ಬೆಂಗಳೂರಿನಲ್ಲಿ ಜುಲೈ 28 & 29ರಂದು ತೇಜಸ್ವಿ ಸಾಂಸ್ಕೃತಿಕ ಹಬ್ಬ
ಬೆಂಗಳೂರು, ಜುಲೈ, 26: ಮೇರು ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ, ಛಾಯಾಗ್ರಹಣ, ವರ್ಣಚಿತ್ರಗಳು ಮತ್ತು ಅವರ ವಿಚಾರಧಾರೆಯನ್ನು ಒಳಗೊಂಡಿರುವ ಕೃತಿಗಳನ್ನು ಸೆಲೆಬ್ರೇಟ್ ಮಾಡುವ ಎರಡು ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಜುಲೈ 28 & 29ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಈ ಆಚರಣೆಯ ಸಂದರ್ಭದಲ್ಲಿ ಮಾಧ್ಯಮ ಅನೇಕ ನಿರ್ಮಾಣದ ಪೂರ್ಣಚಂದ್ರ ತೇಜಸ್ವಿಯವರ ಜೀವನ ಮತ್ತು ಕೃತಿಗಳ ಕುರಿತು ಬೃಹತ್ ಸಾಕ್ಷ್ಯಚಿತ್ರ ಸರಣಿ "ತೇಜಸ್ವಿ ಎಂಬ ವಿಸ್ಮಯ" ಲೋಕಾರ್ಪಣೆಯಾಗಲಿದೆ. ಅದರೊಂದಿಗೆ ಎಂಎಂ ಪಬ್ಲಿಕೇಷನ್ಸ್ ಅವರು ಪ್ರಕಟಿಸಿರುವ 14 ಸಂಪುಟಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಸಮಗ್ರ ಕೃತಿಜಗತ್ತು ಸಂಪೂರ್ಣ ಕೃತಿಗಳನ್ನು ಬಿಡುಗಡೆ ಮಾಡಲಾಗುವುದು.

ಈ ಆಚರಣೆಯ ಭಾಗವಾಗಿ ಅನೇಕ ಚರ್ಚೆ, ಸಂವಾದ, ಘೋಷ್ಠಿಗಳು ನಡೆಯಲಿದ್ದು, ಉನ್ನತ ಸಂಶೋಧನಾ ವಿದ್ವಾಂಸರು, ಪ್ರತಿಷ್ಠಿತ ಶಿಕ್ಷಣ ತಜ್ಞರು, ತೇಜಸ್ವಿ ಅವರ ಕುಟುಂಬ ಸದಸ್ಯರು ಮತ್ತು ಅವರ ಅನುಯಾಯಿಗಳು ಭಾಗವಹಿಸಲಿದ್ದಾರೆ.
ಸಾಹಿತಿ ತೇಜಸ್ವಿ ಅವರಿಗೆ ಅತ್ಯಾಪ್ತರಾಗಿದ್ದ ಪ್ರೊ ಕೆ.ಸ. ಶಿವಾರೆಡ್ಡಿ ಅವರು ಸಂಪಾದಿಸಿರುವ ಕೃತಿ ಇದಾಗಿದೆ. ಜುಲೈ 29ರಂದು ಸೋಮವಾರ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 'ಸಮಗ್ರ ಕೃತಿ ಜಗತ್ತ"ನ್ನು ಲೋಕಾರ್ಪಣೆ ಮಾಡಲಿದ್ದಾರೆ.
ತೇಜಸ್ವಿ ಹಬ್ಬದಲ್ಲಿ 'ಮಾಧ್ಯಮ ಅನೇಕ' ಸಂಸ್ಥೆ ನಿರ್ಮಾಣದ 'ತೇಜಸ್ವಿ ಎಂಬ ವಿಸ್ಮಯ' ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆಯಾಗಲಿದೆ. 28ನೇ ಜುಲೈ 2024ರಂದು ಭಾನುವಾರ ಬೆಳಗ್ಗೆ 10:00 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂನ ಹಾಲಿ ಶಾಸಕರಾದ ಡಾ ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸಾಕ್ಷ್ಯಚಿತ್ರ ಸರಣಿ ಲೋಕಾರ್ಪಣೆ ಮಾಡಲಿದ್ದಾರೆ. 29 ಜುಲೈ 2024ರಂದು ಸೋಮವಾರ ಮಧ್ಯಾಹ್ನ 12:00-1:30ರವರೆಗೆ ಸಾಕ್ಷ್ಯಚಿತ್ರ ಸರಣಿಯನ್ನು ಪ್ರದರ್ಶಿಸಲಾಗುತ್ತದೆ.
ಎರಡು ದಿನಗಳ ಹಬ್ಬದಲ್ಲಿ 'ಪೂರ್ಣಚಂದ್ರ' ಚಿತ್ರ ಸಂಪುಟ ಬಿಡುಗಡೆ, ಅಣ್ಣನ ನೆನಪು ಸಾಕ್ಷ್ಯ ನಾಟಕ ಸೇರಿದಂತೆ ತೇಜಸ್ವಿ ಸಾಹಿತ್ಯ, ಅವರ ರಾಜಕೀಯ ಮತ್ತು ಸಾಮಾಜಿಕ ಚಿಂತನೆ ಕುರಿತಂತೆ ಗೋಷ್ಠಿಗಳು ನಡೆಯಲಿವೆ. ಇದೇ ವೇಳೆ ಪಕ್ಷಿಗಳ ಅಂಚೆಚೀಟಿ ಪ್ರದರ್ಶನ, ತೇಜಸ್ವಿ ಪುಸ್ತಕಗಳ ಪ್ರದರ್ಶನ, ತೇಜಸ್ವಿ ಅವರು ಸೆರೆಹಿಡಿದ ಫೋಟೋಗಳ ಪ್ರದರ್ಶನ ನಡೆಯಲಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications