ಬೆಂಗಳೂರು: ಜೆಪಿ ನಗರ, ಜಯನಗರದ 3 ಕಳ್ಳತನ ಪ್ರಕರಣಗಳಲ್ಲಿ ನೇಪಾಳದ 17 ಮಂದಿ ಬಂಧನ
ಬೆಂಗಳೂರು, ಮಾರ್ಚ್ 12: ಜೆಪಿ ನಗರ ಮತ್ತು ಜಯನಗರದ ಮೂರು ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಪೊಲೀಸರು ನೇಪಾಳ ಮೂಲದ 17 ಮಂದಿಯನ್ನು ಬಂಧಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್ ಮತ್ತು ಕೆಲಸದಾಳುಗಳಾಗಿ ಕೆಲಸ ಮಾಡುತ್ತಿದ್ದ ಮಹಿಳೆಯರು ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ.
ಈ ಬಂಧಿತ ಆರೋಪಿಗಳು ಇಬ್ಬರು ಉದ್ಯಮಿಗಳು ಮತ್ತು ನಿವೃತ್ತ ಅರಣ್ಯ ಅಧಿಕಾರಿಯೊಬ್ಬರ ಮನೆಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದರು. ಬಂಧಿತರಿಂದ 2 ಕೋಟಿ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ವಿದೇಶಿ ಕರೆನ್ಸಿಗಳು, ಒಂದು ಪಿಸ್ತೂಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಜೆಪಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಎರಡು ಘಟನೆಗಳು ವರದಿಯಾಗಿದ್ದು, ಇನ್ನೊಂದು ಕಳ್ಳತನ ಜಯನಗರದಲ್ಲಿ ನಡೆದಿದೆ.

ಜೆಪಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಕಿರಣ್ ಎಂಬ ರಿಯಲ್ ಎಸ್ಟೆಟ್ ಏಜೆಂಟ್ ಮತ್ತು ಉದ್ಯಮಿ ಬ್ರಿಜ್ ಭೂಷಣ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಕಿರಣ್ ಅವರ ಮನೆಯಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಜೆಪಿ ನಗರ ಪೊಲೀಸರು ನೇತ್ರಾ ಶಾಹಿ, ಲಕ್ಷ್ಮಿ ಸೆಜುವೆಲ್, ಗೋರಖ್ ಬಹದ್ದೂರ್ ಶಾಹಿ, ಭೀಮ್ ಬಹದ್ದೂರ್ ಶಾಹಿ, ಅಂಜಲಿ, ಅಬೇಶ್ ಶಾಹಿ, ಪ್ರಶಾಂತ್ ಮತ್ತು ಪ್ರಕಾಶ್ ಶಾಹಿ ಅವರನ್ನು ಬಂಧಿಸಿದ್ದಾರೆ.
ಕಿರಣ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ರಾತ್ರಿ ಮಲಗೆ ಬೆಳಗೆ ಏದ್ದ ಅವರಿಗೆ, ತಮ್ಮ ಮನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಗಳು ಪಿಸ್ತೂಲ್, ಎರಡು ಮ್ಯಾಗಜೀನ್ಗಳು, ಸುಮಾರು 1.7 ಕೆಜಿ ಚಿನ್ನ ಮತ್ತು ಸುಮಾರು 1.4 ಕೋಟಿ ಮೌಲ್ಯದ ಇತರ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿಸು ಬಂದಿದೆ. ಉದ್ಯಮಿ ಬ್ರಿಜ್ ಭೂಷಣ್ ಅವರ ಮನೆಯಲ್ಲಿ ಆರೋಪಿಯು ಆತನ ತಾಯಿಯನ್ನು ಬೆದರಿಸಿ 25 ಲಕ್ಷ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು.

ಜೆಪಿ ನಗರ ಪೊಲೀಸರು ಉದ್ಯಮಿ ಬ್ರಿಜ್ ಭೂಷಣ್ ಅವರ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಅರ್ಜುನ್ ಶಾಹಿ, ಪೂರನ್ ಶಾಹಿ, ಹರೀಶ್ ಶಾಹಿ ಮತ್ತು ರಮಿತ್ ಠಾಕೂರ್ ಅವರನ್ನು ಬಂಧಿಸಿದ್ದಾರೆ. ಜಯನಗರ ಪೊಲೀಸ್ ವ್ಯಾಪ್ತಿಯಲ್ಲಿ, ಆರೋಪಿಗಳು ನಿವೃತ್ತ ಅರಣ್ಯ ಅಧಿಕಾರಿ ಒಬೆದುಲ್ಲಾ ಖಾನ್ ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದರು. ಇದಕ್ಕೆ ಸಹಾಯ ಮಾಡಲು ನೇಪಾಳದಿಂದ ಬಂದಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
-
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಬೆಂಗಳೂರು: ನಾಯಿಗಳು ಬೊಗಳುತ್ತಿವೆ, ನಿದ್ರೆ ಬರುತ್ತಿಲ್ಲವೆಂದು 112ಕ್ಕೆ ಕರೆ ಮಾಡಿದ ಮಹಿಳೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ












Click it and Unblock the Notifications