ನಲಪಾಡ್ ಪ್ರಕರಣ: ತಲೆಮರೆಸಿಕೊಂಡ ಆರೋಪಿಗಾಗಿ ಹುಡುಕಾಟ
ಬೆಂಗಳೂರು, ಮಾರ್ಚ್ 07: ಮೊಹಮ್ಮದ್ ನಲಪಾಡ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿ ಶ್ರೀಕೃಷ್ಣ ಅವರಿಗಾಗಿ ಪೊಲೀಸರು ಲುಕೌಟ್ ನೊಟೀಸ್ ಜಾರಿ ಮಾಡಿದ್ದಾರೆ.
ವಿದ್ವತ್ ಮೇಲೆ ಹಲ್ಲೆ ಸಂಬಂಧ ಮೊಹಮ್ಮದ್ ನಲಪಾಡ್ ಸೇರಿ 8 ಮಂದಿಯ ಮೇಲೆ ಎಫ್ಐಆರ್ ದಾಖಲಾಗಿತ್ತು, ಆದರೆ ಏಳು ಜನ ಮಾತ್ರ ಪೊಲೀಸರಿಗೆ ಶರಣಾಗಿದ್ದು, ಮತ್ತೊಬ್ಬ ಆರೋಪಿ ಶ್ರೀಕೃಷ್ಣ ತಲೆಮರೆಸಿಕೊಂಡಿದ್ದಾನೆ ಪೊಲೀಸರಿಗೆ ಇನ್ನೂ ಈತನ ಸುಳಿವು ಪತ್ತೆ ಆಗಿಲ್ಲ. ಮೊಹಮ್ಮದ್ ನಲಪಾಡ್ ಜೊತೆಗೆ ಆತನ ಸಹಚರರಾದ ಅರುಣ್ ಬಾಬು, ಮಂಜುನಾಥ, ಅಶ್ರಪ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಅವರುಗಳು ಪೊಲೀಸರಿಗೆ ಶರಣಾಗಿದ್ದರು.
ಶ್ರೀಕೃಷ್ಣ ಮೊಬೈಲ್, ಕಂಪ್ಯೂಟರ್ ಬಳಸುವುದರಲ್ಲಿ ಪರಿಣಿತನಾಗಿದ್ದು, ಹ್ಯಾಕಿಂಗ್ ಕಲೆ ಕೂಡ ತಿಳಿದವನಾಗಿದ್ದಾನೆ ಎನ್ನಲಾಗಿದೆ. ಈತ 2014ರಿಂದಲೂ ಮೊಬೈಲ್ ಬಳಸುತ್ತಿಲ್ಲವಾದ್ದರಿಂದ ಈತನ ಸುಳಿವು ಸಿಗುವುದು ಕಷ್ಟಕರವಾಗಿದೆ ಎನ್ನಲಾಗಿದೆ. ಈತ ವಿದೇಶಕ್ಕೆ ಹಾರಿರುವ ಶಂಕೆ ಇದ್ದು, ಈತನ ಮೇಲೆ ಲುಕ್ಔಟ್ ನೊಟೀಸ್ ಜಾರಿ ಮಾಡಲಾಗಿದೆ.

ಇಂದು ನಲಪಾಡ್ ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯಲಿದ್ದು, ಹಿರಿಯ ವಕೀಲ C.V.ನಾಗೇಶ್ ಅವರು ನಲಪಾಡ್ ಪರ ವಾದ ಮಂಡಿಸಲಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications