ಸರಗಳ್ಳನನ್ನು ಸಿನಿಮೀಯ ರೀತಿ ಚೇಸ್ ಮಾಡಿ ಹಿಡಿದ ಪೊಲೀಸರು
ಬೆಂಗಳೂರು, ಜನವರಿ 19: ಮಹಿಳೆಯ ಚೈನ್ ಅನ್ನು ಕಿತ್ತುಕೊಂಡು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸರಗಳ್ಳನನ್ನು ಇಬ್ಬರು ಪೇದೆಗಳು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಂಧಿಸಿದ್ದಾರೆ.
ಮಂಗಳವಾರ ಎಚ್ಎಸ್ಆರ್ ಬಡಾವಣೆಯಲ್ಲಿ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯೋರ್ವರ ಸರವನ್ನು ಕಿತ್ತುಕೊಂಡು ಕಳ್ಳ ಸೋಮಶೇಖರ್ ಕಾರಿನಲ್ಲಿ ಪರಾರಿಯಾಗಿದ್ದಾನೆ, ಕೂಡಲೇ ಮಹಿಳೆ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಕಾರಿನ ಮಾಹಿತಿ, ಕಾರು ಹೋದ ದಿಕ್ಕು ಹೇಳಿದ್ದಾಳೆ.
ಮಹಿಳೆಯಿಂದ ಮಾಹಿತಿ ಪಡೆದ ಕಂಟ್ರೋಲ್ ರೂಮ್ ಪೊಲೀಸರು ಎಚ್.ಎಸ್.ಆರ್ ಬಡಾವಣೆಯಲ್ಲಿ ಬೀಟ್ನಲ್ಲಿದ್ದ ಪೇದೆಗಳಾದ ಮಹೇಶ್ ನಾಯಕ್ ಮತ್ತು ಬಸವೇಶ್ವರ್ ಅವರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಎಚ್ಚೆತ್ತ ಪೇದೆಗಳು ಕಾರನ್ನು ಪತ್ತೆ ಹಚ್ಚಿ ಅದರ ಬೆನ್ನುಹತ್ತಿದ್ದಾರೆ.

ಬಹಳಾ ದೂರ ಬೆನ್ನುಹತ್ತಿದ ನಂತರ ಒಂದು ಘಟ್ಟದಲ್ಲಿ ಕಳ್ಳ ಕಾರಿನಿಂದ ಇಳಿದು ಮನೆ ಒಂದರ ಮೇಲೆ ಹತ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ, ಆದರೆ ಆತನ ಅದೃಷ್ಠ ಕೈಕೊಟ್ಟು ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ಕಳ್ಳನನ್ನು ಬಂಧಿಸಲು ಹೋದಾಗ ಪ್ರತಿರೋಧ ವ್ಯಕ್ತಪಡಿಸಿದ ಕಳ್ಳ ಸೋಮಶೇಖರ್ ಇಬ್ಬರೂ ಪೇದೆಗಳನ್ನು ಗಾಯಗೊಳಿಸಿದ್ದಾನೆ. ಆದರೂ ಬಿಡದ ಪೇದೆಗಳು ಸೋಮಶೇಖರ್ನನ್ನು ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದಾರೆ.
It's not a movie scene, it's our Bengaluru City Cops, live chasing & nabbing a chain snatcher red handed.
— BengaluruCityPolice (@BlrCityPolice) January 17, 2018
“ ಇದು ನಮ್ಮ ರಿಯಲ್ ಚೇಸಿಂಗ್ ನ ಒಂದು ತುಣುಕು “ pic.twitter.com/95YuCwRENV
ಕಳ್ಳ ಸೋಮಶೇಖರ್ ಮುಂಚೆ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಆ ನಂತರ ಕೆಲಸಕ್ಕೆ ರಾಜಿನಾಮೆ ನೀಡಿ ಕಳ್ಳತನಕ್ಕೆ ಇಳಿದಿದ್ದ, ಎಚ್ಎಸ್ಆರ್ ಬಡಾವಣೆಯಲ್ಲಿ ಕಾರೊಂದನ್ನು ಕದ್ದು ಅದರ ಸಹಾಯದಿಂದ ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದ, ಆದರೆ ಇಬ್ಬರು ಪೊಲೀಸ್ ಪೇದೆಗಳ ಸಾಹಸಮಯ ಕಾರ್ಯಾಚಾರಣೆಯಿಂದಾಗಿ ಈಗ ಕಂಬಿ ಎಣಿಸುತ್ತಿದ್ದಾನೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications