ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಮಾಡಿದಾಗ ಸಿಕ್ಕಿದ್ದೇನು ಗೊತ್ತಾ?
ಬೆಂಗಳೂರು, ಜು. 10: ರಾಜಧಾನಿಯ ಪಾತಕ ಲೋಕವನ್ನು ಮುನ್ನಡೆಸುವ ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ಕೈದಿಗಳಿಗೆ ಶಾಕ್ ನೀಡಿದ್ದಾರೆ. ದಾಳಿ ವೇಳೆ ಸಿಕ್ಕಿದ ವಸ್ತುಗಳನ್ನು ನೋಡಿ ಸಿಸಿಬಿ ಪೊಲೀಸರೂ ಗಾಬರಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ರಾಜಾ ರೋಷವಾಗಿ ಗಾಂಜಾ ಹೊಡಯುತ್ತಿರುವ ಸಂಗತಿ ಹೊರ ಬಿದ್ದಿದೆ. ಮಾತ್ರವಲ್ಲ, ಕೈದಿಗಳ ಬಳಿ ನೂರಾರು ಚಾಕು ಹಾಗೂ ಮೊಬೈಲ್ , ಸಿಮ್ ಕಾರ್ಡ್ ಪತ್ತೆಯಾಗಿವೆ.
ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ಸಿಸಿಬಿಯ ಹತ್ತಕ್ಕೂ ಹೆಚ್ಚು ತಂಡ ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳ ಬಂಧೀಖಾನೆಗಳ ಮೇಲೆ ಬೆಳಗಿನ ಜಾವ ಐದು ಗಂಟೆಗೆ ದಾಳಿ ನಡೆಸಿದ್ದಾರೆ. ಶ್ವಾನದಳದೊಂದಿಗೆ ಸಿಸಿಬಿ ಪೊಲೀಸರು ಎಂಟ್ರಿ ಕೊಡುತ್ತಿದ್ದಂತೆ ನಿದ್ದೆಯಲ್ಲಿದ್ದ ಕೈದಿಗಳು ಶಾಕ್ ಆಗಿದ್ದಾರೆ.
ಕೆಲವು ಕೊಠಡಿಗಳಲ್ಲಿ ಕೈದಿಗಳು ಹೊಂದಿದ್ದ ನೂರಾರು ಚಾಕು, ಕತ್ತರಿ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು ಅವನ್ನು ವಶಪಡಿಸಿಕೊಂಡಿದ್ದಾರೆ. ಇನ್ನೂ ಕೆಲವರ ಕೋಣೆಗಳಲ್ಲಿ ಗಾಂಜಾ ಹಾಗೂ ಗಾಂಜಾ ಸೇವನೆ ಮಾಡುವ ಉಪಕರಣಗಳು ಪತ್ತೆಯಾಗಿವೆ. ಮೊಬೈಲ್ , ಸಿಮ್ ಕಾರ್ಡ್ ಜತೆಗೆ ಪೆನ್ ಡ್ರೈವ್ ಹಾಗೂ ಮೆಮೋರಿ ಕಾರ್ಡ್ ಗಳು ಪತ್ತೆಯಾಗಿವೆ.

ಬೆಂಗಳೂರಿನ ಭೂಗತ ಲೋಕದಲ್ಲಿ ನಡೆಯುವ ಕೊಲೆಗಳಿಗೆ ಸಂಚು ರೂಪಗೊಳ್ಳುವುದೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ. ಇತ್ತೀಚೆಗೆ ಬೆಂಗಳೂರಿನಲ್ಲಿ ರೌಡಿಗಳ ಕಾಳಗ, ಹತ್ಯೆಗಳ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆ ಮೇಲೆ ನಿಗಾ ವಹಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ವಿಭಾಗದ ಪೊಲೀಸರು ಏಕ ಕಾಲಕ್ಕೆ ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ರೌಡಿ ಮನೆಗಳ ಮೇಲೆ ದಾಳಿ ಮಾಡುವ ಮೊದಲೇ ಸಿಸಿಬಿ ಪೊಲೀಸರು ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿ ಕ್ರಿಮಿನಲ್ ಹಿನ್ನೆಲೆಯುಳ್ಳವರನ್ನು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.

ಪರಪ್ಪನ ಅಗ್ರಹಾರ ಕಾರಾಗೃಹಲ್ಲಿ ಕೈದಿಗಳಿಗೆ ಸಿಮ್ ಹಾಗೂ ಮೊಬೈಲ್ ಪೂರೈಕೆಯಲ್ಲಿ ಜೈಲು ಸಿಬ್ಬಂದಿ ಕೂಡ ಶಾಮೀಲಾಗಿರುವ ಅನುಮಾನ ವ್ಯಕ್ತವಾಗಿದೆ. ಜೈಲಿನಲ್ಲಿರುವ ಕೈದಿಗಳಿಗೆ ಗಾಂಜಾ ಹಾಗೂ ಮಾರಕಾಸ್ತ್ರಗಳು ಯಾವ ರೀತಿ ಪೂರೈಕೆ ಆದವು ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ.

Recommended Video
ಕಾರಾಗೃಹ ಸಿಬ್ಬಂದಿ ಶಾಮೀಲಾಗಿದ್ದರೆ, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಜೈಲಿನಲ್ಲಿ ಶೋಧ ಕಾರ್ಯ ಇನ್ನೂ ಮುಂದುವರೆದಿದೆ. ಖೈದಿಗಳು ಇಂಟರ್ ನೆಟ್ ಹಾಗೂ ಸ್ಮಾರ್ಟ್ ಪೋನ್ ಬಳಕೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸಿಕ್ಕಿರುವ ಸಿಮ್ ಕಾರ್ಡ್ ಗಳಿಂದ ಕರೆ ಮಾಡಿರುವ, ಅವರ ಜತೆ ಸಂಪರ್ಕಿಸಿರುವ ವ್ಯಕ್ತಿಗಳ ವಿವರಗಳನ್ನು ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದು ಸಿಸಿಬಿ ಅಧಿಕಾರಿಯೊಬ್ಬರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications