ಬೆಂಗಳೂರು ಪೊಲೀಸರಿಂದ ಜೆಡಿಎಸ್ ಅಭ್ಯರ್ಥಿಗೆ ಸೇರಿದ 64 ಲಕ್ಷ ಜಪ್ತಿ
ಬೆಂಗಳೂರು, ಏಪ್ರಿಲ್ 30: ಬೆಂಗಳೂರು ಗ್ರಾಮಾಂತರ ಪೊಲೀಸರು ಇಂದು ದೊಡ್ಡ ಮೊತ್ತದ ಹಣವನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ.
ದೇವನಹಳ್ಳಿ ಸಮೀಪ ಕಾರಿನಲ್ಲಿ 64 ಲಕ್ಷ ರೂಪಾಯಿಗಳನ್ನು ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಪೊಲೀಸರಿಗೆ ಈ ಹಣ ಸಿಕ್ಕಿದೆ.
ಇದು ದೇವನಹಳ್ಳಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿಯವರಿಗೆ ಸೇರಿದ ಹಣ ಎಂದು ಪೊಲೀಸರು ಹೇಳಿದ್ದಾರೆ.

ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸುವ ಕೆಲಸ ಭರದಿಂದ ಸಾಗುತ್ತಿದೆ. ಈ ಕಾರಣದಿಂದ ಈ ಹಣವೂ ಮತದಾರರಿಗೆ ಹಂಚಲು ಒಯ್ಯುತ್ತಿರಬಹುದು ಎಂದು ಅಂದಾಜಿಸಲಾಗಿದೆ.
ಇಂದು ಬೆಳಿಗ್ಗೆಯಷ್ಟೇ ಚಿಕ್ಕಮಗಳೂರಿನಲ್ಲಿ 50,000 ಕ್ಕೂ ಅಧಿಕ ಸೀರೆಗಳನ್ನು ಇದೇ ರೀತಿ ಪೊಲೀಸರು ವಶಕ್ಕೆ ಪಡೆದಿದ್ದರು.












Click it and Unblock the Notifications