Get Updates
Get notified of breaking news, exclusive insights, and must-see stories!

Nimhans: ನಿಮ್ಹಾನ್ಸ್‌ಗೆ ಪಾಲಿಟ್ರಾಮಾ ಕೇಂದ್ರ: ಕೇಂದ್ರದಿಂದ ಭರ್ಜರಿ ಗುಡ್‌ನ್ಯೂಸ್‌!

Nimhans: ನಿಮ್ಹಾನ್ಸ್‌ಗೆ ಸಂಬಂಧಿಸಿದಂತೆ ಕನ್ನಡಿಗರ ಬಹುದಿನಗಳ ಕನಸು ಈಗ ನನಸಾಗಿದೆ. ಈ ಸಂಬಂಧ ಸಂಸದ ಡಾ. ಸಿ ಎನ್ ಮಂಜುನಾಥ್ ಅವರು ಟ್ವೀಟ್‌ನ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ. ದೇಶದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ನಿಮ್ಹಾನ್ಸ್‌ ಸಹ ಒಂದಾಗಿದೆ. ಬೆಂಗಳೂರಿನಲ್ಲಿರುವ ಈ ಆಸ್ಪತ್ರೆಗೆ ದೇಶ - ವಿದೇಶಗಳಿಂದ ಜನ ಚಿಕಿತ್ಸೆಗೆ ಬರುತ್ತಿದ್ದಾರೆ. ಅಭಿವೃದ್ಧಿಯಾದಂತೆ ಈ ಆಸ್ಪತ್ರೆಯ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಇದೀಗ ಕನ್ನಡಿಗರ ಬಹುದಿನಗಳ ಕನಸು ಈಡೇರಿಸಿದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದು ಮಂಜುನಾಥ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ "Poly trauma centre" ಸ್ಥಾಪನೆಯ ಪ್ರಸ್ತಾವನೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಂಜುನಾಥ್ ಅವರು, ವೈಯುಕ್ತಿಕವಾಗಿ ಕೇಂದ್ರ ಸರ್ಕಾರದ ಈ ನಿರ್ಧಾರ ಅತ್ಯಂತ ಸಂತಸ ತರಿಸಿದೆ ಎಂದಿದ್ದಾರೆ.

Polytrauma Center for NIMHANS Great good news from the Center

ಈ ಮೂಲಕ ಅನೇಕ ವರ್ಷಗಳ ಕನ್ನಡಿಗರ ಬೇಡಿಕೆ ಈಡೇರಿದಂತಾಗಿದೆ. ಈ ಬಗ್ಗೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಹಣಕಾಸು ಸಚಿವರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರದ ಮೂಲಕ ಮತ್ತು ವೈಯುಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದೆ ಎಂದಿದ್ದಾರೆ.

ನಮ್ಮ ದೇಶದಲ್ಲಿ ಶೇ 15% ರಷ್ಟು ಸಾವುಗಳು ರಸ್ತೆ ಅಪಘಾತದಿಂದ ಸಂಭವಿಸುತ್ತಿವೆ ಮತ್ತು ಶೇ30ರಷ್ಟು ರಸ್ತೆ ಅಪಘಾತಗಳಲ್ಲಿ ಬಹುಗಾಯಗಳಿಗೆ( multiple injuries) ಒಳಗಾಗುತ್ತಾರೆ. ಈ ಹಿನ್ನಲೆ ಗಾಯಗೊಂಡವರಿಗೆ ಆದಷ್ಟು ತ್ವರಿತವಾಗಿ (golden hour) ಒಂದೇ ಸೂರಿನಡಿ ಚಿಕಿತ್ಸೆ ಒದಗಿಸುವ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕದ ಜನತೆಗೆ ವಿಶೇಷವಾಗಿ ಬೆಂಗಳೂರಿಗರಿಗೆ "Poly trauma centre" ಸ್ಥಾಪನೆ ಅತ್ಯಂತ ಸಹಕಾರಿಯಾಗಲಿದೆ. ಜಯಪ್ರಕಾಶ್ ನಾರಾಯಣ್ "Poly trauma centre" ನಂತರದಲ್ಲಿ ದೇಶದಲ್ಲಿಯೇ ಎರಡನೇ "Poly trauma centre" ಇದಾಗಲಿದೆ. ಇದರ ಜೊತೆಗೆ ಸ್ನಾತಕೋತ್ತರ ಪದವಿ ಘಟಕವನ್ನು ಸ್ಥಾಪಿಸುವುದರಿಂದ ಆಘಾತ ಚಿಕಿತ್ಸಾ ವಿಭಾಗದಲ್ಲಿ ತಜ್ಞರಿಗೆ ನುರಿತ ತರಬೇತಿ ನೀಡುವ ಮೂಲಕ ಅವರ ಸೇವೆಯನ್ನು ದೇಶಾದ್ಯಂತ ಬಳಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.

ನಮ್ಮೆಲ್ಲರ ಮನವಿಗೆ ಸ್ಪಂದಿಸಿ ಬೆಂಗಳೂರಿನಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಪದವಿ ಮತ್ತು 300 ಹಾಸಿಗೆ ಸಾಮರ್ಥ್ಯದ "Poly centre" ಸ್ಥಾಪನೆಯ ಪ್ರಸ್ತಾವನೆಗೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ ನಡ್ಡಾ ಅವರಿಗೆ ಹಾಗೂ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕರ್ನಾಟಕ ಜನತೆಯ ಪರವಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+