ಟೆಕ್ಕಿ ಕೊಲೆ ಪ್ರಕರಣ ಭೇದಿಸುವಾಗ ಪೊಲೀಸರಿಗೆ ಸಿಕ್ತು ಸ್ಫೋಟಕ ಮಾಹಿತಿ
ಬೆಂಗಳೂರು, ಫೆಬ್ರವರಿ 20: ಟೆಕ್ಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಷಡ್ಕ ಸೇರಿ ಒಂಭತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ನಾದಿನಿ ಓಲೈಸಿಕೊಳ್ಳಲು ಹೈದರಾಬಾದ್ ಮೂಲದ ಸಾಫ್ಟ್ವೇರ್ ಉದ್ಯೋಗಿ ಸತ್ಯ ಪ್ರಸಾದ್ ವೆಂಕಟರಂಗ ನುನೆ ಅಲಿಯಾಸ್ ಸತ್ಯ 15 ಲಕ್ಷಕ್ಕೆ ತನ್ನ ಷಡ್ಕ ಲಕ್ಷ್ಮಣ್ ಹತ್ಯೆ ಮಾಡಲು ಸುಪಾರಿ ಕೊಟ್ಟಿದ್ದ ಎನ್ನುವುದು ಬಹಿರಂಗಗೊಂಡಿದೆ.
ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿ ಎನ್ ದಿನೇಶ್, ಪತ್ನಿ ಸಯೀದಾ ಅಲಿಯಾಸ್ ಸವಿತಾ ಹಾಗೂ ಸುಪಾರ ಹಂತಕರಾದ ಹಳೇ ಬೈಯಪ್ಪನಹಳ್ಳಿ ನಿವಾಸಿ ಪ್ರಶಾಂತ್ , ಕಗ್ಗದಾಸಪುರದ ಪ್ರೇಮ್ ಕುಮಾರ್ , ಶಿಡ್ಲಘಟ್ಟ ತಾಲೂಕಿನ ಕಲ್ಯಾಪುರದ ಲೋಕೇಶ್ , ಕುಶಾಂತ್, ಸಂತೋಷ್ನನ್ನು ಬಂಧಿಸಲಾಗಿದೆ.

ಮಹದೇವಪುರ ರಿಂಗ್ ರಸ್ತೆಯಲ್ಲಿ ಫೆ. 3ರಂದು ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಲಕ್ಷ್ಮಣ್ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಇನ್ಸ್ಪೆಕ್ಟರ್ ಅಶ್ವತ್ಥ ನಾರಾಯಣಸ್ವಾಮಿ ತಂಡ ಪ್ರತ್ಯಕ್ಷದರ್ಶಿಗಳು ನೀಡಿದ್ದ ಹೇಳಿಕೆ ಆಧರಿಸಿ ಹಂತಕರನ್ನು ಬಂಧಿಸಿದೆ.
ಆಂಧ್ರಪ್ರದೇಶದ ನಲ್ಲೂರಿನ ಸತ್ಯ ಹಾಗೂ ಗುಂಟೂರಿನ ಲಕ್ಷ್ಮಣ್ ಸಾಫ್ಟ್ವೇರ್ ಉದ್ಯೋಗಿಗಳಾಗಿದ್ದು ಅಕ್ಕ-ತಂಗಿಯನ್ನು ವಿವಾಹವಾಗಿದ್ದರು. ಆತ ತನ್ನ ಪತ್ನಿ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ, ಮದುವೆ ನಂತರ ತನ್ನ ಕಿರಿಯ ನಾದಿನಿ ಮೇಲೆ ಮೋಹಿತನಾಗಿದ್ದ ಸತ್ಯ ಪ್ರೇಮ ನಿವೇದನೆಯನ್ನೂ ಮಾಡಿದ್ದ, ಇದಕ್ಕೆ ನಾದಿನಿ ಆಕ್ಷೇಪ ವ್ಯಕ್ತಪಡಿಸಿದ್ದಳು.
2016ರಲ್ಲಿ ನಾದಿನಿಯ ವಿವಾಹವೂ ಆಗಿತ್ತು.ಈಗ ಆರು ತಿಂಗಳ ಮಗುವಿದೆ. ಆದರೆ ಸತ್ಯನಿಗೆ ಮಾತ್ರ ನಾದಿನಿಯ ಸೆಳೆತ ಮಾತ್ರ ಕಡಿಮೆಯಾಗಿರಲಿಲ್ಲ. ಹೀಗಾಗಿ 15ಲಕ್ಷಕ್ಕೆ ಸುಮಾರಿ ನೀಡಿ ಆಕೆಯ ಗಂಡನನ್ನು ಹತ್ಯೆ ಮಾಡಿದ್ದಾನೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications