ಬೀದರ್, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಬೆನ್ನಲ್ಲೇ ಎಚ್ಚತ್ತು ಸೂಕ್ತ ಕ್ರಮಕ್ಕೆ ಮುಂದಾದ ಬೆಂಗಳೂರು ಪೊಲೀಸರು
ಬೆಂಗಳೂರು, ಜನವರಿ, 18: ಮೊನ್ನೆ ಬೀದರ್, ನಿನ್ನೆ (ಜನವರಿ 17) ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ದರೋಡೆಕೋರಾರರು ಬ್ಯಾಂಕ್ನಲಿದ್ದ ಹಣ, ಚಿನ್ನ ದೋಚಿ ಪರರಾರಿಯಾಗಿದ್ದಾರೆ. ಇದರ ಬೆನ್ನಲ್ಲೆ ಎಚ್ಚೆತ್ತ ಬೆಂಗಳೂರು ಪೊಲೀಸ್ ಆಯುಕ್ತರು ನಗರದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಹಾಗಾದರೆ ಯಾವೆಲ್ಲ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೀದರ್, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಲರ್ಟ್ ಆಗಿರಲು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ್ ಅವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಎರಡು ಜಿಲ್ಲೆಗಳಲ್ಲಿ ನಡೆದ ದರೋಡೆ ಪ್ರಕರಣಗಳು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿವೆ. ಬೆಂಗಳೂರಿನಲ್ಲಿ ಅಂತಹ ಯಾವುದೇ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.

ಬೀದರ್ ಹಾಗೂ ಮಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ದರೋಡೆ ನಡೆದ ಬೆನ್ನಲ್ಲೇ ಬೆಂಗಳೂರಿನ ಪ್ರತಿ ಬ್ಯಾಂಕ್, ಎಟಿಎಂಗಳ ಬಳಿ ಅಲರ್ಟ್ ಇರಲು ಸೆಕ್ಯುರಿಟಿ ಏಜೆನ್ಸಿಗಳಿಗೆ ಪೊಲೀಸ್ ಆಯುಕ್ತರಾದ ದಯಾನಂದ್ ಅವರು ಸೂಚನೆ ನೀಡಿದ್ದಾರೆ. ಅದರಲ್ಲೂ ಯಾರು ಯಾವ ಪಾಳಿಯಲ್ಲಿ ಕೆಲಸ ಮಾಡುತ್ತಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ್ದಾರೆ.
ಬ್ಯಾಂಕ್ ಮತ್ತು ಎಟಿಎಂಗಳ ಬಳಿ ಎಷ್ಟು ಜನ ಸೆಕ್ಯುರಿಟಿ ಇರುತ್ತಾರೆ, ರಾತ್ರಿ ಹಾಗೂ ಬೆಳಗಿನ ಪಾಳಿಯಲ್ಲಿ ಎಷ್ಟು ಮಂದಿ ಇರುತ್ತಾರೆ ಹಾಗೂ ಬ್ಯಾಂಕ್, ಎಟಿಎಂಗಳ ಬಳಿ ಸಿಸಿಟಿವಿ ಕ್ಯಾಮರಾ ಸರಿ ಇದೆಯಾ ಎನ್ನುವ ಎಂಬ ಬಗ್ಗೆ ಮಾಹಿತಿ ಪಡೆಯಲು ಇನ್ಸ್ಪೆಕ್ಟರ್ಗಳಿಗೆ ಕಮಿಷನರ್ ಸೂಚನೆ ನೀಡಿದರು. ಹೊಯ್ಸಳ ಸಿಬ್ಬಂದಿಯಿಂದ ಬ್ಯಾಂಕ್, ಎಟಿಎಂ ಬಳಿ ಗಸ್ತು ತಿರುಗಲು ಸೂಚನೆ ನೀಡಿದ್ದಾರೆ.
ಈಗಾಗಲೇ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಸಭೆ ನಂತರ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಎಟಿಎಂಗಳಲ್ಲಿ ಸೆಕ್ಯೂರಿಟಿ ಇರುವ ಬಗ್ಗೆ ತಿಳಿದುಕೊಳ್ಳಲು ಸ್ಥಳಕ್ಕೆ ಭೇಟಿ ನೀಡಿ. ಹಣ ತುಂಬಲು ಹೋಗುವ ಏಜೆಸ್ಸಿ ವಾಹನಕ್ಕೆ ಭದ್ರತೆ ಹೆಚ್ಚಿಸಲು ತಿಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಾತನಾಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರಾಜ್ಯದ ಬೀದರ್ ಮತ್ತು ಮಂಗಳೂರಿನಲ್ಲಿ ದರೋಡೆ ಪ್ರಕರಣ ವರದಿ ಆಗಿದೆ. ಈ ಹಿನ್ನೆಲೆ ನಗರದ ಎಲ್ಲಾ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಬ್ಯಾಂಕ್, ಎಟಿಎಂಗೆ ಹಣ ಸಾಗಿಸುವ ವಾಹನಗಳಲ್ಲಿ ಭದ್ರತೆ ಬಗ್ಗೆ ಸೂಚಿಸಲಾಗಿದೆ. ಅಲ್ಲಿನ ಸಿಸಿಟಿವಿ ಸೇರಿದಂತೆ ಎಲ್ಲವನ್ನೂ ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಬೀದರ್ನ ಎಸ್ಬಿಐ ಎಂಟಿಎಂ ಬಳಿ ಸಿಬ್ಬಂದಿಗೆ ಶೂಟ್ ಮಾಡಿ 97 ಲಕ್ಷಣ ರೂಪಾಯಿ ಹಣ ದೋಚಿದ್ದಾರೆ ಎನ್ನಲಾದ ಖದೀಮರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಇಬ್ಬರ ಮೇಲೆ ದರೋಡೆಕೋರರು ಗುಂಡು ಹಾರಿಸಿ, ಹಣದ ಬಾಕ್ಸ್ನೊಂದಿಗೆ ಪರಾರಿಯಾಗಿದ್ದಾರೆ. ಗುಂಡಿನೇಟು ಬಿದ್ದವರ ಪೈಕಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಆರೋಪಿಗಳು ಬೀದರ್ನಿಂದ ಹೈದರಾಬಾದ್ವರೆಗೆ ಬೈಕ್ನಲ್ಲೇ ತೆರಳಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಮಂಗಳೂರಿನ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್ನಲ್ಲಿ ದರೋಡೆಕೋರರು ಬಂದೂಕು ತೋರಿಸಿ ಹಣ ದೋಚಿದ್ದು, ಈ ವೇಳೆ 12 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications