ಪೊಲೀಸರು ಸಾಮಾಜಿಕ ತಾಣಗಳನ್ನು ಬಳಸಿಕೊಳ್ಳಿ : ಸಿಎಂ
ಬೆಂಗಳೂರು, ನ.7 : ದೇಶದ ಮಹಾನಗರಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ತಾಣಗಳನ್ನು ಬಳಸಿಕೊಳ್ಳುವ ಮೂಲಕ ಪೊಲೀಸರು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮುಯ್ಯ ಹೇಳಿದ್ದಾರೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಸದ್ಯ ಪೊಲೀಸರಿಗೆ ಸವಾಲಿನ ಕೆಲಸವಾಗಿದೆ ಎಂದು ಸಿಎಂ ವಿಶ್ಲೇಷಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಅಖಿಲ ಭಾರತ ಮಟ್ಟದ ಪೊಲೀಸ್ ಆಯುಕ್ತರ ಎರಡನೇ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಗರಗಳಲ್ಲಿ ಸಾಮಾಜಿಕ ತಾಣಗಳ ಬಳಕೆ ಹೆಚ್ಚಾಗುತ್ತಿದೆ. ಬಹಳಷ್ಟು ಜನರು ಇದನ್ನು ಬಳಸುತ್ತಾರೆ. ಪೊಲೀಸರು ಇದನ್ನು ಬಳಸಿಕೊಂಡು, ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಪ್ರಯತ್ನಿಸಬೇಕು ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡರೆ ಸಾರ್ವಜನಿಕರಿಗೆ ತುರ್ತಾಗಿ ಮಾಹಿತಿ ತಿಳಿಸಲು ಸಹಾಯಕವಾಗುತ್ತದೆ. ಆದ್ದರಿಂದ ಪೊಲೀಸರು ಅಪರಾಧ ಚಟುವಟಿಕೆಗಳ ಕುರಿತು ಸಾಮಾಜಿಕ ತಾಣಗಳ ಮೂಲಕ ಜನರಿಗೆ ಮಾಹಿತಿ ನೀಡಬಹುದು ಎಂದು ಸಿದ್ದರಾಮಯ್ಯ ತಿಳಿಸಿದರು. ಇಲಾಖೆಯ ಸಿಬ್ಬಂದಿಗಳ ನಡುವಿನ ಸಂಭಾಷಣೆಗೂ ಇದು ಸಹಾಯಕವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ದೇಶದ ನಗರಗಳಿಗೆ ಜನರು ಶಿಕ್ಷಣ, ಉದ್ಯೋಗ ಅರಸಿ ವಲಸೆ ಬರುತ್ತಿದ್ದಾರೆ. ಆದ್ದರಿಂದ ನಗರಗಳ ಜನಂಖ್ಯೆ ಹೆಚ್ಚಾಗುತ್ತಿದೆ. ನಗರಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಇದರಿಂದ ಪೊಲೀಸರಿಗ ಸವಾಲಾಗಿದೆ ಎಂದು ಸಿದ್ದರಾಮಯ್ಯ ವಿಶ್ಲೇಷಿಸಿದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಉತ್ತಮ ಆಡಳಿತ ನೀಡುವ ಒಂದು ಭಾಗವಾಗಿದೆ ಎಂದು ತಿಳಿಸಿದರು.
ಪೊಲೀಸರ ಮೇಲೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾನ್ಯ ಜನರಿಗೆ ಕಾನೂನಿನ ಕುರಿತು ಮಾಹಿತಿ ನೀಡುವ ಜವಾಬ್ದಾರಿಯು ಇದೆ ಎಂದರು. ಜನರಿಂದ ಬಂದ ದೂರುಗಳಿಗೆ ತಕ್ಷಣ ಪ್ರತಿಕ್ರಿಯಿಸಿ ಅವರಿಗೆ ನ್ಯಾಯ ದೊರಕಿಸುಕೊಡುವುದು ಪೊಲೀಸರ ಕರ್ತವ್ಯ ಎಂದರು.
ಗೃಹ ಸಚಿವ ಕೆ.ಜೆ.ಜಾರ್ಜ್, ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ, ಗೃಹ ಇಲಾಖೆ ಹೆಚ್ಚುವರಿ ಆಯುಕ್ತ ಎಸ್.ಕೆ.ಪಟ್ನಾಯಕ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. (ಬೆಂಗಳೂರು ನಗರ ಪೊಲೀಸ್ ಫೇಸ್ ಬುಕ್ ಮತ್ತು ಟ್ವೀಟರ್ ತಾಣಗಳು)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications