ಎಚ್ಚರ! ಸ್ಯಾಟ್ ಲೈಟ್ ಬಸ್ ನಿಲ್ದಾಣದ ಕಳ್ಳರ ಬಗ್ಗೆ ಗಮನವಿರಲಿ!
ಬೆಂಗಳೂರು, ಮಾರ್ಚ್ 21: ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವ ಪ್ರಯಾಣಿಕರೇ ಎಚ್ಚರ! ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ಮೈಸೂರಿನತ್ತ ಪ್ರಯಾಣಿಸುವ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಬ್ಯಾಗ್ ಕದಿಯುವ ಕಳ್ಳ ಗ್ಯಾಂಗ್ ಸಕ್ರಿಯವಾಗಿದೆ. ಪ್ರಯಾಣಿಕರ ಬ್ಯಾಗ್ಗಳನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲ ಆತನಿಂದ ಬರೋಬ್ಬರಿ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಸಿದ್ಧಿಕ್ ಬಂಧಿತ ಆರೋಪಿ. ಈತ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಟಿಕಾಣಿ ಹೂಡುತ್ತಿದ್ದ. ಹಣ, ಚಿನ್ನಾಭರಣ ಇರುವ ಪ್ರಯಾಣಿಕರ ಚಲನವಲನ ಗಮನಿಸುತ್ತಿದ್ದ. ಸ್ವಲ್ಪ ಮೈ ಮರೆತರೆ ಬ್ಯಾಗ್ ಕದ್ದು ಪರಾರಿಯಾಗುತ್ತಿದ್ದ.

ಇತ್ತೀಚೆಗೆ ಸ್ಯಾಟ್ ಲೈಟ್ ಬಸ್ ನಿಲ್ದಾಣ ಸಮೀಪ ಸರಣಿ ಕಳ್ಳತನ ಪ್ರಕರಣ ವರದಿಯಾಗಿದ್ದವು. ಈ ಕುರಿತು ದಾಖಲಾದ ದೂರುಗಳನ್ನಾಧರಿಸಿ ಬ್ಯಾಟರಾಯನಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಸಿದ್ಧಿಕ್ನನ್ನು ಬಂಧಿಸಿದ್ದಾರೆ. ಬಂಧನದ ವೇಳೆ ಹಲವಾರು ಪ್ರಯಾಣಿಕರ ಬ್ಯಾಗ್ ಕದ್ದಿರುವ ಸಂಗತಿ ಬಾಯಿಬಿಟ್ಟಿದ್ದಾನೆ. ಇನ್ನು ಇದೇ ರೀತಿ ಬ್ಯಾಗ್ ಕದಿಯುವ ಕಳ್ಳರ ಗ್ಯಾಂಗ್ ಸಕ್ರಿಯವಾಗಿದೆ.

Recommended Video
ರಾತ್ರಿ ಪ್ರಯಾಣ ಎಚ್ಚರಿಕೆ: ಬೆಂಗಳೂರಿನಿಂದ ಮೈಸೂರಿಗೆ ಬಂದು ಹೋಗುವ ಬಸ್ಗಳು ಸ್ಯಾಟ್ ಲೈಟ್ ಬಸ್ ನಿಲ್ದಾಣದಲ್ಲಿರುತ್ತವೆ. ವಾರಂತ್ಯದ ದಿನಗಳಲ್ಲಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಾರೆ. ಅದರಲ್ಲೂ ರಾತ್ರಿ ಪ್ರಯಾಣ ಮಾಡುವ ಪ್ರಯಾಣಿಕರು ಬಸ್ನಲಲ್ಲಿ ನಿದ್ದೆ ಮಾಡಿ ಮೈ ಮರೆತರೆ ಅಂತವರ ಬ್ಯಾಗ್ಗಳನ್ನು ಪ್ರಯಾಣಿಕರ ಸೋಗಿನಂತೆ ತೆಗೆದುಕೊಂಡು ಪರಾರಿಯಾಗುತ್ತಾರೆ. ಇನ್ನು ಬಸ್ ನಿಲ್ದಾಣದ ಬಳಿ ಹಣ ತೋರಿಸುವುದು, ಆಭರಣ ಪ್ರದರ್ಶನ ಮಾಡಿಕೊಂಡು ಹೋಗುವ ಪ್ರಯಾಣಿಕರನ್ನೇ ಈ ಕಳ್ಳರು ಟಾರ್ಗೆಟ್ ಮಾಡುತ್ತಾರೆ. ಹೀಗಾಗಿ ಪ್ರಯಾಣ ವೇಳೆ ಹಣ ಮತ್ತು ಆಭರಣ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಸಲಹೆ ಮಾಡಿದ್ದಾರೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ












Click it and Unblock the Notifications