ ಕೇಂದ್ರವನ್ನಾಗಿ ಮಾಡಿಕೊಂಡಿದ್ದಾರೆ. ತಮ್ಮ ದಂಧೆಗೆ ಅನುಮಾನ ಬಾರದೇ ಇರಲು ಕಚೇರಿ ಮೇಲೆ ಎನ್ಜಿಓ ಟ್ರಸ್ಟ್ ಒಂದರ ಹೆಸರನ್ನು ಹಾಕಿದ್ದರು.
ಇಲ್ಲಿಯವರೆಗೂ 70 ಮಂದಿ ಇವರ ಬಲೆಗೆ ಬಿದ್ದಿದ್ದು, 200 ರೂಪಾಯಿ ನಿಂದ ಆರಂಭಗೊಂಡು 2 ಲಕ್ಷದವರೆಗೆ ಸುಲಿಗೆ ಮಾಡುತ್ತಿದ್ದರು. ದೃಶ್ಯವನ್ನು ಚಿತ್ರೀಕರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದ ಇವರು ಗಿರಾಕಿಗಳ ಬೆದರಿಸಿ ಹಣ ಕಿತ್ತುಕೊಳ್ಳುತ್ತಿದ್ದರು.
ಗಿರಾಕಿಯ ಆರ್ಥಿಕ ಪರಿಸ್ಥಿತಿ ಗಮನಿಸಿ ವಸೂಲಿ ಮಾಡುತ್ತಿದ್ದ ಇವರು ಈ ವರೆಗೂ ಟ್ಯಾಪ್ ಮಾಡಿರುವ ಗಿರಾಕಿಗಳ ಫೋಟೋವನ್ನು ತೆಗೆದುಕೊಂಡಿದ್ದರು. ದುಡ್ಡು ದೊಡ್ಡ ಪ್ರಮಾಣದಲ್ಲಿ ಸಿಗದಿದ್ದಾಗ ಗಿರಾಕಿಗಳಿಗೆ ಗಂಭೀರ ಹಲ್ಲೆ ನಡೆಸಿ ಹಣವನ್ನು ಕಿತ್ತುಕೊಳ್ಳುತ್ತಿದ್ದರು.
ಹಣವನ್ನು ಡೆಬಿಡ್ ಕ್ರೆಡಿಟ್ ಕಾರ್ಡ್ ಮೂಲಕ ತಮ್ಮ ಖಾತೆಗೆ ವರ್ಗಾಯುಸುತ್ತಿದ್ದರು. ಕಚೇರಿಯ ಕಂಪ್ಯೂಟರ್ ನಲ್ಲಿ ಹಲ್ಲೆ ಮಾಡುತ್ತಿರುವ, ಈವರೆಗೂ ಟ್ರ್ಯಾಪ್ ಗೆ ಒಳಗಾಗಿರುವ ಗಿರಾಕಿಗಳ ಫೋಟೋ ಸೇವ್ ಮಾಡಿದ್ದರು ಎನ್ನುವ ಮಾಹಿತಿ ದೊರೆತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications