ಬೆಂಗಳೂರು: ಇನ್ಮುಂದೆ ಟ್ರಾಫಿಕ್ ಸಿಗ್ನಲ್ನಲ್ಲಿ ಭಿಕ್ಷೆ ಬೇಡಿದ್ರೆ ಹುಷಾರ್!
ಬೆಂಗಳೂರು,ಫೆಬ್ರವರಿ 16: ಬೆಂಗಳೂರಿನಲ್ಲಿ ದಿನೇದಿನೆ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇನ್ಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರು ಕಾಣಿಸಿಕೊಂಡರೆ ಅವರನ್ನು ಬಂಧಿಸಲು ಸೂಚನೆ ನೀಡಿದ್ದಾರೆ.
ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಾಕಷ್ಟು ದೂರುಗಳು ಬರುತ್ತಿವೆ. ಹೀಗಾಗಿ ಇನ್ನುಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಬೇಡುವಂತಿಲ್ಲ ಎಂದು ಹೇಳಿದ್ದಾರೆ.

ಲಾ ಆಂಡ್ ಆರ್ಡರ್ ಹಾಗೂ ಟ್ರಾಫಿಕ್ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುವಂತೆಯೂ ಅವರು ಸೂಚನೆ ನೀಡಿದ್ದಾರೆ.ಎಲ್ಲಾ ಡಿಸಿಪಿ ವಿಭಾಗಗಳಲ್ಲಿ ಭಿಕ್ಷೆ ಬೇಡುವುದನ್ನು ತಪ್ಪಿಸಲು ಸೂಚನೆ ನೀಡಿರುವ ಕಮಲ್ ಪಂತ್ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಭಿಕ್ಷುಕರಿಂದ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಭಿಕ್ಷುಕರು ವಾಹನಗಳಿನ್ನು ಅಡ್ಡಹಾಕಿ ಭಿಕ್ಷೆ ಬೇಡುತ್ತಿದ್ದಾರೆ. ಸಿಗ್ನಲ್ಗಳು ಬಿಟ್ಟರೂ ರಸ್ತೆ ಮಧ್ಯೆ ನಿಂತು ಕಿರಿಕಿರಿ ಉಂಟು ಮಾಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ದವು.












Click it and Unblock the Notifications