ವ್ಯಾಪಾರಿಯಿಂದ 37 ಲಕ್ಷ ದರೋಡೆ : ಪ್ರಮುಖ ಆರೋಪಿ ಸೆರೆ
ಬೆಂಗಳೂರು, ನವೆಂಬರ್ 19: ವ್ಯಾಪಾರಿಗೆ ಚಾಕು ತೋರಿಸಿ 37 ಲಕ್ಷ ರೂ ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಕೆ.ಅರ್. ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೆ.ಜೆ.ನಗರ ನಿವಾಸಿ ಆಸ್ಲಂಪಾಷಾ ಬಂಧಿತ ಆರೋಪಿ. ಈತನಿಂದ 30 ಲಕ್ಷ ರೂ. ನಗದು, ಹೋಂಡಾ ಆಕ್ಟೀವಾ ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.
ಮಾಮೂಲ್ ಪೇಟೆಯ ನಿವಾಸಿ, ಬಟ್ಟೆ ಅಂಗಡಿ ಮಾಲೀಕರು ಹಣ ದೋಚಿದ್ದ ದುಷ್ಕರ್ಮಿಗಳ ವಿರುದ್ಧ ದೂರು ನೀಡಿದ್ದರು. ಬಟ್ಡೆ ಖರೀದಿಸಿದ್ದ ಬಾಕಿ 37. 80 ಲಕ್ಷ ನಗದು ಹಣವನ್ನು ಮಾಮೂಲ್ ಪೇಟೆಯ ಲಾಲ್ ಬಿಲ್ಡಿಂಗ್ ನಲ್ಲಿರುವ ನಾಸಿರ್ ಆಲಿಖಾನ್ ಅವರಿಗೆ ನೀಡಲು ತೆರಳಿದ್ದರು.

ತನ್ನ ಅಂಗಡಿಯಲ್ಲಿ ಕೆಲಸ ಮಾಡುವ ಸತ್ತರ್ ಸಿಂಗ್ ಎಂಬುವರ ಜತೆ ಆಕ್ಟೀವಾ ವಾಹನದಲ್ಲಿ ಹಣ ತೆಗೆದು ಕೊಂಡು ಹೋಗುವಾಗ ಯಮಹಾ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಾಡು ತೋರಿಸಿ ಹೆದರಿಸಿದ್ದಾರೆ. ಅದೇ ವೇಳೆಗೆ ಮತ್ತಿಬ್ಬರು ಸೇರಿ ನಾಲ್ವರು ಹೆದರಿಸಿ 37 ಲಕ್ಷ ರೂ. ನಗದು ಹಣ ಕಸಿದುಕೊಂಡು ಪರಾರಿಗಿದ್ದರು.
ಹಣ ಕಳೆದುಕೊಂಡಿದ್ದ ಬಟ್ಟೆ ಅಂಗಡಿ ಮಾಲೀಕ ಮಾರ್ಕೆಟ್ ಠಾಣೆಗೆ ದೂರು ನೀಡಿದ್ದರು. ಪೊಲೀಸ್ ಇನ್ ಸ್ಪೆಕ್ಟರ್ ಬಿ.ಜಿ. ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿ ಹಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ. ಬಟ್ಟೆ ಅಂಗಡಿ ಮಾಲೀಕರು ಹಣ ಜೋಡಿಸಿ ನಾಸಿರ್ ಗೆ ಕೊಡುವ ಸಂಗತಿ ತಿಳಿದು ಕೊಂಡೇ ಈ ಕೃತ್ಯ ಎಸಗಿದ್ದು, ಈ ಕುರಿತು ತನಿಖೆ ನಡೆಸುತ್ತಿದ್ದಾರೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications