ಕುಟುಂಬ ಸಮೇತ ಪೇದೆ ಆತ್ಮಹತ್ಯೆ ಯತ್ನ: ಪತ್ನಿ, ಪುಟ್ಟ ಮಕ್ಕಳ ಸಾವು
ಪತ್ನಿ ವೀಣಾ, ಮೂರು ವರ್ಷದ ಮಗಳು ಮಾನ್ಯ ಹಾಗೂ ಒಂದೂವರೆ ವರ್ಷದ ಮಗು ಪೃಥ್ವಿಗೆ ವಿಷವುಣಿಸಿದ ಸಿಎಆರ್ ಪೇದೆ ಸುಭಾಷ್, ತಾನೂ ವಿಷ ಸೇವಿಸಿ ಆತ್ಮಹತ್ಯೆ ಪ್ರಯತ್ನಿಸಿರುವ ಸಿಎಆರ್ ಪೇದೆ ಸುಭಾಷ್.
ಬೆಂಗಳೂರು, ಮೇ 23: ಪತ್ನಿ ಮಕ್ಕಳಿಗೆ ವಿಷವುಣಿಸಿ ತಾವೂ ವಿಷ ಸೇವಿಸಿದ್ದ ಸಂಪಿಗೆ ಹಳ್ಳಿ ಠಾಣಾ ಪೇದೆ ಸುಭಾಷ್ ಅವರ ಆತ್ಮಹತ್ಯೆ ಪ್ರಯತ್ನ ಪ್ರಕರಣದಲ್ಲಿ ಪತ್ನಿ ಮತ್ತು ಮಕ್ಕಳು ಅಸುನೀಗಿದ್ದು, ಪೇದೆ ಸುಭಾಷ್ ಪರಿಸ್ಥಿತಿ ಗಂಭೀರವಾಗಿದೆ.
ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಸುಭಾಷ್, ತಮ್ಮ ಪತ್ನಿ ವೀಣಾ, ಮೂರು ವರ್ಷದ ಮಗಳು ಮಾನ್ಯ ಹಾಗೂ ಒಂದೂವರೆ ವರ್ಷದ ಮಗು ಪೃಥ್ವಿಗೆ ವಿಷವುಣಿಸಿದ್ದರು.

ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಪೊಲೀಸ್ ವಸತಿ ಗೃಹದಲ್ಲಿ ಈ ಘಟನೆ ನಡೆದಿದ್ದು ನೆರೆಹೊರೆಯವರು ಇದನ್ನು ಗಮನಿಸಿ ಪೇದೆ ಹಾಗೂ ಅವರ ಕುಟುಂಬವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತಾದರೂ, ಪತ್ನಿ ಮತ್ತು ಮಕ್ಕಳು ಬೆಳಗ್ಗೆ 9:45ರ ಸುಮಾರಿಗೆ ಅಸುನೀಗಿದರು. ಸುಭಾಷ್ ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
More From
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು










Click it and Unblock the Notifications