ಮನೆ ಬಾಡಿಗೆ ಪಡೆಯಲು ವ್ಯಾಪಾರದ ನೆಪ: ಅಲ್ಲಿ ನಡೆಯುತ್ತಿದ್ದಿದ್ದೇ ಬೇರೆ
ಬೆಂಗಳೂರು, ನವೆಂಬರ್ 19: ವ್ಯಾಪಾರದ ನೆಪವೊಡ್ಡಿ ಮನೆಯನ್ನು ಬಾಡಿಗೆ ಪಡೆಯುತ್ತಿದ್ದ ಮುಂಬೈ ಮೂಲದ ಖದೀಮರು ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಬೇಧಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಚಿಕ್ಕಜಾಲದಲ್ಲಿ ತರಕಾರಿ ವ್ಯಾಪಾರಕ್ಕೆಂದು ಮನೆ ಪಡೆದು ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿಟ್ಟಿದ್ದರು ಎಂಬುದು ಪೊಲೀಸ್ ತನಿಖೆ ವೇಳೆ ಬಹಿರಂಗಗೊಂಡಿದೆ. ಬಂಧಿತ ಬೆಂಗಳೂರು ಮೂಲದ ಅಶ್ವಕ್ ಅಲಿಯಾಸ್ ಚಾನ್ ಖಾನ್ ಚಿಕ್ಕಜಾಲದ ಕೋಳಿಪುರದಲ್ಲಿರುವ ನಿರ್ಜನ ಪ್ರದೇಶವೊಂದರಲ್ಲಿ ಈ ಮನೆಯನ್ನು ಕೆಲವು ತಿಂಗಳ ಹಿಂದೆ ಬಾಡಿಗೆಗೆ ಪಡೆದುಕೊಂಡಿದ್ದ, ಆ ವೇಳೆ ವ್ಯಾಪಾರಕ್ಕೆಂದು ಮಾಲಿಕರ ಬಳಿ ಸುಳ್ಳು ಹೇಳಿದ್ದ.
ಆದರೆ ಮನೆಯನ್ನು ಬಾಂಗ್ಲಾ ಪ್ರಜೆಗಳನ್ನು ಅಕ್ರಮವಾಗಿ ಕೂಡಿಡಲು ಬಳಸಿಕೊಂಡಿದ್ದ, ರಾಮನಗರದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ತಮ್ಮ ಸ್ಥಳವನ್ನು ಬೆಂಗಳೂರಿನ ಹೊರವಲಯಕ್ಕೆ ಸ್ಥಳಾಂತರ ಮಾಡಿದ್ದರು.

ಇನ್ನು ಕೋಳಿಪುರದಲ್ಲಿ ರಕ್ಷಿಸಲಾಗಿರುವ ಬಾಂಗ್ಲಾ ದೇಶದ ಸರ್ದಾರ್ ಹುಸೇನ್, ಸುನಂಮುಂಚಿ, ಮೊಹಮ್ಮದ್ ಮುಷ್ರಫ್, ಶಕೀಲ್ ಬಳಿ ಆರೋಪಿಗಳು ಸುಮಾರು 26ಲಕ್ಷವನ್ನು ತಮ್ಮ ಖಾತೆಗೆ ದಂಧೆಕೋರರು ಜಮಾ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಯಲಹಂಕ ಮತ್ತು ಚಿಕ್ಕಜಾಲ ಠಾಣೆ ಪೊಲೀಸರ ರಕ್ಷಣೆಯಲ್ಲಿ ಬಾಂಗ್ಲಾ ದೇಶದ ಯುವಕರಿದ್ದು, ಈಗಾಗಲೇ ಯುವಕರ ಪೋಷಕರು ಹಾಗೂ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications