Independence Day Security: ಶಂಕಿತ ಉಗ್ರರ ಬಂಧನ ಹಿನ್ನೆಲೆ ಸ್ವಾತಂತ್ರೋತ್ಸವ ಭದ್ರತೆಗಾಗಿ ಪೊಲೀಸರ ಉನ್ನತ ಸಭೆ, ಚರ್ಚೆ
ಬೆಂಗಳೂರು, ಜುಲೈ 21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಪೋಟಕ್ಕೆ ಭಾರಿ ಸಂಚು ರೂಪಿಸಿದ್ದರಿಂದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಸುಮಾರು 25 ದಿನಗಳ ಮೊದಲೇ ಸ್ವಾತಂತ್ರ್ಯೋತ್ಸವ (ಆಗಸ್ಟ್ 15) ಭದ್ರತೆಗಾಗಿ ಪೊಲೀಸ್ ಅಧಿಕಾರಿಗಳು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಹಲವೆಡೆ ಈಗಾಗಲೇ ಕಟ್ಟೆಚ್ಚರ ಸಹ ವಹಿಸಲಾಗಿದೆ.
ಇತ್ತೀಚೆಗೆ ಶಂಕಿತ ಉಗ್ರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ಸಜೀವ ಬಾಂಬ್, ಗಂಡು, ಪಿಸ್ತೂಲ್ಗಳು ಸೇರಿದಂತೆ ಕೆಲವು ಸ್ಪೋಟಕ ವಸ್ತು ಜಪ್ತಿ ಮಾಡಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ ರಕ್ಷಣೆ ವಿಚಾರದಲ್ಲಿ ಇದು ಸಾಕಷ್ಟು ಸುದ್ದಿ ಮಾಡಿತ್ತು. ಬಂಧಿತರ ವಿಚಾರಣೆ ನಡೆಯುತ್ತಿದ್ದು, ಮಹತ್ವದ ಮಾಹಿತಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಇದೆಲ್ಲ ಕಾರಣಗಳಿಂದಾಗಿ ರಾಜ್ಯದ ಜನರು ಹಾಗೂ ಸ್ವಾತಂತ್ರ್ಯೋತ್ಸವಕ್ಕೆ ಯಾವುದೇ ಅಡ್ಡಿಯಾಗದಂತೆ ನಡೆಸಲು ಹಿರಿಯ ಪೊಲೀಸರು ಸಭೆ ನಡೆಸಿದರು. ಸಾಮಾನ್ಯವಾಗಿ ಆಗಸ್ಟ್ 15 ಸಂಭ್ರಮಾಚರಣೆಗೆ ಹತ್ತು ದಿನ ಮೊದಲು ನಡೆಯುತ್ತಿದ್ದ ಪೊಲೀಸ್ ಸಭೆ ಈ ಭಾರಿ 25 ದಿನ ಮೊದಲು ನಡೆದಿದೆ. ಈ ವೇಳೆ ಭದ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.
ಸಭೆಯಲ್ಲಿ ನಗರ ಪೊಲೀಸ್ ಕಮಿಷನರ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಜಂಟಿ ಅಯುಕ್ತರು, ಡಿಸಿ, ಸಾರ್ವಜನಿಕ ಅಧಿಕಾರಿಗಳು ಸಮ್ಮುಖದಲ್ಲಿ ಸಭೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಡೆಯಲಿರುವ ಸ್ವಾತಂತ್ರೋತ್ಸವದ ಭದ್ರತೆ ಕುರಿತು ಚರ್ಚಿಸಿದ್ದಾರೆ. ಕೈಗೊಳ್ಳಬೇಕಾದ ಕ್ರಮಗಳ ಕುರಿತು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ ಎನ್ನಲಾಗಿದೆ.
ಸಜೀವ ಗ್ರೆನೇಡ್ ಪತ್ತೆ: ವಿವಿಧೆಡೆ ಕಟ್ಟೆಚ್ಚರ
ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಬಳಿಕ ದಾವಣಗೆರೆಯಲ್ಲೂ ಗುರುವಾರ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿದೆ. ಇದರಿಂದ ಬೆಂಗಳೂರು ಮಾತ್ರವಲ್ಲದೇ ಇಡಿ ರಾಜ್ಯದಲ್ಲಿ ಆತಂಕ ಮನೆ ಮಾಡಿದೆ. ಸುರಕ್ಷತೆಯ ಪ್ರಶ್ನೆ ಎದ್ದಿದೆ. ಅಲ್ಲದೆ ಬಂಧನ ಬಳಿಕ 4 ಸಜೀವ ಗ್ರೆನೆಡ್ ಪತ್ತೆಯಾಗಿದೆ. ಹೀಗಾಗಿ ಪೊಲೀಸರು ರೈಲು ನಿಲ್ದಾಣ, ಬಸ್ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಿದ್ದಾರೆ.

ಹುಬ್ಬಳ್ಳಿ ರೈಲು ನಿಲ್ದಾಣಗಳಲ್ಲಿ ತೀವ್ರ ನಿಗಾ ಇಡಲಾಗಿದೆ. ಅಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಬುಧವಾರವೇ ತಪಾಸಣೆ ಹೆಚ್ಚಿಸಲಾಗಿದೆ. ಶ್ವಾನದಳದಿಂದ ಪರಿಶೀಲಿಸಲಾಗಿದ್ದು, ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ, ಅನುಮಾನಾಸ್ಪದ ಬ್ಯಾಗ್ಗಳು ಕಂಡು ಬಂದರೆ ಕೂಡಲೇ ಪರಿಶೀಲಿಸಲಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications