ಕರ್ಕಶ ಶಬ್ದ ಮಾಡುವ ಹಾರನ್ ಬಳಕೆ ಮಾಡೀರಾ ಜೋಕೆ!
ಬೆಂಗಳೂರು, ಡಿಸೆಂಬರ್ 12 : ಕರ್ಕಶ ಶಬ್ದ ಮತ್ತು ದೋಷಯುಕ್ತ ವಾಹನಗಳಿಗೆ ಬ್ರೇಕ್ ಹಾಕುವ ಕೆಲಸವನ್ನು ಆಡುಗೋಡಿ ಪೊಲೀಸರು ಮಾಡಿದ್ದಾರೆ. ದಿನದಿಂದ ದಿನಕ್ಕೆ ಶಬ್ದ ಮಾಲಿನ್ಯ ಉಂಟು ಮಾಡುವ ಬೈಕ್ ಇತರ ವಾಹನಗಳ ಹಾವಳಿ ವಿಪರೀತ ಮಟ್ಟಕ್ಕೆ ತಲುಪಿದೆ.
ಹೀಗಾಗಿ ಆಡುಗೋಡಿ ಸಂಚಾರ ಪೊಲೀಸರು ಹೊಸೂರು ರಸ್ತೆಯಲ್ಲಿ ಇಂತಹ ವಾಹನಗಳ ಸೈಲೆನ್ಸ ರ್ ಗಳನ್ನು ರೋಡ್ ರೋಲರ್ ಕೆಳಗಿಟ್ಟು ಉರುಳಿಸಿದ್ದಾರೆ.

ಸೈಲೆನ್ಸರ್ ಪೈಪ್ ಮಾರ್ಪಾಡು 80 ಡೆಸಿಬಲ್ ಮೀರಬಾರದು: ವಾಹನ ತಯಾರಿಸುವ ಕಂಪನಿಗಳು ಮೋಟಾರು ಕಾಯ್ದೆಯನುಸಾರ ವಾಹನಗಳ ಶಬ್ದವನ್ನು ನಿಗದಿಪಡಿಸಿರುತ್ತವೆ. ಆದರೆ ಕೆಲ ಮಾಲಕರು ವಾಹನಗಳ ಶಬ್ದ ಹೆಚ್ಚಿಸಿಕೊಳ್ಳುತ್ತಾರೆ. ಇದಕ್ಕಾಗಿ ಸೈಲೆನ್ಸರ್ ಪೈಪ್ ಗಳನ್ನು ಬದಲಾಯಿಸಿಕೊಳ್ಳುತ್ತಾರೆ. ಹೆಚ್ಚು ಶಬ್ದ ಹೊರ ಹೊಮ್ಮುವ ಸೈಲೆನ್ಸರ್ ಗಳನ್ನು ಅಳವಡಿಸಿಕೊಳ್ಳುತ್ತಾರೆ. ಇದರಿಂದ ಈ ವಾಹನಗಳು ರಸ್ತೆಗಿಳಿದ ವೇಳೆ ಭಾರೀ ಪ್ರಮಾಣದ ಸದ್ದು ಮಾಡಿಕೊಂಡು ಹೋಗುತ್ತವೆ.
ಬೈಕ್ ಅಥವಾ ಇನ್ಯಾವುದೇ ವಾಹನವಾಗಿರಲಿ ಶಬ್ದ ಮಾಲಿನ್ಯ ಉಂಟುಮಾಡುವಂತಿಲ್ಲ, ಮೋಟಾರು ವಾಹನ ಕಾಯ್ದೆಯನುಸಾರ ನಿಗದಿತ ಡೆಸಿಬಲ್ ಗಿಂತ ಹೆಚ್ಚು ಶಬ್ದ ಹೊರ ಹೊಮ್ಮುವ ವಾಹನಗಳ ಮಾಲಕರ ವಿರುದ್ಧ ಕ್ರಮ ಜರುಗಿಸಬಹುದಾಗಿದೆ.
ಹೀಗಾಗಿ ಆಡುಗೋಡಿ ಟ್ರಾಫಿಕ್ ಪೊಲೀಸರು ಇಂತಹ ವಾಹನಗಳಿಗೆ ಬ್ರೇಕ್ ಹಾಕಲು ಯೋಜನೆ ರೂಪಿಸಿದ್ದು ಕರ್ಕಶ ಶಬ್ದ ಮಾಡುವ ಸುಮಾರು ನೂರಕ್ಕಿಂತಲೂ ಹೆಚ್ಚು ವಾಹನಗಳ ಸೈಲೆನ್ಸರ್ ತೆಗೆದು ಅದರ ಮೇಲೆ ರೋಡ್ ರೋಲರ್ ಗಳನ್ನು ಉರುಳಿಸಿದ್ದಾರೆ.
ಇದರ ಮೂಲಕ ಇನ್ಯಾರೂ ಕೂಡ ಇಂತಹ ಸೈಲೆನ್ಸರ್ ಗಳನ್ನು ಬಳಕೆ ಮಾಡಬೇಡಿ, ಒಂದೊಮ್ಮೆ ಬಳಸಿದರೆ ನಿಮ್ಮ ಗಾಡಿಗಳಿಗೂ ಇಂತಹುದೇ ಗತಿ ಬಂದೀತು ಎಂದು ಎಚ್ಚರಿಕೆ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications