ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಚಿತರಿಂದಲೇ ಅಪಹರಣವಾಗಿದ್ದ ಮಗುವನ್ನು ರಕ್ಷಿಸಿದ ಪೊಲೀಸರು

|
Google Oneindia Kannada News

ಬೆಂಗಳೂರು, ಜನವರಿ 19: ಅಪಹರಣವಾಗಿದ್ದ ಮಗುವನ್ನು ರಕ್ಷಿಸಿ ಪೊಲೀಸರು ಪೋಷಕರಿಗೆ ಸುರಕ್ಷಿತವಾಗಿ ಒಪ್ಪಿಸಿದ್ದಾರೆ. ಮಲ್ಲತ್ತಹಳ್ಳಿಯಲ್ಲ ವಾಸವಿರುವ ಚಂದನ್ ಮತ್ತು ರಾಣಿ ದಂಪತಿಯ ಪುತ್ರಿ ಅರ್ನಭಿ ಕುಮಾರಿ ಸಿಂಗ್ ನನ್ನು ಪೊಲೀಸರು ರಕ್ಷಿಸಿದ್ದಾರೆ.

ಬೆಂಗಳೂರಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದ ತಾಯಿ-ಮಗಳು ಕಿಡ್ನ್ಯಾಪ್ ಬೆಂಗಳೂರಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದ ತಾಯಿ-ಮಗಳು ಕಿಡ್ನ್ಯಾಪ್

ಪರಿಚಿತರೇ ಅಪಹರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರ ಭಾರತ ಮೂಲದ ದಂಪತಿ ತಮ್ಮ 11 ತಿಂಗಳ ಮಗುವಿನೊಂದಿಗೆ ಬಾಡಿಗೆಮನೆಯಲ್ಲಿ ವಾಸವಿದ್ದರು. ರಾಣಿ ಅವರಿಗೆ ನೇಹಾ ಎಂಬುವವರ ಮೂಲಕ ಕುಮಾರ್ ಎಂಬಾತ ಪರಿಚಯವಾಗಿದ್ದ, ಆಗಾಗ ಮನೆಗೆ ಬಂದು ಹೋಗುತ್ತಿದ್ದ.

ಸಾಲ ವಾಪಸ್ ನೀಡದ್ದಕ್ಕೆ ಸ್ನೇಹಿತನ ಹೆಂಡತಿಯನ್ನೇ ಮದುವೆಯಾದ ಭೂಪ ಸಾಲ ವಾಪಸ್ ನೀಡದ್ದಕ್ಕೆ ಸ್ನೇಹಿತನ ಹೆಂಡತಿಯನ್ನೇ ಮದುವೆಯಾದ ಭೂಪ

ಒಮ್ಮೆ ನಿಮ್ಮ ಮಗಳನ್ನು ನಾನು ಸಾಕುತ್ತೇನೆ ನನಗೆ ಕೊಡಿ ಎಂದು ಕೇಳಿದ್ದ, ಅದಕ್ಕೆ ದಂಪತಿ ನಿರಾಕರಿಸಿದ್ದರು.ಆದರೆ ಜನವರಿ 16ರಂದು ಚಂದನ್ ದಂಪತಿ ಬೇರೆ ಮನೆಗೆ ಶಿಫ್ಟ್ ಆಗುತ್ತಿದ್ದರು, ಅದಕ್ಕೆ ಕುಮಾರ್ ನೆರವನ್ನೂ ಕೂಡ ಕೇಳಿದ್ದರು, ನೆರವಿಗೆಂದು ಇಬ್ಬರನ್ನು ಕುಮಾರ್ ಕಳುಹಿಸಿದ್ದ ಶಿಫ್ಟ್ ಮಾಡುವ ವೇಳೆ ಮಗುವನ್ನು ಮನೆಯಲ್ಲಿ ಮಲಗಿಸಿದ್ದರು.

Police rescued kidnapped child

ರಾತ್ರಿ ಯಾರೂ ಇಲ್ಲದ ವೇಳೆ ನೋಡಿಕೊಂಡು ಮಗುವನ್ನು ಎತ್ತಿಕೊಂಡು ಕುಮಾರ್ ಪರಾರಿಯಾಗಿದ್ದ. ಕೆಲ ಹೊತ್ತಿನ ಬಳಿಕ ಮಗು ನಾಪತ್ತೆಯಾಗಿರುವುದು ಗೊತ್ತಾಗಿದೆ. ಬಳಿಕ ಅಕ್ಕಪಕ್ಕದ ಮನೆಯವರ ಬಳಿ ವಿಚಾರಿಸಿದಾಗ ಯಾರೋ ಇಬ್ಬರು ಮಗುವನ್ನು ಎತ್ತಿಕೊಂಡು ಹೋಗಿದ್ದು ಗೊತ್ತಾಗಿದೆ. ಬಳಿಕ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಕುಮಾರ್‌ನಿಂದ ಮಗುವನ್ನು ರಕ್ಷಿಸಿ ತಾಯಿಯ ಮಡಿಲಿಗೆ ಸೇರಿಸಿದ್ದಾರೆ.

English summary
Jnanabharathi police rescued a child from kidnaper. They have arrested a relative of that child in the case. Police rescued kidnapped child, ಪರಿಚಿತರಿಂದಲೇ ಅಪಹರಣವಾಗಿದ್ದ ಮಗುವನ್ನು ರಕ್ಷಿಸಿದ ಪೊಲೀಸರು
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X