Loka Spandana: ವಾಟ್ಸಾಪ್ ಡಿಪಿಗೆ ಫೋಟೋ ಬದಲು ಲೋಕ ಸ್ಪಂದನ ಕ್ಯೂಆರ್ ಕೋಡ್ ಬಳಸಿ, ಪೊಲೀಸರಿಗೆ ಸೂಚನೆ!
"ನಿಮ್ಮ ಮಾತು, ನಮ್ಮ ನಡೆ" ಎಂಬ ಅಡಿಬರಹದೊಂದಿಗೆ 'ಲೋಕ ಸ್ಪಂದನ' ಹೆಸರಿನಡಿಯಲ್ಲಿ ಕ್ಯೂರ್ ಕೋಡ್ ಮಾಡಲಾಗಿದೆ.
ಬೆಂಗಳೂರು, ಫೆಬ್ರವರಿ. 23: ಸಿಲಿಕಾನ್ ಸಿಟಿ ಪೊಲೀಸರು ಜನಸ್ನೇಹಿಯಾಗಲು ಒಂದಲ್ಲ ಒಂದು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಇಂತಹದೆ ಒಂದು ಹೆಜ್ಜೆ ಮುಂದಿಟ್ಟಿರುವ ಆಗ್ನೇಯ ವಿಭಾಗವು ದೂರುದಾರರು ಸುಲಭವಾಗಿ ದೂರು ನೀಡುವಂತೆ ಮಾಡಲು ಕ್ಯೂಆರ್ ಕೋಡ್ ನೀಡಿದ್ದಾರೆ. ಈ ಮೂಲಕ ಸಾರ್ವಜನಿಕರು ಕ್ಯೂಆರ್ ಕೋಡ್ ಬಳಸಿ ವಿಷಯ ತಲುಪಿಸಬಹುದಾಗಿದೆ.
ಈ ಬಗ್ಗೆ ಡಿಸಿಪಿ ಸಿಕೆ ಬಾಬಾ ಅವರು, ಆಗ್ನೇಯ ವಿಭಾಗ ಪೊಲೀಸರು ತಮ್ಮ ಅಧಿಕೃತ ಸರ್ಕಾರಿ ಸಂಖ್ಯೆಯ ವಾಟ್ಸಾಪ್ ಡಿಪಿಗೆ ತಮ್ಮ ಫೋಟೋವನ್ನು ಹಾಕುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ. ಇದರ ಬದಲು ವಾಟ್ಸಾಪ್ ಡಿಪಿಗೆ ಲೋಕ ಸ್ಪಂದನ ಕ್ಯೂಆರ್ ಕೋಡ್ ಬಳಸಬೇಕು. ಮೊಬೈಲ್ಗೆ ಕರೆ ಬಂದರು ಅದನ್ನು ರಿಸೀವ್ ಮಾಡಿಲ್ಲ ಅಂದ್ರೆ ಸಮಸ್ಯೆಗೆ ಒಳಗಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ. ಬಾಬಾ " ಕೆಲಸದಲ್ಲಿ ಪಾರದರ್ಶಕತೆ ತರಲು ಮತ್ತು ಅಧಿಕಾರಿಗಳ ದಕ್ಷತೆಯನ್ನು ಸುಧಾರಿಸಲು ಈ ವ್ಯವಸ್ಥೆ ಮಾಡಲಾಗಿದೆ. ನಾವು ಜನರ ಟೀಕೆಗಳು ಮತ್ತು ದೂರುಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂಬ ಸಂದೇಶವನ್ನು ಸಮಾಜಕ್ಕೆ ಕಳುಹಿಸುವ ಆಲೋಚನೆಯೂ ಈ ಕ್ರಮದ ಹಿಂದೆ ಇದೆ" ಎಂದು ತಿಳಿಸಿದ್ದಾರೆ.
"ನಿಮ್ಮ ಮಾತು, ನಮ್ಮ ನಡೆ" ಎಂಬ ಅಡಿಬರಹದೊಂದಿಗೆ 'ಲೋಕ ಸ್ಪಂದನ' ಹೆಸರಿನಡಿಯಲ್ಲಿ ಕ್ಯೂರ್ ಕೋಡ್ ಮಾಡಲಾಗಿದೆ. ಇದರಲ್ಲಿ ಸಂದೇಶ ಕಳುಹಿಸಿದರೆ ನೇರವಾಗಿ ಡಿಸಿಪಿಗೆ ತಲುಪಲಿದೆ. ಬಳಕೆದಾರರು ಕೋಡ್ ಅನ್ನು ಸ್ಕ್ಯಾನ್ ಮಾಡಿ, ಪೊಲೀಸರು ತಮ್ಮ ಕರೆಯನ್ನು ಸ್ವೀಕರಿಸದಿದ್ದರೇ, ಫೋನ್ ಸ್ವೀಕರಿಸದ ಆಯ್ಕೆಯನ್ನು ಕ್ಲಿಕ್ ಮಾಡಿ ಅದು ಮುಂದಿನ ಕ್ರಮಕ್ಕಾಗಿ ಡಿಸಿಪಿಗೆ ತಲುಪಲಿದೆ.
ಜನರು ಕೋಡ್ ಅನ್ನು ಸ್ಕ್ಯಾನ್ ಮಾಡಬಹುದು ಮತ್ತು ದೂರು ನೀಡಬಹುದು, ಅದು ಡಿಸಿಪಿಗೆ ತಲುಪುತ್ತದೆ. ಮೊದಲು, ಜನರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಲು ಪೊಲೀಸ್ ಠಾಣೆಗಳಿಗೆ ಹೋಗಬೇಕಾಗಿತ್ತು, ಆದರೆ ಈಗ ಡಿಪಿಯಲ್ಲಿರುವ ಕೋಡ್ ಅನ್ನು ಸ್ಕಾನ್ ಮಾಡಿದರೂ ತಮ್ಮ ಕುಂದುಕೊರತೆಗಳು ಮತ್ತು ದೂರುಗಳನ್ನು ಬರೆಯಬಹುದು. ಜೊತೆಗೆ ತಮ್ಮ ವಿಭಾಗದ ಡಿಸಿಪಿಗೆ ನೇರವಾಗಿ ದೂರು ನೀಡಬಹುದು.
ಈ ವೇದಿಕೆಗಳಿಂದ ಬಂದಿರುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಸಿಕೆ ಬಾಬಾ ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications